ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ ದಾರುಣ್ಯ ಘಟನೆ ಮಲೆನಾಡಿನ ಯಡೂರು ಗ್ರಾಪಂ ವ್ಯಾಪ್ತಿಯ ಸುಳುಕೋಡು ಗ್ರಾಮದಲ್ಲಿ ನಡೆದಿದೆ.
ಜಾನುವಾರು ನುಗ್ಗಿದೆ ಎಂದು ತೋಟದ ಮಾಲೀಕನೊಬ್ಬ ನಮ್ಮ ಜಾನುವಾರಿಗೆ ವಿಷ ಹಾಕಿದ್ದಾರೆ ಎಂಬುದಾಗಿ ಜಾನುವಾರು ಮಾಲೀಕರಾದ ಯಡೂರು ಗ್ರಾಮದ ಲತಾ ಎಂಬುವವರು ಆರೋಪಿಸಿದ್ದಾರೆ.
ಈಗಾಗಲೇ ನಾಲ್ಕೈದು ದನಗಳು ಸಾವನ್ನಪ್ಪಿದ್ದು ಕೆಲವು 2ದಿನಗಳಿಂದ ವಿಷ ಉಂಡು ಸಂಕಟ ಪಡುತ್ತಿದ್ದಾವೆ, ಮೂಕ ಪ್ರಾಣಿಗಳ ನರಕಯಾತನೆಯನ್ನು ನೋಡಲು ಸಾಧ್ಯವಿಲ್ಲ ಎಂಬುದಾಗಿ ಹಸುಗಳನ್ನು ಸಾಕಿದ ಮನೆಯವರು ಸಂಕಟದಿಂದ ತಿಳಿಸಿದ್ದಾರೆ.
ಇತ್ತೀಚಿನ ನಾಲ್ಖೈದು ತಿಂಗಳುಗಳಲ್ಲಿ ಸುಮಾರು 20 ಕ್ಕೂ ಹೆಚ್ಚು ಜಾನುವಾರುಗಳಿಗೆ ವಿಷವುಣಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.
ಅದೇನೇ ಆಗಲಿ ಜಾನುವಾರುಗಳು ತೋಟದೊಳಗೆ ಹೋಗಬಾರದು ಎಂದರೆ ತೋಟದ ಮಾಲೀಕರು ತಮ್ಮ ತೋಟಕ್ಕೆ ಸೂಕ್ತವಾದ ಬೇಲಿ ಭದ್ರತೆ ಮಾಡಿಕೊಳ್ಳಬೇಕು ಅವುಗಳನ್ನು ಬಿಟ್ಟು ಈ ರೀತಿ ಜಾನುವಾರುಗಳು ತೋಟಕ್ಕೆ ನುಗ್ಗಿದೆ ಎಂದು ಮೂಕ ಪ್ರಾಣಿಗಳಿಗೆ ವಿಷ ಉಣಿಸಿರುವುದು ಹೇಯಕೃತ್ಯ
ತೋಟದ ಮಾಲೀಕ ವಿಷ ಉಣಿಸಿದ್ದಾರೋ ಇಲ್ಲವೋ ಗೊತ್ತಿಲ್ಲ!?
ಆದರೆ ಜಾನುವಾರುಗಳ ಮಾಲೀಕರು ಇವರ ಹೆಸರನ್ನು ಹೇಳುತ್ತಿದ್ದಾರೆ.
ಸ್ಥಳೀಯರು ಈವರೆಗೂ ದೂರು ನೀಡಿಲ್ಲ ಕಾರಣ ಈ ವ್ಯಕ್ತಿ ಪ್ರಭಾವಿಯಾಗಿದ್ದು ಮುಂದೆ ತೊಂದರೆ ಕೊಡುತ್ತಾರೆ ಎಂಬುವ ಭಯದಿಂದ ಹಿಂದೆ ಸರಿದಿದ್ದಾರೆ.
ಆದ್ದರಿಂದ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ದೂರು ದಾಖಲು ಮಾಡಿಕೊಂಡು ಈ ರೀತಿ ಮೂಕ ಪ್ರಾಣಿಗಳಿಗೆ ವಿಷ ಉಣಿಸಿರುವ ದುರುಳರು ಮಾನವೀಯತೆಯ ಇಲ್ಲದಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್