ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರಿಂದ ದಿಡೀರ್ ಪ್ರತಿಭಟನೆ :

ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಯಲದಲ್ಲಿ ಮೂಲಭೂತ ಸೌಕರ್ಯದ ಕೊರತೆಯನ್ನ ವಿರೋಧಿಸಿ ಹಾಗೂ ಮೊನ್ನೆ ವಿದ್ಯಾರ್ಥಿನಿಯರಿಗೆ ಫುಡ್ ಪಾಯಸನ್ ಆಗಿರುವುದಕ್ಕೆ ಇಲ್ಲಿನ ಅವ್ಯವಸ್ಥೆಯೇ ಕಾರಣವೆಂದು ಆಗ್ರಹಿಸಿ ನೂರಾರು ವಿದ್ಯಾರ್ಥಿನಿಯರು ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಪ್ರತಿಭಟಜನೆ ನಡೆಸಿದರು. ಶೌಚಾಲಯ ಸ್ವಚ್ಚವಿಲ್ಲದೇ ಇರುವುದು, ಒಂದು ಕೊಠಡಿಯಲ್ಲಿ 11 ಜನ ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳಲು ಅವಕಾಶ ನೀಡಿರುವುದು. ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದು ಈ ದಿಡೀರ್‌ಪ್ರತಿಭಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಪ್ರತಿಭಟನೆಯಲ್ಲಿ ಸಹ್ಯಾದ್ರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಅವ್ಯವಸ್ಥೆಯನ್ನ…

Read More

ಸಾಗರ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ : ಲಾರಿ ಕದ್ದು ಪರಾರಿಯಾದವರು 10 ದಿನಗಳಲ್ಲೇ ಅರೆಸ್ಟ್…!

ಸಾಗರ: ಅಂದಾಜು 7.50 ಲಕ್ಷ ಮೌಲ್ಯದ ಲಾರಿಯನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಪ್ರಕರಣ ದಾಖಲಾದ ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಲು ಯಶಸ್ವಿಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ನಿವಾಸಿ ಬಿ.ಕೆ.ಕರಿಬಸಪ್ಪ ಅಲಿಯಾಸ್ ಕರಿಯ(32) ಎಂಬಾತನೇ  ಬಂಧಿತ ಆರೋಪಿ. ಈತನ ಬಳಿಯಿಂದ ಕದ್ದಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ವಿವರ: ಆನಂದಪುರ ದಾಸಕೊಪ್ಪ ಗ್ರಾಮದ ವಾಸಿಯೊಬ್ಬರ ಲಾರಿಯನ್ನು ಮಾರ್ಚ್ 3ರಂದು ರಾತ್ರಿ ಹೊತ್ತಲ್ಲಿ ಕಳ್ಳತನ ಮಾಡಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಾಗರ ಗ್ರಾಮಾಂತರ ಠಾಣೆಯ ವೇರಿ ಸ್ಮಾರ್ಟ್…

Read More

ಶಿವಮೊಗ್ಗದ ಮೊದಲ ಎಫ್.ಎಂ ರೇಡಿಯೋ ಆರಂಭ; ಉತ್ತಮ ಸ್ಪಂದನೆ

ದಶಕದಿಂದ ಮಲೆನಾಡಿಗೊಂದು ಎಫ್.ಎಂ. ರೇಡಿಯೋ ಬೇಕು ಎಂಬ ಬೇಡಿಕೆ ಇತ್ತು. ಜನರ ಬೇಡಿಕೆ ತಣಿಸುವ ಸಲುವಾಗಿ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಕೊಡುಗೆಯಾಗಿ ಸಿಕ್ಕಿದೆ. ಸದ್ಯ ಎಫ್.ಎಂ. ರೇಡಿಯೋ ಟೆಸ್ಟಿಂಗ್ ಹಂತದಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಮಾಡುವ ಸಾಧ್ಯತೆ ಇದೆ. ಕೊಡಚಾದ್ರಿ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಸೊಸೈಟಿ ಎಂಬ ಸರ್ಕಾರೇತರ ಸಂಸ್ಥೆ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಆರಂಭಿಸಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಈ ರೇಡಿಯೋಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈಗ ಬೆಳಗ್ಗೆ 9…

Read More

ಮಗನಿಗಾಗಿ ಮತ್ತೆ ಜೊತೆಯಾದ ತಂದೆ-ತಾಯಿ

ವಿಚ್ಚೇದನ ಪಡೆಯಲು ಮುಂದಾಗಿದ್ದ ತಂದೆ ಮತ್ತು ತಾಯಿಯನ್ನು ಅವರ 10ನೇ ತರಗತಿಯ ಮಗ ಒಂದು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗೆ ಜಿಲ್ಲೆ ಹೊಸನಗರ ತಾಲೂಕಿನ ಕಡೆಗದ್ದೆಯ ನಿವಾಸಿಗಳಾದ ಗಣೇಶಮೂರ್ತಿ ಮತ್ತು ಪೂರ್ಣಿಮಾ ದಂಪತಿ  17 ವರ್ಷಗಳ ಕಾಲ ಸುಖವಾಗಿ ಸಂಸಾರ ನಡೆಸಿದ್ದರು.ಸಣ್ಣದಾದ ಮನಸ್ತಾಪದಿಂದಾಗಿ ಮೂರು ವರ್ಷದ ಹಿಂದೆ ತವರು ಸೇರಿದ್ದ ಪೂರ್ಣಿಮಾ ಮರಳಿ ಗಂಡನ ಮನೆಗೆ ಬಂದಿರಲಿಲ್ಲ. ಕಳೆದ ಮೂರು ವರ್ಷಗಳಿಂದ ದೂರ ಇದ್ದ ದಂಪತಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇತ್ತ…

Read More

ಅಕಾಲಿಕ ಮರಣಕ್ಕೆ ತುತ್ತಾದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಪಟು : ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ 5ಲಕ್ಷ ಆರ್ಥಿಕ ನೆರವು

ರಿಪ್ಪನ್ ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ಭರತ್ ರಾಜ್ (ಬೆಳ್ಳಿ) ಎಂಬ ಬಾಲಕ 21-10-2021 ರಂದು ಹಾರಂಬಳ್ಳಿ ಮನೆಯ ಸಮೀಪ ಪ್ರಕೃತಿ ವಿಕೋಪದಲ್ಲಿ ಮೃತಪಟ್ಟಿದ್ದನು. ಇಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರು ಮೃತ ಭರತ್ ರಾಜ್ ರವರ ತಾಯಿ ಶ್ರೀಮತಿ ಲಕ್ಷ್ಮಿ ವಾಸುದೇವ ರವರಿಗೆ ಪ್ರಕೃತಿ ವಿಕೋಪ ನಿಧಿಯಿಂದ ಮಂಜೂರಾದ 5 ಲಕ್ಷ ರೂ ಗಳ ಪರಿಹಾರದ ಆದೇಶ ಪ್ರತಿಯನ್ನು ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಇಂದು…

Read More

ರಿಪ್ಪನ್ ಪೇಟೆ : ದಾಖಲೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ :

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ದಾಖಲೆಗಳಾದ ಪಹಣಿ, ಅಟ್ಲಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಸುರೇಶ್, ಲೇಖಪ್ಪ ಎಂಬುವವರ ಮನೆಗೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಶನಿವಾರ ಚಾಲನೆ ನೀಡಿ ಮಾತನಾಡಿ, ಇನ್ನೂ ಮುಂದೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕೆಲವು…

Read More

ಸಂಘದ ಬಾಕಿ ಹಣ ಕೇಳಲು ಹೋದ ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಸಂಘದ ಬಾಕಿ ಹಣ ಕೇಳಲು ಹೋದ ಸಂಘದ ಮಹಿಳೆಯರ ಮೇಲೆಯೇ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವ ಘಟನೆ ಕಮದೂರು ಗ್ರಾಮದಲ್ಲಿ ನಡೆದಿದೆ. ಕಮದೂರು ಗ್ರಾಮದ ಭಾಗಿರಥಮ್ಮ ಎಂಬುವವರು ಶ್ರೀ ರೇಣುಕಾಂಬ ಸಂಘ ಆಲುವಳ್ಳಿ ಯ ಸದಸ್ಯೆಯಾಗಿದ್ದು ಸಾಲ ಪಡೆದಿರುತ್ತಾರೆ.ಕಳೆದ ಹಲವಾರು ದಿನಗಳಿಂದ ಸಾಲ ಮರು ಪಾವತಿ ಮಾಡುತ್ತಿಲ್ಲವೆಂದು ಸಂಘದ ಎಲ್ಲಾ ಸದಸ್ಯರು ಅವರ ಮನೆಗೆ ಸಾಲ ವಸೂಲಿಗೆ ಹೋಗಿದ್ದಾರೆ.ಈ ಸಂಧರ್ಭದಲ್ಲಿ ಭಾಗಿರಥಮ್ಮ ರವರ ಮಗ ಸತೀಶ್ ಎಂಬುವವನು ಸಾಲ ವಸೂಲಿಗೆ ಹೋಗಿದ್ದ…

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರ ವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು

ರಿಪ್ಪನ್ ಪೇಟೆ : ಶ್ರೀ ನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿದ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸಿನ ಮಂತ್ರಿ ಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ  ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ  ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿರುವ ಕ್ರಮ ಶ್ಲಾಘನೀಯ.  ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ…

Read More

ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ರವರ ಹೆಸರಿಡಬೇಕೆಂದು ಜಿಲ್ಲೆಯ ಜನ ಪ್ರತಿನಿಧಿಗಳಿಂದ ಮುಖ್ಯಮಂತ್ರಿಗೆ ಮನವಿ…

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಬೇಕೆಂದು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳ ನೇತೃತ್ವದ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ, ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರನ್ನು ನಾಮಕರಣ ಮಾಡುವ ಕುರಿತು ಚರ್ಚೆ ಮಾಡಲಾಯಿತು.  ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಅರಗ ಜ್ಞಾನೆಂದ್ರ, ಸಂಸದ ಬಿ.ವೈ. ರಾಘವೇಂದ್ರ,…

Read More

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯಗಳಿಸಿದ ಹಿನ್ನಲೆ ಅನಾಥಶ್ರಮಕ್ಕೆ ಸಿಹಿ ಹಂಚಿ,ದಿನಸಿ ಸಾಮಾಗ್ರಿ ವಿತರಿಸಿ ವಿಜಯೋತ್ಸವ ಆಚರಿಸಿದ ಆಪ್ ಕಾರ್ಯಕರ್ತರು

ರಿಪ್ಪನ್‌ಪೇಟೆ: ಆರ್ಥಿಕ, ಸಾಮಾಜಿಕ, ಧಾರ್ಮಿಕ ಭಷ್ಟಾಚಾರ ನಿರ್ಮೂಲನೆ ಮಾಡುವುದರೊಂದಿಗೆ ಸರ್ವಸಮತೆಯ ರಾಷ್ಟ್ರ ನಿರ್ಮಾಣ ಮಾಡುವುದು ಅಮ್ಆದ್ಮಿ ಪಕ್ಷದ ಉದ್ದೇಶವಾಗಿದೆ ಎಂದು ಎಎಪಿ ಮುಖಂಡ ಹನೀಫ್ ಹೇಳಿದರು. ಸಮೀಪದ ಚಿಕ್ಕಜೇನಿ ಪದ್ಮಶ್ರೀ ಅನಾಥಾಶ್ರಮದಲ್ಲಿ ಶುಕ್ರವಾರ ಪಂಜಾಬ್ ರಾಜ್ಯದಲ್ಲಿ ಆಮ್ಆದ್ಮಿ ಪಕ್ಷ ಅಭೂತಪೂರ್ವ ಜಯಗಳಿಸಿರುವ ಹಿನ್ನೆಲೆಯಲ್ಲಿ ಅನಾಥರಿಗೆ ಸಿಹಿ ಹಾಗೂ ಅಗತ್ಯ ದಿನಸಿ ಸಾಮಾನು ವಿತರಿಸಿ ಮಾತನಾಡಿ ನಮ್ಮ ವಿಜಯೋತ್ಸವ ಅರ್ಥಪೂರ್ಣವಾದದು ಈಗಾಗಲೆ ಪಕ್ಷದ ವರಿಷ್ಠ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ದೆಹಲಿ ರಾಜ್ಯದಲ್ಲಿ ಆರೋಗ್ಯ, ಶಿಕ್ಷಣದಲ್ಲಿ ಕ್ರಾಂತಿಕಾರಿಕ…

Read More