ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ – ಹೆಬ್ರಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ…

Read More

ಸಾಗರ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅಮಾನತು : ಪೋಕ್ಸೋ ಕಾಯ್ದೆಯಡಿ ಬಂಧನ

 ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಿ,ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪೋಷಕರು ಶಾಲಾಭಿವೃದ್ಧಿ ಸಮಿತಿಗೆ ದೂರು ನೀಡಿದ್ದರು. ನಂತರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಲಾಗಿದೆ. ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ವಿಚಾರಿಸಿದ್ದಾರೆ. ಪೋಷಕರನ್ನು ಮಾತನಾಡಿಸಿದ್ದಾರೆ. ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ. ಇಂದು…

Read More

ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪ ರವರಿಗೆ ತರಳಿ ಶ್ರೀ ಪ್ರಶಸ್ತಿ :

ಮಲೆನಾಡಿನ ಹೆಸರಾಂತ ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದ ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರಿಗೆ ತರಳಿ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ತರಳಿ ಮಠದಿಂದ ಕಳೆದ ಹಲವು ದಶಕಗಳಿಂದ ರಾಮಪ್ಪನವರ ಸಾಮಾಜಿಕ,ಸಾಂಸ್ಕ್ರತಿಕ, ಧಾರ್ಮಿಕ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಕಾರ್ತಿಕೇಯ ಮಠದ ಯೋಗೆಂದ್ರ ಶ್ರೀಗಳ ಸಮ್ಮುಖದಲ್ಲಿ ರಾಮಪ್ಪ ನವರು ಪ್ರಶಸ್ತಿ ಪಡೆದರು. ಶಕ್ತಿ ಕೇಂದ್ರ ಸಿಗಂದೂರಿನ ಹಿನ್ನಲೆ ::  ಕರ್ನಾಟಕದಲ್ಲಿ ಬಹಳ ಪ್ರಸಿದ್ಧಿ ಪಡೆದು ಕೊಂಡಿರುವ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ . ಸೊರಬ ತಾಲೂಕಿನ ಬಂದಿಗೆ ನಿವಾಸಿಗಳಾದ ನಾಗಪ್ಪ (42)ಹಾಗೂ ಅವರ ಪುತ್ರ ಲೋಹಿತ್(16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದ್ಲಿ  ನಿವಾಸಿ ಕಿರಣ್(20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್(16) ಹಾಗೂ ಕಿರಣ್(20) ರವರ ಸ್ಥಿತಿ…

Read More

ಬಿದರಹಳ್ಳಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ ದೇವೇಂದ್ರಪ್ಪ ರವರಿಗೆ ಒಲಿದ ರಾಜ್ಯ ಮಟ್ಟದ “ಗುರು ಶ್ರೇಷ್ಠ” ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ 20-02-2022 ರಂದು ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರಾಗಿರುವ ಕೆ ದೇವಂದ್ರಪ್ಪ ಇವರಿಗೆ ರಾಜ್ಯಮಟ್ಟದ ಗುರು “ಶ್ರೇಷ್ಠ ಪ್ರಶಸ್ತಿ” ಯನ್ನು ಘೋಷಿಸಲಾಗಿತ್ತು . ಆದರೆ ಕಾರಣಾಂತರಗಳಿಂದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಮಠದಲ್ಲಿ ನಡೆದ ರಾಜ್ಯ ಮಟ್ಟದ “ಕನ್ನಡ ನುಡಿ ವೈಭವ -2022” ಕಾರ್ಯಕ್ರಮಕ್ಕೆ ಕೆ ದೇವೆಂದ್ರಪ್ಪನವರು ಪಾಲ್ಗೊಳ್ಳದೇ…

Read More

ರಾಷ್ಟ್ರಮಟ್ಟದಲ್ಲಿ ನಡೆದ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮೆರೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು.

ರಿಪ್ಪನ್ ಪೇಟೆ :ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ 10 ರಲ್ಲಿ 5 ಸ್ಥಾನಗಳನ್ನು ಅಂದರೆ ಶೇಕಡಾ ಐವತ್ತರಷ್ಟು ಸ್ಥಾನವನ್ನು ಬಾಚಿಕೊಂಡಿದ್ದಾರೆ. ಇಂದಿನ ಉನ್ನತ ತಂತ್ರ ಜ್ಞಾನ ಯುಗದಲ್ಲಿ ಕಂಪನಿಗಳಿಗೆ ಬೇಕಾದಂತಹ ಟೆಕ್ನಾಲಜಿ ಗಳನ್ನು ಕಲಿಸುವ ವಿದ್ಯಾರ್ಥಿಗಳನ್ನು ಕೈಗಾರಿಕ ತರಬೇತಿ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಡೆಯುತ್ತಿರುವ ಡಿಜಿಟಲ್ ಸರ್ಟಿಫಿಕೇಟ್ ಕೋರ್ಸ್ ಗಳ  ಪೆಬ್ರವರಿ…

Read More