ಶಿವಮೊಗ್ಗದ ಮಾರಿ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ಬೇಡ ಎಂದ ಬಿಜೆಪಿ ಯವರು ನಗರದ ಸಿಟಿ ಮಾಲ್​ನಲ್ಲಿ ಮುಸ್ಲಿಂ ಉದ್ಯಮಿಯ ಫನ್​-ಗೇಮ್​ ಉದ್ಘಾಟಿಸುತ್ತಾರೆ : ಯಮುನಾ ರಂಗೇಗೌಡ

ಶಿವಮೊಗ್ಗ : ನಾಗರಿಕರಿಗೆ ಉತ್ತಮ ಆಡಳಿತ ಕೊಡಲು ಸಾಧ್ಯವಿಲ್ಲದಿದ್ದರೂ ನಾಗರಿಕರ ಹಿತಕಾಯುವಲ್ಲಿ ವಿಫಲರಾದರೂ ನಕಲಿ ಹಿಂದುತ್ವದ ಘೋಷಣೆ ಕೂಗುತ್ತಾ ಬಡ ಮುಸ್ಲಿಂ ವ್ಯಾಪಾರಿಗಳನ್ನು ದ್ವೇಷ ಮಾಡಿ, ಅವರ ದಿನನಿತ್ಯದ ಕೂಲಿಯನ್ನು ಕಿತ್ತುಕೊಂಡು ಕಾರ್ಪೊರೇಟ್ ಬಂಡವಾಳಶಾಹಿ ಮುಸ್ಲಿಮರೊಂದಿಗೆ ಕೈಜೋಡಿಸುತ್ತಿರುವ ನಕಲಿ ಹಿಂದುತ್ವವಾದಿಗಳು ಈ ಬಿಜೆಪಿ ಯವರು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಕಳೆದವಾರ ನಡೆದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಮುಸ್ಲಿಮರಿಗೆ ವ್ಯಾಪಾರ ಕೊಡಬಾರದೆಂದು ರೋಷಾವೇಷ ತೋರಿದ್ದ…

Read More

ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ವಿದ್ಯಾರ್ಥಿಯ ಕೈಯನ್ನು ಕಚ್ಚಿದ ಉಪನ್ಯಾಸಕ;

ಹೊಸನಗರ :  ಪರೀಕ್ಷೆಯಲ್ಲಿ ನಕಲು ಮಾಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿರುವ ಘಟನೆ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ ನಡೆದಿದೆ. ಅಂತಿಮ ಬಿಎ ಪದವಿ ಓದುತ್ತಿರುವ ಕೀರ್ತೇಶ್ ಎಂಬ ವಿದ್ಯಾರ್ಥಿ  ಇಂದು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ಪರೀಕ್ಷಾ ಮೇಲ್ವಿಚಾರಕರಾದ ಅಂಜನ್ ಕುಮಾರ್ ವಿದ್ಯಾರ್ಥಿಯನ್ನು ಪ್ರಶ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಅಂಜನ್ ಕುಮಾರ್ ಪ್ರಯತ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಕೀರ್ತೆಶ್ ಪರೀಕ್ಷಾ ಮೇಲ್ವಿಚಾರಕ  ಅಂಜನ್ ಕುಮಾರ್ ರವರಿಗೆ ಉಡಾಫೆ…

Read More

25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 45 ವರ್ಷದ ಶಂಕರಣ್ಣ ಆತ್ಯಹತ್ಯೆಗೆ ಶರಣು!

 25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ. ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5…

Read More

ಹರತಾಳು ಹಾಲಪ್ಪ ಓರ್ವ ಗೂಂಡಾ ಹಾಗೂ ದುಷ್ಟ ಶಾಸಕ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ; ಹಲ್ಲೆ ಎನ್ನುವುದು ನಡೆಯಬಾರದು. ಅದು ಸಹ ಶಾಸಕರ‌ ಸಮ್ಮುಖದಲ್ಲಿ ನಡೆದಂತಹ ಹಲ್ಲೆಗಳು ಖಂಡಿಸಬೇಕಾಗಿದೆ. ಇತ್ತಿಚೆಗೆ ಸಾಗರದ ಪ್ರತಿಷ್ಟಿತ ವಿದ್ಯಾ ಸಂಸ್ಥೆಗಳ ಜನಕವಾಗಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ  ಸರ್ವ ಸದಸ್ಯರ ಸಭೆಯಲ್ಲಿ ನಡೆದ ಶಾಸಕರು ಮತ್ತು ಬೆಂಬಲಿಗರು ಮಾಡಿದ ಹಲ್ಲೆ ಮಾನವ ಸಮಾಜ ತಲೆ ತಗ್ಗಿಸುವಂತದ್ದು ಎಂದು ಮಾಜಿ ಸಾಗರ ಕ್ಷೇತ್ರ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಸಕರನ್ನು ಆಹ್ವಾನ ಮಾಡಿದ್ದರು‌ ಅದಕ್ಕೆ ಅವರು ಅರ್ಹರಾದರೂ…

Read More

ರಿಪ್ಪನ್ ಪೇಟೆ ಯಲ್ಲಿ ಶುಕ್ರವಾರ ಡಾ. ಶಿವಕುಮಾರ ಮಹಾಸ್ವಾಮಿಗಳವರ 115ನೇ ವರ್ಷದ ಜನ್ಮದಿನಾಚರಣೆ:

ರಿಪ್ಪನ್ ಪೇಟೆ : ನಡೆದಾಡುವ ದೇವರು ತ್ರಿವಿಧ ದಾಸೋಹಿ,ಶತಾಯುಷಿ,ಕಾಯಕಯೋಗಿ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರು 115ನೇ ವರ್ಷದ ಜನ್ಮದಿನಾಚರಣೆಯನ್ನು  ಏಪ್ರಿಲ್ 1 ಶುಕ್ರವಾರದಂದು  ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಡಾ. ಶಿವಕುಮಾರ ಮಹಾಸ್ವಾಮಿ ಗಳವರ ಭಕ್ತ ವೃಂದದವರು ತಿಳಿಸಿದ್ದಾರೆ.  ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಕಗ್ಗಲಿ ಲಿಂಗಪ್ಪ ಮಾತನಾಡಿ ಶುಕ್ರವಾರದಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಡಾಕ್ಟರ್ ಶಿವಕುಮಾರ…

Read More

ಹಾರಂಬಳ್ಳಿ ಗ್ರಾಮದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ಶಿಬಿರ :

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬೆಳೆಯುತ್ತಿರುವ ಯುವಸಮೂಹ  ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಮಾನಸಿಕ ನೆಮ್ಮದಿ ಪಡೆದು ಕೊಳ್ಳುವುದರ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಅಂತಾಗುತ್ತದೆ ಎಂದು ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಚಂದ್ರಶೇಖರ್ ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಎನ್ಎಸ್ಎಸ್ ಘಟಕದಿಂದ ಹಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಒಂದು ವಾರದ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಜಾತಿ…

Read More

ಸಾಗರದ ಹೆಸರಾಂತ ವೈದ್ಯೆಯ ಶವ ಗಣಪತಿ ಕೆರೆಯಲ್ಲಿ ಪತ್ತೆ :

ಸೋಮವಾರ ರಾತ್ರಿ ಶಿವಮೊಗ್ಗ ಜಿಲ್ಲೆ ಸಾಗರ ನಗರದ ಗಣಪತಿ ಕೆರೆಯಲ್ಲಿ ವೈದ್ಯರ ಶವ ಪತ್ತೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ಜಂಬಗಾರಿನ ನಿವಾಸಿ ಡಾ. ಶರ್ಮದಾ(36) ಮೃತಪಟ್ಟ ವೈದ್ಯೆಯಾಗಿದ್ದು, ಇವರು ಸೋಮವಾರ ರಾತ್ರಿ ತಮ್ಮ ಕ್ಲಿನಿಕ್ ಬಂದ್ ಮಾಡಿಕೊಂಡು ಬೈಕಿನಲ್ಲಿ ಹೊರಟವರು ರಾತ್ರಿಯಾದರೂ ಮನೆ ತಲುಪಿರಲಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಆಕೆಯ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಗಣಪತಿ ಕೆರೆ ಬಳಿ ಶರ್ಮದಾ ಅವರ ಬೈಕ್ ವಾಹನ ಪತ್ತೆಯಾಗಿತ್ತು. ತಕ್ಷಣ ಕೆರೆಯಲ್ಲಿ ಶೋಧಕಾರ್ಯ…

Read More

ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾದ ಆಸ್ಟ್ರೇಲಿಯ ಕ್ರಿಕೆಟಿಗ ಮ್ಯಾಕ್ಸ್ ವೆಲ್

ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ ಚೆನ್ನೈ ಮೂಲದ ಹುಡುಗಿ ವಿನಿ ರಾಮನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಮ್ಯಾಕ್ಸ್‌ವೆಲ್ ಭಾರತೀಯ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. 2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾಕ್ಸ್‌ವೆಲ್ ಕಳೆದ ವಾರ ಆಸ್ಟ್ರೇಲಿಯಾದಲ್ಲಿ ಮುದುವೆಯಾಗಿದ್ದರು. ಇದೀಗ ವಿನಿ ರಾಮನ್ ಕುಟುಂಬ ಸದಸ್ಯರು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಆಯೋಜಿಸಿದ್ದರು.  ತಮಿಳುನಾಡಿನ ವರನ ರೀತಿ ಕಾಣಿಸಿಕೊಂಡ ಮ್ಯಾಕ್ಸ್‌ವೆಲ್ ಭಾರತೀಯ ಅಭಿಮಾನಿಗಳಿಗೆ ಮತ್ತಷ್ಚು ಹತ್ತಿರವಾಗಿದ್ದಾರೆ. ಶೇರ್ವಾನಿ, ಮದುವೆ ಹಾರ…

Read More

ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಹಿಂದಿ ಶಿಕ್ಷಕಕನ ಬೇಜವಬ್ದಾರಿ ನಡೆ : ಸ್ಥಳೀಯರ ಹಾಗೂ ಪೋಷಕರ ಆಕ್ರೋಶ

ಶಿಕ್ಷಣ ಎಂದರೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಓದು ಬರಹ ಹಾಗೂ ಶಿಸ್ತುಬದ್ಧವಾಗಿರುವಂತೆ ಮಾಡುವುದಕ್ಕೆ ಶಿಕ್ಷಣ ಎಂದು ಹೇಳಲಾಗುವುದು. ಗುರುಗಳಾದವರು ತಮ್ಮ ತಮ್ಮ ವಿದ್ಯಾರ್ಥಿಗಳು ಸರಿಯಾಗಿ ಶಿಕ್ಷಣ ಪಡೆಯದಿದ್ದಲ್ಲಿ, ಏನಾದರು ತಪ್ಪು ಮಾಡಿದಲ್ಲಿ ಅವರನ್ನು ತಿದ್ದಿ ತೀಡಿ ಸರಿದಾರಿಯಲ್ಲಿ ನಡೆಸುವ ಅಥವಾ ಅವರಿಗೆ ಶೈಕ್ಷಣಿಕವಾಗಿ ತಮ್ಮನ್ನು ತಾವು ಬೆಳೆಸಿಕೊಳ್ಳುವ ದಾರಿ ತೋರುವುದಲ್ಲದೇ, ವಿದ್ಯಾರ್ಥಿಗಳಿಗೆ ದೇಶದ ಸದ್ಪ್ರಜೆಯಾಗಿಸುವುದು ಶಿಕ್ಷಕರ ಹೊಣೆಯಾಗಿದೆ. ಇಂತಹ ಮಹತ್ವದ ಶಿಕ್ಷಣ ನೀಡುವ ಶಿಕ್ಷಕರೇ ಶಾಲೆಯ ಶಿಸ್ತನ್ನು ಪ್ರತಿಪಾದಿಸಿದ್ದರೆ ಆ ಶಾಲೆಯ ವಿದ್ಯಾರ್ಥಿಗಳು ಶಿಸ್ತನ್ನು ಹಾಗೂ ಶಿಕ್ಷಣ…

Read More

ತೀರ್ಥಹಳ್ಳಿಯಲ್ಲಿ ಪ್ರತಿದಿನ ನೆಡೆಯುತ್ತಿದ್ದ ಪ್ರಸಿದ್ಧ ತುಂಗಾ ಆರತಿ ನಿಂತಿದ್ದು ಹೇಗೆ…? ಯಾರಿಂದ….?

ತೀರ್ಥಹಳ್ಳಿ : ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ಗಂಗಾ ಆರತಿ ಮಾಡಿದ್ದ ಹಾಗೆ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಲೆನಾಡಿನ ತೀರ್ಥಹಳ್ಳಿಯಲ್ಲಿ ಕುರುವಳ್ಳಿಯ ಕಾಶಿ ದೀಕ್ಷಿತ್ ಇವರ ನೇತೃತ್ವದಲ್ಲಿ ತುಂಗಾ ಆರತಿಯನ್ನು ಮಾಡಲಾಯಿತು. ಇದಕ್ಕೆ ತೀರ್ಥಹಳ್ಳಿಯ ಜನಪ್ರತಿನಿಧಿಗಳಿಂದ ಹಾಗೂ ಸಾರ್ವಜನಿಕರಿಂದ ಪ್ರಶಂಸೆ ಕೂಡ ವ್ಯಕ್ತವಾಯಿತು.  ನಂತರ ತೀರ್ಥಹಳ್ಳಿಯ ತಹಸೀಲ್ದಾರ್ ಡಾ. ಶ್ರೀಪಾದ್ ಇವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿದಿನ ಸಂಜೆ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಅರ್ಚಕರು ಒಂದೊಂದು ತಿಂಗಳು ತುಂಗೆಗೆ ಆರತಿ ನೆಡೆಸಲಿ…

Read More