ಶಿವಮೊಗ್ಗದ ಮಾರಿ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ಬೇಡ ಎಂದ ಬಿಜೆಪಿ ಯವರು ನಗರದ ಸಿಟಿ ಮಾಲ್ನಲ್ಲಿ ಮುಸ್ಲಿಂ ಉದ್ಯಮಿಯ ಫನ್-ಗೇಮ್ ಉದ್ಘಾಟಿಸುತ್ತಾರೆ : ಯಮುನಾ ರಂಗೇಗೌಡ
ಶಿವಮೊಗ್ಗ : ನಾಗರಿಕರಿಗೆ ಉತ್ತಮ ಆಡಳಿತ ಕೊಡಲು ಸಾಧ್ಯವಿಲ್ಲದಿದ್ದರೂ ನಾಗರಿಕರ ಹಿತಕಾಯುವಲ್ಲಿ ವಿಫಲರಾದರೂ ನಕಲಿ ಹಿಂದುತ್ವದ ಘೋಷಣೆ ಕೂಗುತ್ತಾ ಬಡ ಮುಸ್ಲಿಂ ವ್ಯಾಪಾರಿಗಳನ್ನು ದ್ವೇಷ ಮಾಡಿ, ಅವರ ದಿನನಿತ್ಯದ ಕೂಲಿಯನ್ನು ಕಿತ್ತುಕೊಂಡು ಕಾರ್ಪೊರೇಟ್ ಬಂಡವಾಳಶಾಹಿ ಮುಸ್ಲಿಮರೊಂದಿಗೆ ಕೈಜೋಡಿಸುತ್ತಿರುವ ನಕಲಿ ಹಿಂದುತ್ವವಾದಿಗಳು ಈ ಬಿಜೆಪಿ ಯವರು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಕಳೆದವಾರ ನಡೆದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಮುಸ್ಲಿಮರಿಗೆ ವ್ಯಾಪಾರ ಕೊಡಬಾರದೆಂದು ರೋಷಾವೇಷ ತೋರಿದ್ದ…