ಕಲ್ಲೂರು ಗ್ರಾಮದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ:

ಲಕ್ಷಾಂತರ ಜನರ ಬದುಕಿಗೆ ಭರವಸೆ  ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದ ಶಾಂತವೇರಿ…

Read More

ಮೊದಲ ದಿನದ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ SSLC ವಿದ್ಯಾರ್ಥಿಗಳು.

ರಿಪ್ಪನ್ ಪೇಟೆ :  ಈ ಬಾರಿಯ SSLC ಮೊದಲ ದಿನದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಪಟ್ಟಣದ ಸರ್ಕಾರಿ ಪ್ರೌಢಶಾಲೆ ಹಾಗೂ‌ ಮೇರಿ ಮಾತಾ ಶಾಲೆಯಲ್ಲಿ ಪರೀಕ್ಷೆಗೆ ಸಕಲ ಸಿದ್ದತೆಗಳನ್ನು ಮಾಡಲಾಗಿತ್ತು.ಮೊದಲ ದಿನದ ಪರೀಕ್ಷೆಗೆ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಹಾಜರಾಗಿದ್ದರು. ಪೋಷಕರು ಪರೀಕ್ಷೆ ಮುಗಿಯುವವರೆಗೂ ಶಾಲಾ ಆವರಣದಲ್ಲಿ ಕಾಯುತ್ತಿದ್ದ ಸನ್ನಿವೇಶ ಕಂಡುಬಂತು.  ಹೊಸನಗರ ತಾಲೂಕಿನಲ್ಲಿ ಒಟ್ಟಿ 1620 ವಿದ್ಯಾರ್ಥಿಗಳಲ್ಲಿ 1615 ವಿದ್ಯಾರ್ಥಿಗಳು ಈ ಬಾರಿಯ SSLC ಪರೀಕ್ಷೆಗೆ ಹಾಜರಾಗಿದ್ದಾರೆ. ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 9ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು…

Read More

ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಶಿವಮೊಗ್ಗ: ಎಸ್ಎಸ್ಎಲ್​ಸಿ ಪರೀಕ್ಷೆ  ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು  ದಾಳಿ ಮಾಡಿದ್ದು, ಈ ಘಟನೆ ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಪ್ರಾಥಮಿಕ ಚಿಕಿತ್ಸೆ ಪಡೆದು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಜ್ಜೇನು ದಾಳಿಗೊಳಗಾದ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ…

Read More

ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಗೋ ಸಾಕಾಣಿಕೆ : ಇಬ್ಬರಬಂಧನ

  ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಗೋವಿನ‌ ಮಾರಾಟ ಮತ್ತು ಸಾಗಾಣಿಕ ವಿರುದ್ಧ ದಾಳಿ ನಡೆಸಲಾಗಿದ್ದು ಒಂದು ಕಡೆ ಗೋವುಗಳನ್ನ ರಕ್ಷಿಸಲಾದರೆ ಇನ್ನೊಂದೆಡೆ ಮನೆಯಲ್ಲಿಯೇ ಗೋವನ್ನ ಕಡಿದು ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ. ಸಾಗರ ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನ ಟಾಟಾ‌ಏಸ್ ವಾಹನದಲ್ಲಿ ತುಂಬಿಸಿಕೊಂಡು ಹೋಗುವಾಗ ಪೊಲೀಸರು ತಡೆದು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಆಟೋದಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ. ಕಣಸೆ ಗ್ರಾಮದ ಗಣಪತಿ ಮತ್ತು ಆತನ ಪುತ್ರ ದೇವರಾಜ್ ನನ್ನ ಬಂಧಿಸಲಾಗಿದೆ. ಅದರಂತೆ…

Read More

ತೀರ್ಥಹಳ್ಳಿ ಗನ್ ಶಾಟ್ ಪ್ರಕರಣ ಎಪ್ ಐ ಆರ್ ದಾಖಲು : ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂತರಾಜ್ ಕುಟುಂಬಸ್ಥರು

  ತೀರ್ಥಹಳ್ಳಿ :  ಗುಂಡೇಟಿಗೆ ಬಲಿಯಾದ ನೊಣಬೂರು  ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕಾಂತರಾಜು ಅವರು ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಪ್ರಕರಣ ದಾಖಲಾಗಿದೆ. ಎಫ್ಐಆರ್ ನಲ್ಲಿ ಕಾಂತರಾಜು ರವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಮಾತ್ರ ದಾಖಲಾಗಿದೆ. ಕಾಂತರಾಜ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ದೊಡ್ಡಪ್ಪನ ಮಗ ಗಣೇಶ್ ಸೂಕ್ತ ತನಿಖೆ ನಡೆಸುವಂತೆ ಕೋರಿದ್ದಾರೆ. ನಿನ್ನೆ ಮಧ್ಯಾಹ್ನ ಶಿರಿಗಾರು ನಿವಾಸಿ ಕಾಂತರಾಜು ಮನೆಯಿಂದ ಯಾವುದೋ ಕೆಲಸದ ಮೇಲೆ‌ ಹೊರ ಹೋಗುವಾಗ ಹೊಸಕೇರಿ, ಅತ್ತಿಗಾರಿಗೆ ಹೋಗುವ ರಸ್ತೆಯಲ್ಲಿ…

Read More

ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂರಕ : ಆರಗ ಜ್ಞಾನೇಂದ್ರ.

 ರಿಪ್ಪನ್ ಪೇಟೆ: ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆಗಳ  ತೆರೆಯುವಿಕೆಯಿಂದ  ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ಇಂಗ್ಲಿಷ್ ಭಾಷೆಯ ಬಳಕೆಯ  ದುರುಪಯೋಗ ಸಿಗುತ್ತದೆ ಎಂದು ರಾಜ್ಯ ಗೃಹ ಸಚಿವ ಹಾಗೂ ತೀರ್ಥಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.  ಅಮೃತ ಗ್ರಾಮದಲ್ಲಿ  ಶನಿವಾರ ಆಯೋಜಿಸಲಾಗಿದ್ದ ಎರಡು ಕೋಟಿ ರೂ ವೆಚ್ಚದ ಕರ್ನಾಟಕ ಪಬ್ಲಿಕ್ ಸ್ಕೂಲಿನ  ನೂತನ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ…

Read More

ರಿಪ್ಪನ್ ಪೇಟೆಯಲ್ಲಿ ಹಾಡಹಗಲೇ ಮಹಿಳೆಯ ಸರಗಳ್ಳತನ :

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಜನನಿಬಿಡ ಪ್ರದೇಶದಲ್ಲಿಯೋ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ  ಸರವನ್ನು ಇಬ್ಬರು ಯುವಕರು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಸಣ್ಣ ದಿನಸಿ ಅಂಗಡಿ ಇಟ್ಟುಕೊಂಡಿರುವ ಜಯಮ್ಮ ಎಂಬುವವರು  ಸರ ಕಳೆದು ಕೊಂಡವರು. ನಡೆದಿದ್ದೇನು ??? ಇಂದು ಸಂಜೆ 4.30 ರ ಸಮಯ ಜಯಮ್ಮ ರವರು ತಮ್ಮ ಮೈಲಾರಲಿಂಗೇಶ್ವರ ಜನರಲ್ ಸ್ಟೋರ್ ನಲ್ಲಿ ಒಬ್ಬರೇ ಇದ್ದಾಗ ಕೆಟಿಎಂ ಡ್ಯೂಕ್ ಬೈಕ್ ನಲ್ಲಿ…

Read More

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮದ ಬಡ ರೋಗಿಯ ಚಿಕಿತ್ಸೆಗೆ ನೆರವಾಗಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರೂ ವಾಸಿಯಾದ ರಾಜೇಶ್ 34 ವರ್ಷ ಇವರು (GBS syndrome )ಕಾಯಿಲೆಗೆ ತುತ್ತಾಗಿದ್ದು ಇವರ ಚಿಕಿತ್ಸೆಗೆ ಸುಮಾರು 15 ಲಕ್ಷದ ಅವಶ್ಯಕತೆಯಿದ್ದು,ಕೂಲಿ ಮಾಡಿ ಬದುಕುವ ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಚಿಕಿತ್ಸೆಯ ಹಣಕ್ಕಾಗಿ ನಮ್ಮ ಮಾದ್ಯಮದ ಮೂಲಕ ದಾನಿಗಳ ಮುಂದೆ ಬಂದಿದ್ದಾರೆ. ಈ ಖಾಯಿಲೆಯಿಂದ ಬಳಲುತ್ತಿರುವ ಇವರಿಗೆ ಸುಮಾರು ಐದಾರು ತಿಂಗಳುಗಳಿಂದ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು ಈಗಾಗಲೇ 6 ರಿಂದ 7 ಲಕ್ಷ ಹಣ ಖರ್ಚಾಗಿದ್ದು ಹಣದ…

Read More

ಕೊಡಚಾದ್ರಿ ಬೆಟ್ಟಕ್ಕೆ ಕೇಬಲ್ ಕಾರ್ ಗೆ ಅನುಮೋದನೆ : ಸಂಸದ ಬಿ ವೈ ರಾಘವೇಂದ್ರ

 1200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೇಬಲ್‌ ಕಾರ್‌ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೊದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 20 ಕೋಟಿ ರೂ. ನೀಡಿದ್ದರು.ಆದರೆ, ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ…

Read More

80 ಸಾವಿರ ರೂ ಸಾಲಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ !!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬ್ಯಾಡರ ಕೊಪ್ಪದ ರೈತ  ಮರಿಯಪ್ಪ ಸಾವನ್ನಪ್ಪಿರುವ ದುರ್ದೈವಿ ರೈತ. ಶುಂಠಿಗೆ ಹೊಡೆಯುವ ಕಳೆನಾಶಕವನ್ನು ಸೇವಿಸಿದ್ದ ಮರಿಯಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಎಂಬತ್ತು ಸಾವಿರ ರೂಪಾಯಿ ಸಾಲ ಮಾಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಇವರ ಮಗ ಲಿಂಗರಾಜು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More