ಕಲ್ಲೂರು ಗ್ರಾಮದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ:
ಲಕ್ಷಾಂತರ ಜನರ ಬದುಕಿಗೆ ಭರವಸೆ ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದ ಶಾಂತವೇರಿ…