ಆನಂದಪುರ ಸಮೀಪ ಅಕ್ರಮ ಗೋಮಾಂಸ ಮಾರುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು :

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ನಡೆದಿದೆ.

ಹಬೀಬ್ ( 35 ) ಶಿಕಾರಿಪುರ ಮೂಲದ ವ್ಯಕ್ತಿ ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿದೆ.

ಬಜಾಜ್ ಪ್ಲಾಟಿನಾ ಕೆ ಎ 15 ಈಎಪ್ 2782  ಬೈಕ್ ನ ಬ್ಯಾಗ್ ನಲ್ಲಿ ಅಂದಾಜು ಹತ್ತು ಕೆಜಿ ಯಷ್ಟು ಗೋಮಾಂಸವನ್ನು ಗೌತಮಪುರದ ಗ್ರಾಮದ ಕೆಲವು ಮನೆಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಗೌತಮಪುರದ ಯುವಕರ ತಂಡ ಇವನ ಬೈಕ್ ನ ಬ್ಯಾಗ್ ಪರಿಶೀಲಿಸಿದಾಗ ಗೋಮಾಂಸ ಪತ್ತೆಯಾಗಿದೆ.

 ತಕ್ಷಣ ಸಾಗರ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ಸ್ಥಳಕ್ಕೆ ಆನಂದಪುರ ಪೊಲೀಸರು ಆಗಮಿಸಿ ವ್ಯಕ್ತಿಯನ್ನು ವಶಕ್ಕೆ 
ಪಡೆದಿದ್ದಾರೆ.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


Leave a Reply

Your email address will not be published. Required fields are marked *