ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ನಡೆದಿದೆ.
ಹಬೀಬ್ ( 35 ) ಶಿಕಾರಿಪುರ ಮೂಲದ ವ್ಯಕ್ತಿ ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿದೆ.
ಬಜಾಜ್ ಪ್ಲಾಟಿನಾ ಕೆ ಎ 15 ಈಎಪ್ 2782 ಬೈಕ್ ನ ಬ್ಯಾಗ್ ನಲ್ಲಿ ಅಂದಾಜು ಹತ್ತು ಕೆಜಿ ಯಷ್ಟು ಗೋಮಾಂಸವನ್ನು ಗೌತಮಪುರದ ಗ್ರಾಮದ ಕೆಲವು ಮನೆಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಗೌತಮಪುರದ ಯುವಕರ ತಂಡ ಇವನ ಬೈಕ್ ನ ಬ್ಯಾಗ್ ಪರಿಶೀಲಿಸಿದಾಗ ಗೋಮಾಂಸ ಪತ್ತೆಯಾಗಿದೆ.
ಬಜಾಜ್ ಪ್ಲಾಟಿನಾ ಕೆ ಎ 15 ಈಎಪ್ 2782 ಬೈಕ್ ನ ಬ್ಯಾಗ್ ನಲ್ಲಿ ಅಂದಾಜು ಹತ್ತು ಕೆಜಿ ಯಷ್ಟು ಗೋಮಾಂಸವನ್ನು ಗೌತಮಪುರದ ಗ್ರಾಮದ ಕೆಲವು ಮನೆಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಗೌತಮಪುರದ ಯುವಕರ ತಂಡ ಇವನ ಬೈಕ್ ನ ಬ್ಯಾಗ್ ಪರಿಶೀಲಿಸಿದಾಗ ಗೋಮಾಂಸ ಪತ್ತೆಯಾಗಿದೆ.
ತಕ್ಷಣ ಸಾಗರ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ಸ್ಥಳಕ್ಕೆ ಆನಂದಪುರ ಪೊಲೀಸರು ಆಗಮಿಸಿ ವ್ಯಕ್ತಿಯನ್ನು ವಶಕ್ಕೆ
ಪಡೆದಿದ್ದಾರೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇