ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಗುರುಬಸಪ್ಪ ರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
>ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ ಗ್ರಾಮದವರಾದ ರಾಮನಾಯ್ಕ, ನಾಗರಾಜ, ಸತ್ಯನಾರಾಯಣ, ವಿನೋದ, ಹಾಗೂ ನಾಗರತ್ನ ಇವರುಗಳು 08-04-22 ರಂದು ಬೆಳಿಗ್ಗೆ ಸುಮಾರು ಹತ್ತು ಗಂಟೆ ಸಮಯದಲ್ಲಿ ತಮ್ಮ ತೋಟದಲ್ಲಿ ಔಷಧಿ ಹೊಡೆಯುತ್ತಿದ್ದ ಗುರುಬಸಪ್ಪ ಇವರ ಮೇಲೆ ಮೇಲ್ಕಂಡ ಆರೋಪಿಗಳು ಕೊಲೆ ಬೆದರಿಕೆ ಹಾಕಿ, ಏಕಾಕಿ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿ ಆಗಿರುತ್ತಾರೆ.
ನಂತರ ತೀವ್ರವಾಗಿ ಗಾಯಗೊಂಡ ಗುರುಬಸಪ್ಪ ಇವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಗೆ ಗುರುಬಸಪ್ಪ ಅವರ ಪತ್ನಿ ಲಲಿತಾ ರವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.
>ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ ಗ್ರಾಮದವರಾದ ರಾಮನಾಯ್ಕ, ನಾಗರಾಜ, ಸತ್ಯನಾರಾಯಣ, ವಿನೋದ, ಹಾಗೂ ನಾಗರತ್ನ ಇವರುಗಳು 08-04-22 ರಂದು ಬೆಳಿಗ್ಗೆ ಸುಮಾರು ಹತ್ತು ಗಂಟೆ ಸಮಯದಲ್ಲಿ ತಮ್ಮ ತೋಟದಲ್ಲಿ ಔಷಧಿ ಹೊಡೆಯುತ್ತಿದ್ದ ಗುರುಬಸಪ್ಪ ಇವರ ಮೇಲೆ ಮೇಲ್ಕಂಡ ಆರೋಪಿಗಳು ಕೊಲೆ ಬೆದರಿಕೆ ಹಾಕಿ, ಏಕಾಕಿ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿ ಆಗಿರುತ್ತಾರೆ.
ನಂತರ ತೀವ್ರವಾಗಿ ಗಾಯಗೊಂಡ ಗುರುಬಸಪ್ಪ ಇವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಗೆ ಗುರುಬಸಪ್ಪ ಅವರ ಪತ್ನಿ ಲಲಿತಾ ರವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.