ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ನಲ್ಲಿ ವೃದ್ದನೊಬ್ಬನನ್ನು ರಕ್ಷಿಸಲು ಹೋಗಿ ರಿಪ್ಪನ್ಪೇಟೆಯ ಯುವಕನೊಬ್ಬ ನಾಪತ್ತೆಯಾಗಿ ಸುಮಾರು 48 ಗಂಟೆ ಕಳೆದಿದ್ದು ಇನ್ನೂ ಯುವಕನ ಸುಳಿವು ಪತ್ತೆಯಾಗಿಲ್ಲ.
ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ಎಂಬ ಯುವಕ ಮಂಗಳವಾರ ಬೆಳಿಗ್ಗೆ ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲ್ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ ಅವರನ್ನು ರಕ್ಷಿಸಲು ನೀರಿಗೆ ಜಿಗಿದಿದ್ದು,ಅವರನ್ನು ರಕ್ಷಿಸುವ ಪ್ರಯತ್ನದಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದನು.
ಸ್ಥಳದಲ್ಲಿ ನಿನ್ನೆಯಿಂದ ಅಗ್ನಿಶಾಮಕದಳದವರೂ ಬೀಡು ಬಿಟ್ಟಿದ್ದು,ಕಾರ್ಯಾಚರಣೇ ಭರದಿಂದ ಸಾಗುತ್ತಿದ್ದರೂ ಅನೀದ್ ನ ಸುಳಿವು ಸಿಗದೇ ಇರುವುದು ಅಧಿಕಾರಿ ವರ್ಗದವರಿಗೆ ತಲೇನೋವಾಗಿ ಪರಿಣಮಿಸಿದೆ.
ರಿಪ್ಪನ್ ಪೇಟೇ ನೆಹರು ಬಡಾವಣೆ ನಿವಾಸಿಯಾದ ಅನೀದ್ (22) ತನ್ನ ತಾಯಿ ಮತ್ತು ಅಂಗವಿಕಲ ಸಹೋದರ ಮತ್ತು ಅಂಗವಿಕಲ ಸಹೋದರಿಯೊಂದಿಗೆ ಜೀವನ ಸಾಗಿಸುತ್ತಿದ್ದನು.ಇದೀಗ ಈತನ ಕಣ್ಮರೆಯಿಂದ ಈ ಬಡ ಕುಟುಂಬ ಕಣ್ಣೀರಿನಲ್ಲಿ ಕಾಲ ಕಳೆಯುವಂತಹ ಪರಿಸ್ಥಿತಿ ಉದ್ಬವವಾಗಿದೆ.
ಅಪರಿಚಿತ ವ್ಯಕ್ತಿಯನ್ನು ಉಳಿಸಲು ಹೋಗಿ ಈಗ ಕಣ್ಮರೆಯಾಗಿರುವ ಬಡ ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿ ಧ್ಯೆರ್ಯ ತುಂಬಲು ಸಂಬಂಧಪಟ್ಟ ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳು ಇನ್ನಾದರೂ ಮುಂದೆ ಬರುವರೇ ಕಾದು ನೋಡಬೇಕಾಗಿದೆ.
ಅಗ್ನಿಶಾಮಕ ದಳದವರ ಕಾರ್ಯಾಚರಣೆಯ ವೀಡಿಯೋ ಇಲ್ಲಿ ವೀಕ್ಷಿಸಿ👇👇👇
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್