ರಾತ್ರಿ ವೇಳೆ ಒಂಟಿ ಮಹಿಳೆಯರಿದ್ದ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಯುವಕನನ್ನ್ನು ಗ್ರಾಮಸ್ಥರೇ ಹಿಡಿದು ಕೈಕಾಲು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಕೋಟೆ ತಾಂಡದಲ್ಲಿ ನಡೆದಿದೆ.ಕೋಟೆ ತಾಂಡದ ಸುಂದರ್ ನಾಯ್ಕ ಬಂಧಿತ ಆರೋಪಿಯಾಗಿದ್ದಾನೆ.
ತಾಂಡದ ಮಹಿಳೆಯೋರ್ವರ ಪತಿ ನಾಲ್ಕು ದಿನದಿಂದ ಮನೆಯಲ್ಲಿಲ್ಲದಿರುವುದನ್ನು ಗಮನಿಸಿದ್ದ ಸುಂದರ್ ನಾಯ್ಕ, ನಿನ್ನೆ ರಾತ್ರಿ ಆ ಮನೆಗೆ ನುಗ್ಗಿದ್ದಾನೆ. ಮಹಿಳೆಯ ಮನೆಗೆ ನುಗ್ಗಿದ ಸುಂದರ್ ನಾಯ್ಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ನಿದ್ರೆಯಿಂದ ಎಚ್ಚರಗೊಂಡ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾಳೆ.ಈ ವೇಳೆ ಪಕ್ಕದ ಕೋಣೆಯಲ್ಲಿದ್ದ ಮಲಗಿದ್ದ ಮಹಿಳೆಯ ಮಾವ ಎಚ್ಚರಗೊಂಡು ಸೊಸೆಯ ಕೋಣೆಗೆ ಹೋಗಿದ್ದಾನೆ. ಈ ವೇಳೆ ಸುಂದರ್ ನಾಯ್ಕ ಅಲ್ಲಿಂದ ಪರಾರಿಯಾಗಿದ್ದಾನೆ.
ಇಂದು ಬೆಳಗ್ಗೆ ವಿಷಯ ತಿಳಿದು ಗ್ರಾಮಸ್ಥರು ಸೆರೆ ಹಿಡಿದು ದೇವಸ್ಥಾನದ ಬಳಿ ಕಟ್ಟಿ ಹಾಕಿ ಧರ್ಮದೇಟು ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸುಂದರ್ ನಾಯ್ಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಹಿಂದೆಯೂ ಇದೇ ರೀತಿಯ ಹಲವು ಪ್ರಕರಣಗಳಲ್ಲಿ ಸುಂದರ್ನಾಯ್ಕ ಭಾಗಿಯಾಗಿದ್ದ ಎನ್ನಲಾಗಿದೆ.ಆದರೆ ಮರ್ಯಾದೆಗೆ ಅಂಜಿ ಯಾರೂ ಪ್ರಕರಣ ದಾಖಲಿಸಿರಲಿಲ್ಲ.ಈ ನಂಬಿಕೆಯ ಮೇಲೆ ಸುಂದರ್ ನಾಯಕ್ ತನ್ನ ಹಳೆ ಚಾಳಿಯನ್ನು ಮುಂದುವರೆಸಿದ್ದಾನೆ ಎನ್ನಲಾಗಿದೆ.
ಇದೀಗ ಕುಂಸಿ ಪೊಲೀಸರು ಈತನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಜರುಗಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್