ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ಯುವ ಕಾಂಗ್ರೆಸ್ ವತಿಯಿಂದ ಗೃಹ ಸಚಿವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು :

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಗೃಹಸಚಿವ ಆರಗ ಜ್ಞಾನೇಂದ್ರ ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ್ದಾರೆ ಈ ಕಾರಣಕ್ಕೆ ಆದಷ್ಟು ಬೇಗ ರಾಜೀನಾಮೆ ಕೊಟ್ಟು ತೀರ್ಥಹಳ್ಳಿಯ ಗೌರವ ಕಾಪಾಡಿ ಎಂದು ಇಂದು ತೀರ್ಥಹಳ್ಳಿಯ ತಾಲೂಕು ಕಛೇರಿ ಮುಂಭಾಗ ನೆಡದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಕಿಮ್ಮನೆ ರತ್ನಾಕರ್ ವಾಗ್ದಾಳಿ ನೆಡೆಸಿದರು.

ಅವರೊಬ್ಬ ರಾಜ್ಯದ ಗೃಹಸಚಿವ, ರಾಜ್ಯದಲ್ಲಿ  ಶಾಂತಿ ಕಾಪಾಡುವಂತೆ ಮಾಡುವ ಕೆಲಸ ಅವರದ್ದು  ಯಾವುದೇ ಕೇಸ್ ಗೆ ಸಂಬಂಧಪಟ್ಟ ವಿಷಯವಾದರೂ ತನಿಖೆ ನೆಡೆಯುವದರೊಳಗೆ ಹೇಳಿಕೆ ನೀಡಬಾರದು. ಆದರೆ ಗೃಹಸಚಿವರು ವಿಷಯ ತಿಳಿದುಕೊಳ್ಳದೆ ಕೋಮುಗಲಭೆ ಆಗುವಂತಹ ಹೇಳಿಕೆ ನೀಡಿದ್ದಾರೆ.

ತೀರ್ಥಹಳ್ಳಿಯ ನಂದಿತಾ ಪ್ರಕರಣದಲ್ಲೂ ಇದೆ ರೀತಿಯ ಹೇಳಿಕೆಯನ್ನು ಆರಗ ನೀಡಿದ್ದರು.ನಂದಿತಾಳನ್ನು ಕರೆದುಕೊಂಡು ಹೋಗಿದ್ದು ಯಾರು ಸಹ ನೋಡಿಲ್ಲ, ಆದರೂ ಕರೆದುಕೊಂಡು ಹೋದವರು ಉರ್ದು ಮಾತನಾಡುತ್ತಿದ್ದರು ಎಂದು ಆಗ ಆರಗ ಹೇಳಿದ್ದರು.
ಭಾಷೆಯ ವಿಷಯವನ್ನು ಮಾತನಾಡಿ ಈ ರೀತಿಯ ಕೋಮುಗಲಭೆ ಆಗುವಂತಹ ಹೇಳಿಕೆ ನೀಡುತ್ತಿದ್ದಾರೆ ಹಾಗಾಗಿ ಈ ಕೊಡಲೇ ರಾಜೀನಾಮೆ ನೀಡಬೇಕು ಇಲ್ಲದಿದ್ದರೆ ಇನ್ನೊಂದು ಬಾರಿ ಒಂದು ತಿಂಗಳಲ್ಲಿ ತಾಲೂಕಿನ 10, 000 ಜನರನ್ನು ಸೇರಿಸಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನೊಣಬೂರು ಗ್ರಾಮಪಂಚಾಯಿತಿ ಮಾಜಿ ಉಪಾಧ್ಯಕ್ಷನ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕಾರಿಗೆ ಹೋದವರ ಮೇಲೆ 302 ಕೇಸ್ ಹಾಕಲಾಗಿದೆ. 302 ಕೇಸ್ ಅಂದ್ರೆ ಏನು ಅಂತಾನೆ ಜ್ಞಾನೇಂದ್ರರಿಗೆ ಗೊತ್ತಿಲ್ಲ. ಪೊಲೀಸರು ಸಹ ಅವರ ಮಾತನ್ನೇ ಕೇಳುತ್ತಿದ್ದಾರೆ. ಪೊಲೀಸರು ಹೀಗೆ ಅವರ ಮಾತನ್ನು ಕೇಳುತ್ತ ತಪ್ಪು ಮಾಡುತ್ತಿದ್ದರೆ ಪೊಲೀಸರಿಗೆ ನಾವೇನು ಎಂದು ತೋರಿಸಬೇಕಾಗುತ್ತದೆ ಎಂದು ಗುಡುಗಿದರು.

ಆರಗ ಜ್ಞಾನೇಂದ್ರ ಹಾಗೂ ಸಿ ಟಿ ರವಿ ಇವರುಗಳು  ಅಪರಾಧಿಕ ಒಳಸಂಚು ನಡೆಸಿ ನೀಡಿದ ಹೇಳಿಕೆಯು ಧಾರ್ಮಿಕ ಭಾವನೆಗಳಿಗೆ, ಭಾಷಾಭಿಮಾನಿಗಳಿಗೆ ನೋವುಂಟು ಮಾಡುವ ಮೂಲಕ ಅವರು ಸಾಮಾಜಿಕ ಶಾಂತಿ ಕದಡಲು, ತಮ್ಮ ಲಾಭಕ್ಕಾಗಿ ಈ ರೀತಿ ಸಮಾಜದ ಶಾಂತಿ, ಸೌಹಾರ್ದತೆಗೆ ಭಂಗ ತರುವ ಹೇಳಿಕೆ ನೀಡಿರುವುದು ಕಂಡುಬರುತ್ತದೆ. ಅವರ ಕೃತ್ಯಗಳು ಐಪಿಸಿ ಸೆಕ್ಷನ್ 120 – A (criminal conspiracy), 120 – B, 124 – A (Sedition), 153 – A (Promoting enmity between different groups on grounds of religion, race, place of birth, residence language ) ಅಡಿಯಲ್ಲಿ ಅಪರಾಧವಾಗಿರುತ್ತದೆ. ಆದ್ದರಿಂದ ಆರಗ ಜ್ಞಾನೇಂದ್ರ ಹಾಗೂ ಸಿ ಟಿ ರವಿ ಅವರ ವಿರುದ್ಧ ಕೋಮು ಭಾವನೆ ಕೆರಳಿಸುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿ ಕೋಮುಗಲಭೆಗಳಿಗೆ ಉತ್ತೇಜನ ನೀಡಿ ಸಾರ್ವಜನಿಕ ಆಸ್ತಿಪಾಸ್ತಿ ಮತ್ತು ಜೀವಕ್ಕೆ ಹಾನಿ ಮಾಡಲು ಪ್ರಚೋದನೆ ನೀಡಿದ ಆರೋಪದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್ ಡಾ. ಶ್ರೀಪಾದ್ ಅವರಿಗೆ  ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ತೀರ್ಥಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಸ್ತೂರು ಮಂಜುನಾಥ್, ಕೆಪಿಸಿಸಿ ಸದಸ್ಯರಾದ ಜಿ ಎಸ್ ನಾರಾಯಣರಾವ್,ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾದ ಆದರ್ಶ ಹುಂಚದಕಟ್ಟೆ,ಮೂಡುಬ ರಾಘವೇಂದ್ರ, ಅಮ್ರಪಾಲಿ ಸುರೇಶ್, ,  ಪಟ್ಟಣ ಪಂಚಾಯತ್ ಅಧ್ಯಕ್ಷೆ ಶಬನಮ್, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ  , ಹಾಗೂ ಎಲ್ಲಾ ಸದಸ್ಯರು ಪ್ರತಿಭಟನೆಯಲ್ಲಿ  ಭಾಗಿಯಾಗಿದ್ದರು.



ಯುವ ಕಾಂಗ್ರೆಸ್ ವತಿಯಿಂದ ಗೃಹ ಸಚಿವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು :


ಶಿವಮೊಗ್ಗ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ ತೀರ್ಥಹಳ್ಳಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಡಿವೈಎಸ್ಪಿ ರವರಿಗೆ ದೂರು ದಾಖಲಿಸಿದ್ದಾರೆ.


ದೂರು ನೀಡಲು ಕಾರಣವೇನು?
ಬೆಂಗಳೂರಿನಲ್ಲಿ ಯುವಕ ಚಂದ್ರು ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೋಮು ಗಲಭೆ ಸೃಷ್ಟಿಸುವ ಹೇಳಿಕೆ ನೀಡಿ, ನಂತರ ಹೇಳಿಕೆ ಬದಲಿಸಿದ್ದರು. ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾರಣವಾಗುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ದೂರು  ನೀಡಿದ್ದಾರೆ.
ದೂರಿನಲ್ಲಿ ಏನಿದೆ?
ಧಾರ್ಮಿಕ ಭಾವನೆ ಕೆರಳಿಸುವುದು ಮತ್ತು ಸಾಮಾಜಿಕ ಶಾಂತಿ ಹದಗೆಡಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉದ್ದೇಶಪೂರ್ವಕವಾಗಿ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಶತ್ರುತ್ವ ಬೆಳೆಯಲು ಕಾರಣವಾಗಿ, ಅದರ ಲಾಭ ಪಡೆಯುವ ಉದ್ದೇಶವನ್ನು ಅವರು ಹೊಂದಿದ್ದಾರೆ. ರಾಜ್ಯದಲ್ಲಿ ಶಾಂತಿ ಕದಡಲು ಮುಂದಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 295ಎ, 298, 505ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾದ ಆದರ್ಶ್ ಹುಂಚದಕಟ್ಟೆ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಪೂರ್ಣೇಶ್ ಕೆಳಕೆರೆ ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷರಾದ ಅಮರನಾಥ ,ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ಅಧ್ಯಕ್ಷರಾದ ತಿಳಿ ರಾಘವೇಂದ್ರ, ಸುಬ್ರಹ್ಮಣ್ಯ ವಿಟ್ಟಲ್ ನಗರ ಹಾಗೂ ಇನ್ನಿತರರು ಉಪಸ್ಥಿತರಿದ್ದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

9 hours ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

9 hours ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

9 hours ago

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

1 day ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

1 day ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

1 day ago