ಚಾನೆಲ್ ಗೆ ಹಾರಿದ ವ್ಯಕ್ತಿಯೊಬ್ಬರನ್ನು ರಕ್ಷಿಸಲು ಹೋಗಿ ರಿಪ್ಪನ್ಪೇಟೆಯ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ಬಳಿ ನಡೆದಿದೆ.
ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ನಾಪತ್ತೆಯಾಗಿರುವ ಯುವಕನಾಗಿದ್ದಾನೆ.
ಅನೀದ್ ಲಾರಿಯೊಂದರಲ್ಲಿ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದು, ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲೊಂದರ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ ಅವರನ್ನು ರಕ್ಷಿಸಲು ನೀರಿಗೆ ಜಿಗಿದಿದ್ದಾನೆ,ಕೆಲ ಕ್ಷಣ ಕಳೆದರು ರಕ್ಷಿಸಲು ತೆರಳಿದ್ದ ಅನೀದ್ ನೀರಿನಿಂದ ಮೇಲೆ ಬರಲಿಲ್ಲ.
ಯುವಕನ ಪತ್ತೆ ಕಾರ್ಯ ನಡೆಯುತಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದಾರೆ.
ಚಾನೆಲ್ ಗೆ ಹಾರಿದ ವಯೋವೃದ್ದ ಹಾಗೂ ಆತನನ್ನು ರಕ್ಷಿಸಲು ಹಾರಿದ್ದ ಯುವಕನನ್ನು ಚಾನೆಲ್ ನಲ್ಲಿ ಶೋಧಿಸುವಾಗ ಚಾನೆಲ್ ಗೆ ಹಾರಿದ್ದ ವಯೋವೃದ್ದನ ಮೃತದೇಹದ ಜೊತೆ ವಯೋವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ.
ಘಟನೆ ನಡೆದು ಏಳು ತಾಸು ಕಳೆದರು ವಯೋವೃದ್ದನನ್ನು ರಕ್ಷಿಸಲು ಚಾನೆಲ್ ಗೆ ಹಾರಿದ್ದ ಯುವಕನ ಪತ್ತೆ ಸಾಧ್ಯವಾಗಲಿಲ್ಲ,ಕತ್ತಲಾಯಿತು ಎಂದು ಅಗ್ನಿಶಾಮಕ ದಳದವರು ಪತ್ತೆ ಕಾರ್ಯ ನಿಲ್ಲಿಸಿ ಹಿಂದಿರುಗಿದ್ದಾರೆ.
ಅಗ್ನಿಶಾಮಕ ದಳದವರು ಕಾರ್ಯಚಾರಣೆ ನಿಲ್ಲಿಸಿರುವುದಕ್ಕೆ ಯುವಕನ ಕುಟುಂಬದರು ಆಕ್ರೋಶಿತರಾಗಿದ್ದಾರೆ.ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನಾಪತ್ತೆಯಾಗಿರುವ ಯುವಕನ ಪತ್ತೆಗೆ ಸಹಕರಿಸಬೇಕೆಂದು ಕುಟುಂಬಸ್ಥರು ಅಂಗಲಾಚುತ್ತಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್