ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರೀಕರ ಸಮಸ್ಯೆ ಕೇಳೋರು ಯಾರು ! ?????

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರಿಕರ ಸಮಸ್ಯೆ ಕೇಳೋ ವ್ಯಕ್ತಿಗಳು ಯಾರು !?

ಹೀಗೊಂದು ಪ್ರೆಶ್ನೆ ಸಾರ್ವಜನಿಕರ ವಲಯದಿಂದ ಕೇಳುತ್ತಿದ್ದು ಇದಕ್ಕೆ ಚುನಾವಣೆಯಲ್ಲಿ ಗೆದ್ದವರಾಗಲಿ ಅಥವಾ ಅಲ್ಲಿನ ಅಧಿಕಾರಿಗಳಾಗಲಿ ಉತ್ತರ ನೀಡಬೇಕಿದೆ.


ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ಏನು ?

 



ನೀರಿನ ಬಿಲ್ಲು:

ನೀರು ಬಿಲ್ಲು ಬರೀ ಆರಿಯಾರ್ಸ್ ಸೇರಿಸಿ ಬಿಲ್ಲು ಕೊಟ್ಟರೆ ಪರವಾಗಿಲ್ಲ. ಬಿಲ್ಲು ಕೊಡದೇ ಎರಡು ಮೂರು ತಿಂಗಳಿಗೊಮ್ಮೆ ಬಿಲ್ಲು ಕೊಟ್ಟು, ಸ್ಲಾಬ್ ರೇಟು ಜಾಸ್ತಿಯಾಗಿ ನಮ್ಮದಲ್ಲದ ತಪ್ಪಿಗೆ ನಾವು ದಂಡ ಕೊಡೋದು ಯಾವ ನ್ಯಾಯ? ತಿಂಗಳು ತಿಂಗಳು ಬಿಲ್ಲು ಕಟ್ಟುವ ಕಿರಿಕಿರಿ ಬೇಡ ಎಂದು ಒಮ್ಮೆಲೇ ನಾವು 1000/- ರೂ ಕಟ್ಟಿದರೆ ನಮ್ಮ ಖಾತೆಗೆ ಜಮಾ ಆಗುವುದೇ ಕಷ್ಟ ಆಗುತ್ತದೆ. ಅಲ್ಲದೇ ತುಂಬಾ ತಡವಾಗುವುದು ಬೇರೆ, ಅಷ್ಟೇ ಅಲ್ಲದೇ ಕಟ್ಟಿದ ಮೇಲು ಬಿಲ್ಲಿನಲ್ಲಿ ಬಾಕಿ ಎಂದೇ ಬರುತ್ತದೆ ಹೀಗೆ ಹಲವಾರು ಕಾರಣ

ಕಂದಾಯ ಕಟ್ಟಿಸಿಕೊಳ್ಳೋದರಲ್ಲು ಸಮಸ್ಯೆ !?


ಕಂದಾಯ ಕಟ್ಟುವ ಹಣ 3% ಜಾಸ್ತಿ ಮಾಡಲು ಜಿಲ್ಲಾಧಿಕಾರಿಗಳ ಆದೇಶ ಇದೆ ಎಂಬ ಕಾರಣಕ್ಕೆ ಯಾರಿಗೂ ಕಂದಾಯವನ್ನು ಕಟ್ಟಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಅಲ್ಲಿನ ಅಧಿಕಾರಿಗಳಿಗೆ ಕರೆ ಮಾಡಿ ಕೇಳಿದ್ದಕ್ಕೆ 2 -3 ದಿನದೊಳಗೆ ಆಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ ಇಂದಿಗೆ 10 ದಿನದ ಮೇಲೆ ಆದರೂ ಕಂದಾಯ ಕಟ್ಟಿಸಿಕೊಳ್ಳುತ್ತಿಲ್ಲ . ಏಪ್ರಿಲ್ ತಿಂಗಳಿನಲ್ಲಿ ಕಟ್ಟಿದರೆ 5% ಪರ್ಸೆಂಟ್ ರಿಯಾಯತಿ ಇತ್ತು. ತಾರೀಖು 17ಕಳೆದರೂ ಕಂದಾಯ ಕಟ್ಟಿಸಿ ಕೊಳ್ಳದೇ ಇರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಮಸ್ಯೆ ಏನೇ ಇದ್ದರೂ ನಮಗೆ ಸಮಯ ಸಿಗುವುದು 13 ದಿನ ಮಾತ್ರ,ಈ ಸಮಸ್ಯೆ ಗಳನ್ನು ಹೇಳಿಕೊಳ್ಳಲು ಕಚೇರಿಗೆ ಭೇಟಿ ಕೊಟ್ಟರೆ ಅಲ್ಲೂ ಸಂಬಂಧ ಪಟ್ಟ ನೌಕರ ಅಥವಾ ಮುಖ್ಯಾಧಿಕಾರಿ ಸಿಗುವುದೇ ಕಷ್ಟ. ಬೇರೆಯವರನ್ನು ಕೇಳಿದರೆ ಮಾಹಿತಿ ಸಿಗುವುದಿಲ್ಲ. ಆದ್ದರಿಂದ ಕಂದಾಯ ರಿಯಾಯತಿ ದರದಲ್ಲಿ ಕಟ್ಟಲು ಮೇ 15 ರತನಕ ಸಮಯ ಕೊಡುವುದು ಸೂಕ್ತ ಎಂಬುದು ಸಾರ್ವಜನಿಕರ ಅಭಿಪ್ರಾಯ ತಿಳಿಸಿದ್ದಾರೆ .

ಇನ್ನು ನೀರಿನ ಶುಲ್ಕ ಹಾಗೂ ಕಂದಾಯ ಪಾವತಿ ಮಾಡಲು ಆನ್ಲೈನ್ ವ್ಯವಸ್ಥೆ ಸಾದ್ಯ ಆದರೆ ತುಂಬಾ ಅನುಕೂಲ ಎಂದು ಈ ಮೂಲಕ ಸಾರ್ವಜನಿಕರು ತಿಳಿಸಿದ್ದಾರೆ.

ವರದಿ: ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

23 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

23 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

23 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago