ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಂದಾಗಿ ಬಾಳೋಣ ಸಿನಿಮಾ ರಿಲೀಸ್ !!!!???? ಸಿನಿಮಾ ಹಿಟ್ ಆಗುತ್ತೋ??? ಪ್ಲಾಪ್ ಆಗುತ್ತೋ ????

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಂದಾಗಿ ಬಾಳೋಣ ಸಿನಿಮಾ ರಿಲೀಸ್ ಆಗಿದ್ದು ಇದು ಹಿಟ್ ಆಗುತ್ತೋ???? ಪ್ಲಾಪ್ ಆಗುತ್ತೋ ??? ಎಂಬುವುದನ್ನು ಕಾದುನೋಡಬೇಕಾಗಿದೆ.

ಹೌದು…. ಕಾಂಗ್ರೆಸ್ ನಾಯಕರು ಒಂದಾದ್ರ ?  ಹೀಗೊಂದು ಪ್ರೆಶ್ನೆ ಈಗ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ತೀರ್ಥಹಳ್ಳಿಯ ಕಾಂಗ್ರೆಸ್ ನಾಯಕರು ಎಂದರೆ ಅದು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್. ಇದು ಎಲ್ಲರಿಗೂ ಸಾಮಾನ್ಯವಾಗಿ ಗೊತ್ತಿರುವ ವಿಷಯ. ಆದರೆ ಇತ್ತೀಚಿನ ಕೆಲವು  ತಿಂಗಳುಗಳ  ಹಿಂದೆ ಡಿಸಿಸಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡರು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರೆ. ಅಲ್ಲಿಂದ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ನಾಯಕರ ಮುನಿಸು ಮತ್ತು ಮುಸುಕಿನ ಗುದ್ದಾಟ  ಸಾರ್ವಜನಿಕವಾಗಿಯೇ ಕಾಣುತ್ತಿತ್ತು. ಯಾವುದಾದರು ಕಾರ್ಯಕ್ರಮದಲ್ಲಿ ಕಿಮ್ಮನೆ ರತ್ನಾಕರ್ ಇದ್ದರೆ ಮಂಜುನಾಥ ಗೌಡರು ಇರುತ್ತಿರಲಿಲ್ಲ. ಮಂಜುನಾಥ ಗೌಡರು ಇದ್ದರೆ ಕಿಮ್ಮನೆ ರತ್ನಾಕರ್ ಇರುತ್ತಿರಲಿಲ್ಲ.  ಯಾವುದೇ ಕಾರ್ಯಕ್ರಮದ ವೇದಿಕೆಯಲ್ಲಿ ನಾಯಕರುಗಳು ಹೆಸರು ಹೇಳಲಿಚ್ಛಿಸದೆ ಒಬ್ಬರಿಗೊಬ್ಬರು ಗುರಿ ಮಾಡಿ ಮಾತನಾಡುತ್ತಿದ್ದರು. ಹಾಗೂ ಒಬ್ಬರಿಗೊಬ್ಬರು ಒಟ್ಟಿಗೆ  ವೇದಿಕೆ ಸಹ ಹಂಚಿಕೊಳ್ಳುತ್ತಿರಲಿಲ್ಲ. ಅನೇಕ ಬಾರಿ ಕಾಂಗ್ರೆಸ್ ನಲ್ಲಿ ಗೊಂದಲವನ್ನು ಸರಿ ಮಾಡಲು ಕಾಂಗ್ರೆಸ್ ನಾಯಕರು ಸಮಯ ನಿಗದಿ ಮಾಡಿದರು ಇಬ್ಬರು ನಾಯಕರಲ್ಲಿ  ಯಾರಾದರೂ ಒಬ್ಬರು ತಪ್ಪಿಸಿಕೊಳ್ಳುತ್ತಿದ್ದರು.

ಇತ್ತೀಚಿಗೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆಯ ಕಾಂಗ್ರೆಸ್ ಗೆಲುವಿನಲ್ಲಿ ಇಬ್ಬರು ಒಂದಾದ್ರು ಎಂದೇ ಹೇಳಲಾಗಿತ್ತಾದರು ಮತ್ತೆ ಎಲ್ಲೂ ಇಬ್ಬರು ಕಂಡಿರಲಿಲ್ಲ. ಆದರೆ ಇಂದು ಪಟ್ಟಣದ ಬೆಟ್ಟಮಕ್ಕಿಯಲ್ಲಿ ನೆಡದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರು ಒಟ್ಟಿಗೆ ಕುಳಿತು ಮಾತುಕತೆ ನೆಡೆಸಿ ನಂತರ ಒಟ್ಟಿಗೆ ಸನ್ಮಾನ ಕೂಡ ಸ್ವೀಕರಿಸಿದ್ದಾರೆ. ಇಲ್ಲಿಯವರೆಗೆ ಎಲ್ಲಿಯೂ ಸಹ ಒಟ್ಟಿಗೆ ಕಾಣಿಸಿಕೊಳ್ಳದೆ ಇದ್ದ ನಾಯಕರು ಚುನಾವಣೆ ಸಮೀಪಿಸುತ್ತಿರುವ  ಕಾರಣಕ್ಕೆ  ತೀರ್ಥಹಳ್ಳಿಯ ಕಾಂಗ್ರೆಸ್ ನಾಯಕರು ಒಂದಾದ್ರ?  ಎನ್ನುವ ಮಾತು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಮುಗಿದ ನಂತರ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

24 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

24 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

24 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago