ತೀರ್ಥಹಳ್ಳಿ : ಪಟ್ಟಣದಲ್ಲಿ ಬಾಳೇಬೈಲಿನಿಂದ ಕುರುವಳ್ಳಿಯ ವಿಠಲನಗರದ ಮೂಲಕ ಕೊಪ್ಪಕ್ಕೆ ಹೋಗುವ ದಾರಿಗೆ ಹೊಸ ಸೇತುವೆ ಕಾರ್ಯ ಅತ್ಯಂತ ಭರದಿಂದ ಸಾಗುತ್ತಿದ್ದು ಈ ಸ್ಥಳಕ್ಕೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಕಾಮಗಾರಿ ಕಾರ್ಯಗಳನ್ನು ವೀಕ್ಷಿಸಿದರು.
ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇದೊಂದು ತೀರ್ಥಹಳ್ಳಿಯಲ್ಲೇ ಐತಿಹಾಸಿಕ ಸೇತುವೆಯಾಗಲಿದೆ. ಈ ಸೇತುವೆಗೆ 56 ಕೋಟಿ ರೂ ಮೊತ್ತದಲ್ಲಿ ಹಣ ಮಂಜೂರಾಗಿದೆ. ತೀರ್ಥಹಳ್ಳಿಯ ಪ್ರಸಿದ್ಧ ಸೇತುವೆಯಾದ ಜಯಚಾಮರಾಜೇಂದ್ರ ಸೇತುವೆಯ ವರ್ಷ ( ಕಾಲಾವಧಿ ) ಮುಗಿಯುತ್ತ ಬಂದಿದ್ದರಿಂದ ಹೊಸ ಸೇತುವೆ ಆಗಬೇಕಿತ್ತು ಆದ ಕಾರಣ ಈ ಸೇತುವೆ ಮಾಡಬೇಕಾಯಿತು ಎಂದು ತಿಳಿಸಿದರು. ಅತೀ ಕಡಿಮೆಯ ಅವಧಿಯಲ್ಲಿ ಈ ಸೇತುವೆಗೆ ಹಣ ಮಂಜೂರಾಗಿದೆ ಅದು ಸಂತೋಷದ ವಿಚಾರ. ಇನ್ನು ಮೇಗರವಳ್ಳಿಯಿಂದ ಆಗುಂಬೆಯ ರಸ್ತೆಗೆ 96 ಕೋಟಿ ರೂ ಮಂಜೂರಾಗಿದೆ ಎಂದು ತಿಳಿಸಿದರು.
ಇನ್ನು ಕಾಂಟ್ರಾಕ್ಟರ್ ನಾಗರಾಜ್ ನಾಯಕ್ ಮಾತನಾಡಿ ಈ ಸೇತುವೆಯ ಉದ್ದ 210 ಮೀ ಅಗಲ 16 ಮೀ ಇರಲಿದೆ. ಹೊಸ ಸೇತುವೆಯಲ್ಲಿ ಯಾವುದೇ ರೀತಿಯ ಹೊಸ ವಿನ್ಯಾಸ ಇರುವುದಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಾಗರಾಜ್ ನಾಯಕ್, ಗುತ್ತಿಗೆದಾರರು ಇಬ್ರಾಹಿಂ ಶರೀಫ್, ಹೆದ್ದೂರ್ ನವೀನ್, ಬಾಳೆಬೈಲು ರಾಘವೇಂದ್ರ ಸೊಪ್ಪುಗುಡ್ಡೆ ರಾಘವೇಂದ್ರ, ಸಂದೇಶ್ ಜವಳಿ ಸೇರಿ ಹಲವರು ಉಪಸ್ಥಿತರಿದ್ದರು
ವರದಿ : ಅಕ್ಷಯ್ ಕುಮಾರ್
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್