ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ.
ಅವರು ತಾಲೂಕಿನ ಕೂಡ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ ಪ್ರಕಟಿಸುವೆ ಎಂದರು.
ಯಾವುದೇ ಖಾಯಿಲೆ ಕಾಣಿಸಿಕೊಂಡರೂ ಗ್ರಾಪಂ ವ್ಯಾಪ್ತಿಯಲ್ಲಿ 24 ಗಂಟೆ ವೈದ್ಯರ ಸೇವೆ, ಮತ್ತು ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ. ರೈತ ಸಾಲಗಾರ ಆಗಬಾರದು. ಮುಂದಿನ ದಿನಗಳಲ್ಲಿ ಪ್ರತಿ ಕುಡುಂಬಕ್ಕೂ ಉದ್ಯೋಗ, ಸ್ವಂತ ಉದ್ಯೋಗಕ್ಕೂ ರೂಪರೇಷ ನೀಡಲಿದ್ದೇನೆ. ಚುನಾವಣೆಯ ಸಂದರ್ಭದಲ್ಲಿ ಮಾಹಿತಿ ನೀಡಲ್ಲ. ಈಗಲೇ ಘೋಷಿಸುವೆ ಎಂದರು.
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದಾಪೂರ್ಯನಾಯ್ಕ ಗೆಲ್ಲಿಸಿದರೆ ಉತ್ತಮ ಸಚಿವ ಸ್ಥಾನ ನೀಡುವುದಾಗಿ ಘೋಷಿಸಿದ ಮಾಜಿ ಸಿಎಂ ಸರ್ಕಾರಿ ಶಾಲೆಯನ್ನ 1 ರಿಂದ 12 ರವರೆಗೆ 6000 ಗ್ರಾಪಂನಲ್ಲಿ ಉಚಿತ ಶಿಕ್ಷಣವನ್ನ ನೀಡಲಾಗುವುದು. ನಿಮ್ಮ ಮಕ್ಕಳಿಗೆ ಯಾವ ಖಾಸಗಿ ಶಾಲೆಗೂ ಕಡಿಮೆಯಾಗದಂತೆ ಶಿಕ್ಷಣ ವ್ಯವಸ್ಥೆ ರೂಪಿಸಲಾಗುವುದು ಎಂದರು.
ಮದುವೆ ಆಗದ ಮಹಿಳೆಯರಿಗೆ, ವಿಧವೆಯರಿಗೆ ಅಂಗವಿಕಲ ಮಹಿಳೆಯರಿ ತಿಂಗಳ ವೇತನ ಮತ್ತು ವೃದ್ಧರಿಗೆ ಪ್ರತಿ ತಿಂಗಳು 5000 ರೂ. ವೇತನ ನೀಡಲಾಗುವುದು ಎಂದು ಕುಮಾರ ಸ್ವಾಮಿ ಈ ಯೋಜನೆಯನ್ನ ನನ್ನ ಮನೆಯಿಂದ ತಂದು ಕೊಡೊಲ್ಲ. ರಾಜ್ಯದ ಖಜಾನೆಯನ್ನ ನೀವುಗಳು ದರಿರ್ದ್ರವಾಗಿಸಲು ಬಿಟ್ಟಿಲ್ಲ. 30-40 ಸೀಟನ್ನ ಗೆಲ್ಲಲು ನನಗೆ ಕಷ್ಟವನ್ನ. ಆದರೆ ಇದರಿಂದ ಏನು ಮಾಡಲಿ ಎಂದು ಪ್ರಶ್ನಿಸಿದರು.
ಕಳೆದ ಚುನಾವಣೆಯಲ್ಲಿ ರೈತರ ಆತ್ಮಹತ್ಯೆ ಹಿನ್ಬಲೆಯಲ್ಲಿ ರೈತರ ಸಾಲ ಮನ್ನ ಮಾಡಲಾಗುತ್ತದೆ ಎಂದಿದ್ದೆ. ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಗೇಲಿ ಮಾಡಿದವು. ಆದರೆ ಕಾಂಗ್ರೆಸ್ ಜೊತೆ ಸರ್ಕಾರದ ಜೊತೆ 14 ತಿಂಗಳಲ್ಲಿ 25 ಸಾವಿರ ಕೋಟಿ ಸಾಲ ಮನ್ನ ಮಾಡಿದೆ. ಕಮಿಷನ್ ಕೇಳಿದಿನಾ ನೀವೆ ಹೇಳಿ ಎಂದರು.
ಸಂಪೂರ್ಣ ಅಧಿಕಾರವಿಲ್ಲವೆಂದು ಸುಳ್ಳು ಹೇಳಿ ರೈತರ ಸಾಲವನ್ನ ಮನ್ನ ಮಾಡದೆ ಜಾರಿಕೊಳ್ಳಬಹುದು. ಕಮಿಷನ್ ಎಕ್ಸಪೆಕ್ಟ್ ಮಾಡಿದ್ದರೆ ಲೂಟಿ ಮಾಡಬಹುದಿತ್ತು. ಇದನ್ನ ಸರಿಪಡಿಸುವರು ಯಾರು ಎಂದು ಪ್ರಶ್ನಿಸಿದರು
ಈ ಸಂಧರ್ಭದಲ್ಲಿ ಮಾಜಿ ಶಾಸಕಿ ಶಾರದ ಪೂರ್ಯನಾಯ್ಕ್,ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್, ಶಾರದ ಅಪ್ಪಾಜಿಗೌಡ,ಹೆಚ್ ಟಿ ಬಳಿಗಾರ್,
ಮಾಜಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್,ಯಡೂರು ಜಯರಾಂ,ರಾಮಕೃಷ್ಣ,ಕಾಂತರಾಜ್ ಹಾಗೂ ಆರ್ ಎನ್ ಮಂಜುನಾಥ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್