ರಿಪ್ಪನ್ಪೇಟೆ: ಬಡಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಎಂಬ ಕಲ್ಪನೆಯಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೊಂದಿದ್ದರು ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಿದ್ಧಗಂಗಾ ಶ್ರೀಗಳ ಭಕ್ತವೃಂದದವತಿಯಿಂದ ಇಂದು ಶ್ರೀ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಆರ್ಥಿಕ ಸಬಲರಲ್ಲದ ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ದುರ್ಲಬವಾಗಿದ್ದ ಸಂದರ್ಭದಲ್ಲಿ ಸ್ವಾಮೀಜಗೆ ಶ್ರೀಮಠದಲ್ಲಿ ವಿದ್ಯಾ ಕೇಂದ್ರವನ್ನು ತೆರೆದು ತನ್ಮೂಲಕ, ಅನ್ನ, ಅಕ್ಷರ ಮತ್ತು ಆರೋಗ್ಯ ನೀಡುವ ಸಂಕಲ್ಪ ಮಾಡಿದ್ದರು. ಅದರ ಪ್ರತಿಫಲವಾಗಿ ಪ್ರಸ್ತುತ ಹತ್ತಾರು ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳು ಮಠದಿಂದ ಜ್ಞಾನ ಪಡೆದು ದೇಶವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತ ಸಮಾಜದ ಪ್ರಗತಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಅವರ ಸದ್ಧರ್ಮವನ್ನು ಪ್ರತಿಯೊಬ್ಬರುವ ಜೀವನದಲಿ ಅಳವಡಿಸಿಕೊಳ್ಳಬೇಕೆಂದರು.
ಈ ಸಂಧರ್ಭದಲ್ಲಿ ಸಮಾಜ ಸೇವೆ ಸಲ್ಲಿಸಿದ ಹೆಚ್.ಎಲ್. ಚಂದ್ರಶೇಖರ್ ರಿಪ್ಪನ್ಪೇಟೆ, ರಾಷ್ಟ್ರೀಯ ಯೋಗಾ ಪಟು ಕಾವ್ಯ ಕೆ.ಎನ್. ಗರ್ತಿಕೆರೆ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷೆ ಮಹಾಲಕ್ಷಿ, ಭಕ್ತವೃಂದದ ಸಂಚಾಲಕ ಕಗ್ಗಲಿ ಲಿಂಗಪ್ಪ, ಈ ಸಭೆಯಲ್ಲಿ ಗ್ರಾಮದ ಹಿರಿಯರಾದ ಬೆಳಕೋಡು ಹಾಲಸ್ವಾಮಿಗೌಡ್ರು, ಟಿ.ಆರ್.ಕೃಷ್ಣಪ್ಪ, ಎಂ.ಡಿ.ಇಂದ್ರಮ್ಮ, ಆರ್.ಎನ್.ಮಂಜುನಾಥ, ಹೆಚ್.ವಿ.ಈಶ್ವರಪ್ಪಗೌಡ ಹಾರೋಹಿತ್ಲು, ಬೆಳ್ಳೂರು ತಿಮ್ಮಪ್ಪ, ಜೆ.ಜಿ.ಸದಾನಂದ, ಆರ್ಯಮಿತ್ರ ಇನ್ನಿತರರು ಹಾಜರಿದ್ದು ಮಾತಾನಾಡಿದರು.
ಪ್ರಣತಿ ಅಣ್ಣಪ್ಪ ಪ್ರಾರ್ಥಿಸಿದರು. ಸೋಮಶೇಖರ್ ದೂನ ಸ್ವಾಗತಿಸಿದರು. ಆರ್ಯಮಿತ್ರ ಪ್ರಾಸ್ತವಿಕವಾಗಿ ಮಾತಾನಾಡಿದರು. ಕಗ್ಗಲಿ ಶಿವಪ್ರಕಾಶ್ ನಿರೂಪಿಸಿದರು. ರಿ.ರಾ.ಸೋಮಶೇಖರ್ ವಂದಿಸಿದರು. ನಂತರ ಸಾಮೂಹಿಕ ಅನ್ನ ಸಂತರ್ಪಣೆ ಜರುಗಿತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್