ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಗೊಠಾಣೆ ಗ್ರಾಮದ ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ(Sahydari Tiger Reserve) ಬಂಗಾಳ ಮಾನಿಟರ್ ಹಲ್ಲಿಯ (bengal monitor lizard ) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್ಗೆ ಪ್ರವೇಶಿಸಿ ಅಪರಾಧ ಎಸಗಿದ್ದಾರೆ.ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನಿಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ ಅರಣ್ಯ ಇಲಾಖೆ ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಘಟನೆಯ ಬಗ್ಗೆ ತಿಳಿದು ಬಂದಿದೆ.
ಆರೋಪಿಗಳು ಮಾನಿಟರ್ ಹಲ್ಲಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯದ ದಾಖಲೆಯನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ.
ಸಾಂಗ್ಲಿ ಮೀಸಲು ಅರಣ್ಯದಲ್ಲಿ ನಿಯೋಜಿಸಲಾದ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿಗಳನ್ನು ಪತ್ತೆಹಚ್ಚಿದರು, ಅದರಲ್ಲಿ ಅವರು ಕಾಡಿನಲ್ಲಿ ತಿರುಗುತ್ತಿರುವುದನ್ನು ಕಾಣಬಹುದಾಗಿತ್ತು. ಮಾಹಿತಿಗಳ ಪ್ರಕಾರ, ಮೂವರು ಆರೋಪಿಗಳು ಕೊಂಕಣದಿಂದ ಕೊಲ್ಲಾಪುರ ಚಂದೋಳಿ ಗ್ರಾಮಕ್ಕೆ ಬೇಟೆಗೆ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಗೊಂದಲಕ್ಕೊಳಗಾಗಿರುವ ಅರಣ್ಯಾಧಿಕಾರಿಗಳು, ಆರೋಪಿಗಳ ವಿರುದ್ಧದ ಯಾವ ರೀತಿಯ ಅರೋಪಗಳನ್ನು ಹಾಕಬೇಕು ಎನ್ನುವ ಕುರಿತು ಭಾರತೀಯ ದಂಡ ಸಂಹಿತೆಯನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಗಾಳದ ಮಾನಿಟರ್ ಹಲ್ಲಿ ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರ ಅಡಿಯಲ್ಲಿ ಮೀಸಲು ಜಾತಿಯಾಗಿದೆ. ತಪ್ಪಿತಸ್ಥರಾದರೆ, ಆರೋಪಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್