ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ.
ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ 115ನೇ ಜನ್ಮದಿನಾಚರಣೆ ಹಾಗೂ “ಅಲಕ್ಷಿತ ಸಮುದಾಯಗಳು ಮತ್ತು ಸಾಮಾಜಿಕ ನ್ಯಾಯ’ ವಿಷಯ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಸಮಾನತೆಯನ್ನು ತರುವುದು ಡಾ| ಬಿ.ಆರ್‌. ಅಂಬೇಡ್ಕರ್‌ ಮತ್ತು ಡಾ| ಬಾಬು ಜಗಜೀವನ್‌ ರಾಮ್‌ ಅವರ ಚಿಂತನೆಗಳಾಗಿದ್ದವು. ಅದರಂತೆ ನಡೆಯುವುದೇ ಸಂವಿಧಾನ ಮತ್ತು ಅವರುಗಳಿಗೆ ನಾವು ನೀಡಬಹುದಾದ ಗೌರವ. ದಲಿತರು, ದಮನಿತರು, ಅಂಚಿನಲ್ಲಿರುವ ಸಮುದಾಯಗಳಾದ ನಮಗೆ ಅನುಕಂಪ ಬೇಡ. ಶಿಕ್ಷಣ ಮತ್ತು ದುಡಿಯುವ ಅವಕಾಶಗಳನ್ನು ನೀಡಿ. ಉತ್ತಮವಾದ ಶಿಕ್ಷಣಕ್ಕೆ ಸಮಾಜದಲ್ಲಿ ಸಮಾನತೆ ತರುವ ಶಕ್ತಿಯಿದೆ. ಅಸಾಧ್ಯ ಎಂದು ಯಾರೂ ಹಿಂದುಳಿಯಬಾರದು; ಬದುಕುವ ಮಾರ್ಗ ಸರಿಯಿದ್ದರೆ‌ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ತಿಳಿಸಿದರು.

ವಿಚಾರ ಸಂಕಿರಣದ ದಿಕ್ಸೂಚಿ ನುಡಿಗಳನ್ನಾಡಿದ ಕನ್ನಡ ವಿವಿ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ| ಕೆ.ಎಂ. ಮೇತ್ರಿ, ಸಾಮಾಜಿಕ ನ್ಯಾಯದ ಮೂಲಕ ಬುಡಕಟ್ಟು ಸಮುದಾಯಗಳೂ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಜನರಿಗೆ  ದೀರ್ಘ‌ಕಾಲಿಕ ಯೋಜನೆಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು. ನಿರ್ಲಕ್ಷಿತರಿಗೆ‌ ಶಿಕ್ಷಣ, ಉದ್ಯೋಗವನ್ನು ನೀಡಬೇಕು. ನಿರ್ಲಕ್ಷಿತರ ಮೇಲೆ ಅಧ್ಯಯನ ಮಾಡಿ ಸಮಾಜದ ಮುಂದೆ ಅವರ ಸಮಸ್ಯೆಗಳನ್ನು ಪ್ರಸ್ತುತಪಡಿಸುವಂತಹ ಕಾರ್ಯಕ್ರಮಗಳು ಜರುಗಬೇಕು. ಅಲಕ್ಷಿತ ಸಮಾಜದ ಜನರ ವಿಶಿಷ್ಟ ಜೀವನ ಶೈಲಿಗಳು, ಸಂಸ್ಕೃತಿಗಳನ್ನು ಅಧ್ಯಯನಿಸಿ ಅರಿಯಬೇಕು, ಗೌರವಿಸಬೇಕು ಆ ಮೂಲಕ ಸರ್ಕಾರದ ನೀತಿ ನಿರೂಪಣೆಗಳಲ್ಲಿ ಅವುಗಳು ಬಿಂಬಿತವಾಗುವಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಜನಪದ ಗಾಯಕ ಜೋಗಿಲ ಸಿದ್ಧರಾಜು ಅವರು ಜನಪದ ಗೀತೆಯೊಂದನ್ನು ಹಾಡಿ ಸಭಿಕರನ್ನು ರಂಜಿಸಿದರು. ವಿವಿಯ ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಪ್ರೊ| ನವೀನ್‌ ಕಮಾರ್‌ ಎಸ್‌. ಕೆ., ಈ ದಿನ ಡಾಟ್‌ ಕಾಂ ವೆಬ್‌ ತಾಣದ ಸುದ್ದಿ ಸಂಪಾದಕ ಬಿ ವಿ ಶ್ರೀನಾಥ್‌ ಹಾಗೂ ಡಾ| ಬಾಬು ಜಗಜೀವನ್‌ ರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಚಾಲಕ ಡಾ| ಸತ್ಯಪ್ರಕಾಶ್‌ ಎಂ.ಆರ್‌. ಮಾತನಾಡಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

10 hours ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

10 hours ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

10 hours ago

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

1 day ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

1 day ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

1 day ago