ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ.
ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ ಪರಿಶೀಲನೆ ಮಾಡಿ ಹೋಗಿರುತ್ತಾರೆ.
ಹಾನಿಗೊಳಗಾದ ಕುಟುಂಬ ಅತ್ಯಂತ ಕಡು ಬಡತನದಲ್ಲಿ ಕೂಲಿ ಕಾರ್ಮಿಕ ವರ್ಗಕ್ಕೆ ಸೇರಿದ್ದು ವಾಸಿಸಲು ಮನೆಯಿಲ್ಲದೆ ಅತಂತ್ರ ಸ್ಥಿತಿಯಲ್ಲಿ ಇದ್ದಾರೆ.
ಸಾಮಾಜಿಕವಾಗಿ ಸಹಾಯಮಾಡುವ ಜನಪ್ರತಿನಿಧಿಗಳು ಇವರಿಗೆ ಸೂರು ಕಲ್ಪಿಸಿಕೊಟ್ಟಲ್ಲಿ ಬಡಕುಟುಂಬಕ್ಕೆ ಆಸರೆ ಆಗುತ್ತದೆ.
ಮುಂಬರುವ ಮಳೆಗಾಲಕ್ಕೆ ಹೆದರಿ ಹೇಗೆ ವಾಸ ಮಾಡಬೇಕು ಎಂಬ ಚಿಂತೆ ಈ ಬಡ ಕೂಲಿಕಾರ್ಮಿಕರ ಮನೆಯಲ್ಲಿದೆ ಚಿಕ್ಕ ಮಕ್ಕಳು ಹೇಗೆ ಜೀವನ ಕಳೆಯಬೇಕು ಎಂಬುದೇ ಇವರ ಚಿಂತೆಯಾಗಿದೆ.
ಸ್ಥಳೀಯ ಗ್ರಾಮ ಪಂಚಾಯತಿಯಿಂದ ಯಾವುದೇ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡದೇ ಇರುವುದು ಇವರ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.
ಸ್ಥಳೀಯ ಗ್ರಾಮ ಪಂಚಾಯತಿಯಿಂದ ಯಾವುದೇ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡದೇ ಇರುವುದು ಇವರ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.
. ಇನ್ನಾದರೂ ಚಿಕ್ಕ ಜೇನಿ ಗ್ರಾಮ ಪಂಚಾಯತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಬಂಧಪಟ್ಟ ಜನಪ್ರತಿನಿಧಿಗಳು ಬಡಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಟ್ಟಲ್ಲಿ ಅವರ ಕಾರ್ಯಕ್ಷಮತೆಗೆ ಬೆಲೆ ಬರಬಹುದು ಎಂಬ ನಂಬಿಕೆ ಸಾರ್ವಜನಿಕರಲ್ಲಿದೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇