ಹೊಸನಗರ ತಾಲೂಕು ರಿಪ್ಪನ್ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ-ಮಸರೂರು-ಆಚಾಪುರ ಸಂಪರ್ಕದ ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯ್ತಿ ರಸ್ತೆಮಳೆ ಬಂದಾಗ ಕೆಸರು ಗದ್ದೆಯಂತಾಗಿ ಸಾರ್ವಜನಿಕರು ಓಡಾಡದ ಸ್ಥಿತಿ ನಿರ್ಮಾಣವಾಗುತ್ತಿದೆ.
ಬೆನವಳ್ಳಿಯಿಂದ ಮಸರೂರು, ಮಾಣಿಕರೆ, ಹಾಲಬಾವಿ, ಕೆಂಚನಾಲ, ಆಲುವಳ್ಳಿ, ಗಾಳಿಬೈಲು, ವಿರಕ್ತಮಠ, ಕಮದೂರು, ಮಾದಾಪುರ, ಕುರುಬರಜಡ್ಡು, ಲಕ್ಕವಳ್ಳಿ, ಕೆರೆಹಿತ್ತಲು, ಗಿಳಾಲಗುಂಡಿ, ಮುರುಘಾಮಠ ಆಚಾಪುರ ಇಸ್ಲಾಂಪುರ ಅಂದಾಸುರ ಹೀಗೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯ ಸಂಪರ್ಕದ ರಸ್ತೆಯಾಗಿದ್ದು ಈ ರಸ್ತೆಯನ್ನು ಕಳೆದ ಹಲವಾರು ವರ್ಷಗಳಿಂದ ಈ ಭಾಗದ ಜನಪ್ರತಿನಿಧಿಗಳಿಗೆ ಸಂಪರ್ಕದ ರಸ್ತೆಯ ದುರಸ್ತಿಗಾಗಿ ಮನವಿ ಮಾಡಲಾದರೂ ಕೂಡಾ ಯಾರು ಇತ್ತ ಗಮನ ವಹಿಸದೇ ನಿರ್ಲಕ್ಷ್ಯವಹಿಸಿರುವುದಕ್ಕೆ ಸಾಕ್ಷಿಯಾಗಿದೆ.
ಅರಸಾಳು ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಗೆ ಮಣ್ಣು ಜಲ್ಲಿ ಕಾಣದೇ ಎಷ್ಟೋ ವರ್ಷಗಳಾಗಿವೆ,ಸ್ವಾತಂತ್ರ್ಯ ಬಂದು ಎಂಟು ದಶಕಗಳಾದರು ಕೂಡಾ ಸರಿಯಾದ ಸಂಪರ್ಕ ರಸ್ತೆಗಳಿಲ್ಲದಿರುವುದು ಈ ಭಾಗದ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ ರಾಜ್ಯಕ್ಕೆ ಬೆಳಕು ನೀಡುವ ಉದ್ದೇಶದಿಂದ ಚಕ್ರ ವರಾಹಿ ಮಾಣಿ ಡ್ಯಾಂ ನಿರ್ಮಾಣಕ್ಕಾಗಿ ತಮ್ಮ ಮನೆ ಮಠವನ್ನು ಕಳೆದು ಕೊಂಡು ನಿರಾಶ್ರಿತರಾದ ಸಂತ್ರಸ್ಥ ಕುಟುಂಬಗಳೆ ಹೆಚ್ಚು ವಾಸಿಸುತ್ತಿರುವ ಇಲ್ಲಿನ ಗ್ರಾಮಗಳ ರೈತ ನಾಗರೀಕರ ಗೋಳು ಕೇಳೊರಿಲ್ಲದ ಸ್ಥಿತಿ ಎದುರಾಗಿದೆ.
ಹಾಲಿ ಶಾಸಕ ಹರತಾಳು ಹಾಲಪ್ಪನವರು ಇನ್ನಾದರೂ ಈ ಸಂಪರ್ಕ ರಸ್ತೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಮುಂದಾಗುವರು ಎಂಬ ಆಶಾಭಾವನೆಯಲ್ಲಿ ಇಲ್ಲಿನ ಜನ ಸಾಮಾನ್ಯರಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್