ಮಸೀದಿಯಲ್ಲಿ ಧ್ವನಿವರ್ಧಕ ತೆಗೆಸದಿದ್ದರೆ ನಾವೂ ಹನುಮಾನ್ ಚಾಳೀಸ್ ಕೇಳಿಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಹೀಗೆ ಬೇಕಾ ಬಿಟ್ಟಿ ಹೇಳುವದರಿಂದ ಕೋಮು ಸಂಘರ್ಷವಾಗಬಹುದು. ಧ್ವನಿವರ್ಧಕ ಬಳಸುವ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಬೇಕು. ದೇವಸ್ಥಾನಗಳಲ್ಲಿ, ಚರ್ಚ್ಗಳಲ್ಲಿ ನಡೆಯುವ ರೀತಿ ಬೇರೆಯವರಿಗೆ ತೊಂದರೆಯಾಗದಂತೆ ಮಸೀದಿಯೊಳಗೇ ಧ್ವನಿವರ್ಧಕ ಬಳಸುವುದು ಸೂಕ್ತ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಕಾಂಗ್ರೆಸ್ ನವರು ಅಲ್ಲಾಹುವನ್ನು ಮರೆತರು. ಏಸುಕ್ರಿಸ್ತನನ್ನೂ ಮರೆತರು. ಬುದ್ಧ, ಬಸವ, ಅಂಬೇಡ್ಕರ್ ನೆಪ ಶುರು ಮಾಡಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು ಮಾಡಲಿ. ಈ ನೆಪದಲ್ಲಾದರೂ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳಲಿ ಎಂದರು.
ಕುಮಟಾ ತಾಲ್ಲೂಕಿನ ಗೋಕರ್ಣ ಬಳಿಯ ಮಾದನಗೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ನನ್ನ ವೈಯಕ್ತಿಕ ಅಭಿಪ್ರಾಯ. ಮಸೀದಿಗಳಲ್ಲಿ ಬೆಳಿಗ್ಗೆ, ಸಂಜೆ ಧ್ವನಿವರ್ಧಕಗಳನ್ನು ಬಳಸುವುದರಿಂದ ಓದುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಹಲವು ವರ್ಷಗಳಿಂದ ಅಭಿಪ್ರಾಯಗಳಿವೆ. ಈ ಬಗ್ಗೆ ಮುಸ್ಲಿಂ ಮುಖಂಡರ ಮನವೊಲಿಸಿ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಅಮಿತ್ ಶಾ ರಾಜ್ಯ ಪ್ರವಾಸ ಮಾಡಿದ್ದಾರೆ. ಅದರ ಪರಿಣಾಮವನ್ನು ಸ್ವಲ್ಪ ಕಾದು ನೋಡಿ. ‘ರಾಹುಲ್ ಗಾಂಧಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ಬರಬೇಕು. ಅವರು ಎಲ್ಲೆಲ್ಲಿ ಕಾಲಿಟ್ಟಿದ್ದಾರೋ ಅಲ್ಲೆಲ್ಲ ಕಾಂಗ್ರೆಸ್ ನಿರ್ನಾಮವಾಗಿದೆ. ರಾಜ್ಯದ ಎಲ್ಲ ಕ್ಷೇತ್ರಗಳಿಗೆ ಅವರು ಬರುವುದಾದರೆ ಅದರ ಖರ್ಚನ್ನು ನಾನು ವಹಿಸಿಕೊಳ್ಳುತ್ತೇನೆ’ ಎಂದು ವ್ಯಂಗ್ಯವಾಡಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್