ಮಕ್ಕಳಲ್ಲಿ ಹುದುಗಿರುವ 64 ವಿದ್ಯೆಗಳನ್ನು ಹೊರತೆಗೆಯುವ ಕೆಲಸ ಹಳ್ಳಿ ಮಕ್ಕಳ ರಂಗ ಹಬ್ಬದಂತಹ ಶಿಬಿರಗಳಿಂದ ಮಾತ್ರ ಸಾಧ್ಯ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.
ಗುರುವಾರ ರಿಪ್ಪನ್ ಪೇಟೆಯ ಮಸರೂರು ದಿ. ಎಂ.ಕೆ .ರೇಣುಕಪ್ಪ ಗೌಡ ಪ್ರತಿಷ್ಠಾನ ಹಾಗೂ ಮಲೆನಾಡ ಕಲಾತಂಡದವರು ಏರ್ಪಡಿಸಿದ್ದ ಹಳ್ಳಿ ಮಕ್ಕಳ ರಂಗ ಹಬ್ಬದ ಶಿಬಿರದ ನೈತಿಕ ಶಿಕ್ಷಣ ಹಿನ್ನೆಲೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಮಾತನಾಡಿದರು.
ಶ್ರದ್ಧೆ , ನಂಬಿಕೆ, ಪ್ರೀತಿ, ನಾನು, ನನ್ನದು, ಇವು 5 ನಮ್ಮಲ್ಲಿ ಇದ್ದರೆ ಒಳಗಿನ ಪ್ರತಿಭೆ ತನ್ನಿಂದ ತಾನೆ ಹೊರಬರುತ್ತದೆ. ಸಾಧಿಸುವ ಛಲ ಇದ್ದರೆ ಸಾಧನೆ ಬಹಳ ಸುಲಭ ಜಾನಪದ ಸೊಗಡು ಇಂದು ಮರೆಯಾಗುತ್ತಿದೆ ರಂಗಭೂಮಿಯ ಇಂತಹ ಶಿಬಿರಗಳು ಹಾಗೂ ಕಾರ್ಯಕ್ರಮಗಳಿಂದ ಜಾನಪದ ಜೀವಂತವಾಗಿದೆ. ಎಲ್ಲರನ್ನೂ ಪ್ರೀತಿಸುವ ಸಂಸ್ಕೃತಿ ನಮ್ಮದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೇ ಅಶ್ವಿನಿ ರವಿಶಂಕರ್, ಎಂ.ಡಿ ಇಂದಿರಮ್ಮ, ಆರ್.ಡಿ.ಶೀಲಾ, ರಂಗಕರ್ಮಿ ನಿರ್ದೇಶಕ ಗಣೇಶ್ ಆರ್ ಕೆಂಚನಾಲ. ಇನ್ನು ಮುಂತಾದವರು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್