Breaking
12 Jan 2026, Mon

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ : ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸಿ :ನಾಗರಾಜ ಪರಿಸರ.

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನದಲ್ಲಿ  ಶಿಕ್ಷಣ  ಪಡೆಯುತ್ತಿರುವ ಯುವ ಸಮೂಹ  ಪ್ರತಿಯೊಬ್ಬರನ್ನು  ಗೌರವಿಸುವ  ಮನೋಭಾವನೆಯನ್ನು ಬೆಳೆಸಿಕೊಂಡರೆ  ಉತ್ತಮ ಸಮಾಜ  ನಿರ್ಮಾಣ ಮಾಡಬಹುದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜನೆ ಅಧಿಕಾರಿ  ಡಾ. ನಾಗರಾಜ  ಪರಿಸರ  ಹೇಳಿದರು.

 ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸುವಂತಾಗಬೇಕು. ಅಂತ ಮನೋಭಾವನೆಯನ್ನು ರಾಷ್ಟ್ರೀಯ ಸೇವಾಯೋಜನೆಯ ನೀಡುತ್ತದೆ.  ರಾಷ್ಟ್ರೀಯ ಸೇವಾ ಯೋಜನೆಯ ಮೂಲ ಉದ್ದೇಶ ಜಾತಿ ಮತ ಪಂಥಗಳ ಬೇಧವನ್ನು ಮರೆತು ಸದ್ಭಾವನೆಯಿಂದ ಎಲ್ಲರಲು ಬೆರೆತು ಸೇವೆಯನ್ನು ಮಾಡುವ ಉದ್ದೇಶವನ್ನು ಹೊಂದಲಿ ಜೊತೆಯಲ್ಲಿಯೆ ಗ್ರಾಮೀಣ ಪ್ರದೇಶದ ಜನತೆಯಲ್ಲಿ ಆರೋಗ್ಯ ಶಿಕ್ಷಣ ಮತ್ತು ಪರಿಸರದ ಬಗ್ಗೆ ಅರಿವನ್ನು ಮೂಡಿಸುವುದರ ಜೊತೆಗೆ ಪರಿಸರದ ಸಂರಕ್ಷಣೆಯ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಹಾಗೆಯೇ ಇರುವ ಎಲ್ಲಾ ರಾಷ್ಟ್ರೀಯ ಸೇವಾಯೋಜನೆಯ ಶಿಬಿರಾರ್ಥಿಗಳು ವಾರ್ಷಿಕ ಶಿಬಿರದಲ್ಲಿನ ಪಡೆದುಕೊಂಡಂತಹ ಅನುಭವಗಳನ್ನು ಮುಂದಿನ ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮತ್ತು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ನಾಗರಿಕರಾಗಿ ಸಮಾಜದ ಮುಖ್ಯವಾಹಿನಿಗೆ ಬರಬಹುದು ಎಂದು ಹೇಳಿದರು.

 ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ತಮ್ಮ ಶೈಕ್ಷಣಿಕ  ಚಟುವಟಿಕೆಯ  ಜೋತೆಗೆ ಸಮಾಜದ  ಸೇವೆಯಲ್ಲಿ ತೊಡಿಗಿಕೊಳ್ಳಲಿ ಎನ್ನುವ ಸದುದ್ದೇಶ ದಿಂದ ನಮ್ಮ ಕಾಲೇಜ್ ನಲ್ಲಿ ಎನ್. ಎಸ್. ಎಸ್. ಘಟಕ  ರಚನೆ ಯಾಗಿದ್ದು ವಿದ್ಯಾರ್ಥಿಗಳು  ಸಮಾಜ ಸೇವೆಯ ಜೊತೆಗೆ ಸಾಮಾಜಿಕ ಹಾಗೂ  ಸಾಂಸ್ಕೃತಿಕ  ಚಟುವಟಿಕೆಗಳಲ್ಲಿ  ಭಾಗಿಯಾಗಲು  ಅನುವು ಮಾಡಿ ಕೊಡಲಾಗಿದೆ ಎಂದರು.


ಸಮಾರೋಪ ಸಮಾರಂಭದ  ಕಾರ್ಯಕ್ರಮದಲ್ಲಿ ಹೆದ್ದಾರಿ ಪುರ  ಗ್ರಾಮಪಂಚಾಯಿತಿ  ಉಪಾಧ್ಯಕ್ಷೆ ಲೀಲಾವತಿ. ಗ್ರಾಮ ಪಂಚಾಯತಿ ಸದಸ್ಯೆ  ಕವಿತಾ.ಎನ್. ಎಸ್. ಎಸ್. ಅಧಿಕಾರಿಗಳಾದ  ದೇವರಾಜ್. ಶಿಲ್ಪಾ ಪಾಟೀಲ್.ಹಾರಂಬಳ್ಳಿ  ಸರಕಾರಿ ಪ್ರಾಥಮಿಕ ಶಾಲೆಯ  ಮುಖ್ಯ ಶಿಕ್ಷಕ  ಮೋಹನ್. ಎಸ್. ಡಿ. ಎಂ. ಸಿ. ಅಧ್ಯಕ್ಷ ವಿಜೇಯೇಂದ್ರ.ಉಪನ್ಯಾಸಕರಾದ ಡಾ. ತಿಪ್ಪೇಸ್ವಾಮಿ.ಶ್ರೀಧರ್.ರವೀಂದ್ರ. ಡಿ.ಸೀತಾರಾಮ. ಗಣಪತಿ. ಇನ್ನಿತರರಿದ್ದರು.

  ಎನ್ಎಸ್  ಎಸ್ ಶಿಬಿರಾರ್ಥಿಗಳಾದ  ಮಾನಸ  ಕಾರ್ಯಕ್ರಮವನ್ನು ನಿರೂಪಿಸಿ ಪೂಜಾ ಸ್ವಾಗತಿಸಿ ಎನ್. ಎಸ್. ಅಧಿಕಾರಿ  ದೇವರಾಜ್ ವಂದಿಸಿದರು

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *