ಇಂದು ಸಂಜೆ ಸುರಿದ ಧಾರಾಕಾರ ಮಳೆ ಗಾಳಿಗೆ ಇಲ್ಲಿನ ಸಾಗರ ರಸ್ತೆಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಬೃಹದಾಕಾರದ ಮರವೊಂದು ರಸ್ತೆ ಮೇಲೆ ಬಿದ್ದು ವಿದ್ಯುತ್ ಟ್ರಾನ್ಸ್ ಫಾರಂ ವಿದ್ಯುತ್ ಕಂಬ ತುಂಡಾಗಿ ಧರೆಗೆ ಉರುಳಿದ ಘಟನೆ ನಡೆದಿದೆ.
ಈ ಘಟನೆ ನಡೆಯುವ ಸಂದರ್ಭದಲ್ಲಿ ಸಾಗರ ಕಡೆಯಿಂದ ಬರುತ್ತಿದ್ದ ಸರಕು ಸಾಗಾಣಿಕೆ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು , ಗಾಳಿ ಮಳೆಗೆ ಹೆದರಿ ವಾಹನ ನಿಲ್ಲಿಸಿ ಇಳಿದು ಹೊರ ಹೋದಾಗ ಈ ಘಟನೆ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇಂದು ಸೋಮವಾರ ಆಗಿದ್ದರಿಂದ ಸೋಮವಾರದ ಸಂತೆ ಯ ಜನರ ದಟ್ಟಣೆ ಈ ರಸ್ತೆಯಲ್ಲಿ ಜಾಸ್ತಿ ಇತ್ತು.ಮಳೆ ಬರುತ್ತಿದ್ದ ಕಾರಣ ಸಾರ್ವಜನಿಕರು ಅಂಗಡಿ ಮುಂಗಟ್ಟುಗಳಲ್ಲಿ ಜನರು ನಿಂತಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ಈ ಘಟನೆಗೆ ವಿದ್ಯುತ್ ಇಲಾಖೆಯವರು ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.ಪ್ರತಿ ವರ್ಷ ವಿದ್ಯುತ್ ಲೈನ್ ಗೆ ಯಾವುದೇ ಮರದ ಕೊಂಬೆಗಳು ತಾಗದಂತೆ ಕಡಿತಲೆ ಮಾಡುವುದಕ್ಕೆ ಲಕ್ಷಾಂತರ ವೆಚ್ಚ ಮಾಡುತ್ತಿದ್ದರೂ ಕಚೇರಿಯ ಮುಂಭಾಗದಲ್ಲಿ ಇದ್ದ ಮರವನ್ನು ತೆರವುಗೊಳಿಸದೇ ಇರುವುದು ಮೆಸ್ಕಾಂ ಇಲಾಖೆಯವರ ಕಾರ್ಯಕ್ಷಮತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.
ಈ ಘಟನೆಯಿಂದ ಇಂದು ರಿಪ್ಪನ್ ಪೇಟೆ ಕತ್ತಲೆಯಲ್ಲಿ ಇರಬೇಕಾದ ಸನ್ನಿವೇಶ ಒದಗಿಬಂದಿದೆ.
ಇನ್ನಾದರೂ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ಇಂತಹ ಅನಾಹುತ ಆಗದಂತೆ ತಡೆಯ ಬೇಕಾಗುವುದು ಅನಿವಾರ್ಯವಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್