Headlines

ರಿಪ್ಪನ್ ಪೇಟೆ : ಸಿಡಿಲಿನ ಆರ್ಭಟಕ್ಕೆ ಜಾನುವಾರುಗಳು ಸಾವು

ರಿಪ್ಪನ್ ಪೇಟೆ : ಪಟ್ಟಣದ  ಸುತ್ತಮುತ್ತ ಇಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು ಹಲವು ಅನಾಹುತಗಳಿಗೆ ಎಡೆ ಮಾಡಿಕೊಟ್ಟಿದೆ.

ಇಂದು ಸಂಜೆ ಸುರಿದ ಭಾರೀ ಮಳೆಗೆ ಹಾಲುಗುಡ್ಡೆ ಗ್ರಾಮದ ಚಂದ್ರಶೇಖರ್ ಎಂಬುವರಿಗೆ ಸೇರಿದ 2 ಹಸುಗಳು ಸಿಡಿಲಿನ ಆರ್ಭಟಕ್ಕೆ ಬಲಿಯಾಗಿವೆ.
ಚಂದ್ರಶೇಖರ್ ರವರ ಮನೆಯ ಮುಂದೆ ಮರದ ಆಸರೆಯಲ್ಲಿ ನಿಂತಿದ್ದ ಹಸುಗಳು ಏಕಾಏಕಿ ಸಿಡಿಲು ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿವೆ.ಹಸುಗಳ ಸಾವಿನಿಂದ ಇದರಿಂದಲೇ ಜೀವನ ಸಾಗಿಸುತ್ತಿದ್ದ ಬಡ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ ವರದಿ ಪಡೆದುಕೊಂಡು ಹೋಗಿರುತ್ತಾರೆ.

ಈ ಬಡ ಕುಟುಂಬಕ್ಕೆ ಸೂಕ್ತವಾದ ಪರಿಹಾರ ಒದಗಿಸುವತ್ತ ಅಧಿಕಾರಿವರ್ಗದವರು ಗಮನಹರಿಸಿದರೆ ಒಂದು ಬಡ ಕುಟುಂಬಕ್ಕೆ ನ್ಯಾಯ ದೊರಕುವಂತಾಗುತ್ತದೆ.

About The Author

Leave a Reply

Your email address will not be published. Required fields are marked *

Exit mobile version