ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಅರಣ್ಯ ವಲಯದ ಆಗುಂಬೆ ಗ್ರಾಮ ಪಂಚಾಯಿತಿಯ ಹೊಸೂರು ಬಳಿಯ ಅಸಿಮನೆಯಲ್ಲಿ ಕಾಡುಕೋಣವೊಂದು ರೈತರೊಬ್ಬರಿಗೆ ತಿವಿದ ಘಟನೆ ಸೋಮವಾರ ಸಂಜೆ ನಡೆದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕಳುಹಿಸಲಾಗಿದೆ.
ಅಸಿಮನೆ ರಾಘವೇಂದ್ರ ಭಟ್ ಎಂಬುವರ ತೋಟಕ್ಕೆ ಬಂದಿದ್ದ ಕಾಡು ಕೋಣಗಳನ್ನು ರಾಘವೇಂದ್ರ ಭಟ್ ಮತ್ತು ಅವರ ಪತ್ನಿ ತೋಟದಿಂದ ಬೆರೆಸಲು ಹೋಗಿದ್ದಾಗ ಏಕಾಏಕಿ ಹೊಟ್ಟೆಗೆ ಇರಿದಿದೆ. ಗಂಭೀರ ಗಾಯಗೊಂಡ ರಾಘವೇಂದ್ರ ಭಟ್ ಅವರನ್ನು ಆಗುಂಬೆ ಭಾಗದ ಪ್ರಮುಖ ನಾಯಕ ಹಸಿರುಮನೆ ನಂದನ್ ಮತ್ತು ಸ್ನೇಹಿತರು ತಮ್ಮ ಕಾರಲ್ಲೇ ಕರೆದೋಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ 108ಆಂಬುಲೆನ್ಸ್ ಮೂಲಕ ಮಣಿಪಾಲಕ್ಕೆ ಕಳುಹಿಸಲಾಯಿತು. ಇದೀಗ ಚೇತರಿಕೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆ ಬಗ್ಗೆ ಮಾಹಿತಿ ಬಂದ ತಕ್ಷಣ ಆಗುಂಬೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಹಸಿರುಮನೆ ಹಾಗೂ ಅವರ ಸ್ನೇಹಿತರುಗಳು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ಅಸ್ವಸ್ಥಗೊಂಡ ರಾಘವೇಂದ್ರ ಭಟ್ ಅವರಿಗೆ ಚಿಕಿತ್ಸೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂದನ್ ರವರ ಪ್ರಾಮಾಣಿಕ ಸೇವೆಗೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತ ಪಡಿಸಿ ಅಭಿನಂದಿಸಿದ್ದಾರೆ.
ತೀರ್ಥಹಳ್ಳಿ ಹೊಸನಗರ ಭಾಗದಲ್ಲಿ ಕಾಡುಕೋಣಗಳ ಹಾವಳಿ ಜಾಸ್ತಿಯಾಗುತ್ತಿದ್ದು, ಕಳೆದ 6 ತಿಂಗಳ ಹಿಂದೆ ನಾಲೂರು ಬಳಿಯ ಕಾಡಬೈಲ್ ಸುರೇಶ ಎಂಬುವವರಿಗೆ ಕಾಡುಕೋಣ ತಿವಿದು ಅವರು ಗಂಭೀರ ಗಾಯಗೊಂಡಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್