ವಿಜ್ರಂಭಣೆಯಿಂದ ಜರುಗಿದ ಶ್ರೀ ಸಿದ್ಧಿವಿನಾಯಕಸ್ವಾಮಿ ಪ್ರತಿಷ್ಠವರ್ಧಂತ್ಯೋತ್ಸವ : ವಿನಯ್ ಗುರೂಜಿಯವರಿಂದ ಆಶೀರ್ವಚನ

ರಿಪ್ಪನ್‌ಪೇಟೆ: ಪಟ್ಟಣದ ಆರಾಧ್ಯ ದೈವ ಶ್ರೀಸಿದ್ಧಿವಿನಾಯಕ ಸ್ವಾಮಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ೫ನೇ ವರ್ಷದ ಪ್ರತಿಷ್ಠಾವರ್ಧಂತ್ಯೋತ್ಸವವು ವಿಜ್ರಂಭಣೆಯಿಂದ ಜರುಗಿತು.

ಶನಿವಾರ ಮುಂಜಾನೆ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಃ ವಾಚನ, ನಾಂದಿ ಸಮಾರಾಧನೆ, ಮಹಾಸಂಕಲ್ಪ, ಋತ್ವಿಗ್ವರಣ, ಸಮೂಹಿಕ ಷಣ್‌ನಾರಿಕೇಳ ಗಣಹೋಮ, ನವಗ್ರಹ ಹೋಮದೊಂದಿಗೆ ತೀರ್ಥಪ್ರಸಾದ ವಿನಿಯೋಗ ನಡೆಯಿತು.

ಸ್ವಾಮಿಯ ಸನ್ನಿಧಿಯಲ್ಲಿ ಮಂಡಲ ರಚನೆ, ಬ್ರಹ್ಮಕಲಶ ಸ್ಥಾಪನೆ, ಮತ್ತು ಕಲಶಾಧಿವಾಸ ಹೋಮ, ದೇವಿ ಸನ್ನಿಧಿಯಲ್ಲಿ ಪಂಚವಿಂಶತಿ ದ್ರವ್ಯ ಕಲಶ ಸಹಿತ ಬ್ರಹ್ಮಕಲಶ ಸ್ಥಾಪನೆ ಪೂಜಾದಿಗಳು ನಡೆದವು, ಭಾನುವಾರ ಬೆಳಿಗ್ಗೆ ಶಿವಮೊಗ್ಗ ಆಗಮಿಕ ವೇದಮೂರ್ತಿ ಬ್ರಹ್ಮಶ್ರೀ ವಸಂತ ಭಟ್ಟ ಹಾಗೂ ಚಂದ್ರಶೇಖರ ಭಟ್ಟ, ಗುರುರಾಜ ಭಟ್ಟರವರ ನೇತೃತ್ವದಲ್ಲಿ ಕಲಾವೃದ್ಧಿ ಹೋಮ, ಕಲಾಷಾಭೀಷೇಕ
ಮಹಾಪೂಜೆ, ಕನಕಾಭಿಷೇಕ, ವಿಶೇಷ ರಂಗಪೂಜೆ, ದಿಂಡಿದೀಪೋತ್ಸವ, ಉಯ್ಯಾಲೆ ಸೇವೆ, ವಿಶೇಷ ರಥೋತ್ಸವದ ಮಹಾಮಂಗಳಾರತಿ ನಂತರ ತೀರ್ಥಪ್ರಸಾದ ವಿನಿಯೋಗ ಜರುಗಿದವು.

ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪಿಗ್ಮಿ ಸಂಗ್ರಹ ಒಕ್ಕೂಟದವರಿಂದ ಭಕ್ತಾಧಿಗಳಿಗೆ ಮಜ್ಜಿಗೆ ವಿತರಿಸಲಾಯಿತು.


ಸಂಜೆ ಧಾರ್ಮಿಕ ಕಾರ್ಯಕ್ರದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಟ್ಟೆಹಕ್ಲು ಸುಧಾಕರ, ಕು|| ಪ್ರಣತಿ ಅಣ್ಣಪ್ಪ, ಕು|| ಶ್ರದ್ಧಾಸುಧಾಕರ ಇವರಿಂದ ಗಾಯನ ಕಾರ್ಯಕ್ರಮ, ನಂತರ ಶಿವಮೊಗ್ಗದ ಯಕ್ಷಕಲಾ ಬಳಗದಿಂದ ‘ಭಸ್ಮಾಸುರ ಮೋಹಿನಿ’ ಯಕ್ಷಗಾನ ಪ್ರದರ್ಶನ ನಡೆಯಿತು.

ಸಂಜೆ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಮಹಾ ಮಗಳಾರತಿಯಲ್ಲಿ ಪಾಲ್ಗೊಂಡರು ನಂತರ ಭಕ್ತಾಧಿಗಳಿಗೆ ಆಶೀರ್ವಚನ ನೀಡಿದರು.


ವರ್ಧಂತ್ಯೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಶಾಸಕ ಹರತಾಳು ಹಾಲಪ್ಪ ಭಾಗವಹಿಸಿ, ಕುಂಭಾಭಿಷೇಕದಲ್ಲಿ ಪಾಲ್ಗೊಂಡರು. ವ್ಯವಸ್ಥಪನಾ ಸಮಿತಿಯ ಗಣೇಶ ಕಾಮತ್, ಸೇವಾ  ಸಂಸ್ಥೆಯ ಎನ್. ಸತೀಶ್,ಎಂ ಬಿ ಮಂಜುನಾಥ್, ಸುಧೀಂದ್ರ ಪೂಜಾರಿ,ಉದ್ಯಮಿ ನಾಗರಾಜಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

24 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

24 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago