Headlines

ಶಾಂತಿ ಮತ್ತು ಪ್ರೇಮದಿಂದ ಭಾವೈಕ್ಯದ ಜೀವನ ಸಾಧ್ಯ :

ರಿಪ್ಪನ್ ಪೇಟೆ : ಪ್ರೀತಿ, ಪ್ರೇಮ,ಮತ್ತು ಭಾವೈಕ್ಯದ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬಹುದು. ಜಗತ್ತಿನಲ್ಲಿರುವ ಪ್ರತಿಯೊಬ್ಬರಿಗೂ ಪ್ರೀತಿ-ಪ್ರೇಮ ಮತ್ತು ಶಾಂತಿಯನ್ನು ಹಂಚೋಣ ಆ ಮೂಲಕ ಭಾವೈಕ್ಯತೆ ಮತ್ತು ಸಾಮರಸ್ಯದ ಸಮಾಜವನ್ನು ನಿರ್ಮಾಣ ಮಾಡಬಹುದೆಂದು  ರೆ. ಫಾ.ಬಿನೋಯ್ ಹೇಳಿದರು.

ಪಟ್ಟಣದ ಗುಡ್ ಶಫರ್ಡ್  ಚರ್ಚಿನಲ್ಲಿ ಶುಕ್ರವಾರ ಗುಡ್ ಫ್ರೈಡೆ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಗತ್ತಿಗೆ ಶಾಂತಿ ಮಂತ್ರವನ್ನು ಪಡಿಸಿದ ಯೇಸು ಕ್ರಿಸ್ತರು  ಪ್ರೀತಿ ಪ್ರೇಮ ಭಾವ್ಯಕ್ಯತೆ ಮತ್ತು ಸಾಮರಸ್ಯದಿಂದ  ಬದುಕಿದಾಗ ಮಾತ್ರ ಸಮಾಜದಲ್ಲಿ ನೆಮ್ಮದಿಯನ್ನು ಕಾಣಬಹುದು. ಪ್ರತಿಯೊಬ್ಬರು  ದ್ವೇಷ,ಅಸೂಯೆ, ಮುಂತಾದ ಕೆಟ್ಟ ಗುಣಗಳನ್ನು ಬಿಟ್ಟು . ಜಗತ್ತಿನ ಜೀವ ಸಂಕುಲದಲ್ಲಿ ನಾವುಗಳೆಲ್ಲರೂ ಒಂದೇ ಎಂಬ ಭಾವನೆಯನ್ನು ಅಳವಡಿಸಿಕೊಂಡು. ಜಾತಿ ಮತ ಪಂಥಗಳ ಬೇಧವನ್ನು ಮರೆತು ಸದ್ಭಾವನೆಯಿಂದ ಎಲ್ಲರಲು ಬೆರೆತು ಸೇವೆಯನ್ನು ಮಾಡಿದಾಗ ಮಾತ್ರ  ಯೇಸುಕ್ರಿಸ್ತರು ಜಗತ್ತಿಗೆ ಸಾರಿದ ಶುಭಸಂದೇಶಕ್ಕೆ ಅರ್ಥ ಸಿಕ್ಕಿದಂತಾಗುತ್ತದೆ.ಅನುಕಂಪ, ದಯೆ, ಕರುಣೆ, ಮಾನವೀಯತೆ, ಇವುಗಳೆಲ್ಲವೂ ಪ್ರತಿಯೊಬ್ಬರ ಮುಖ್ಯಗುಣ ಗಳಾಗಿರಬೇಕು ಎಂದರು.

ಗುಡ್ ಶಫರ್ಡ್ ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನಗಳು ಮುಗಿದ ನಂತರ  ಯೇಸು ಸ್ವಾಮಿಯ ಮೂರ್ತಿಯನ್ನು  ಶಿಲುಬೆಯ ಹಾದಿಯ ಮೂಲಕ ಮಳವಳ್ಳಿ ಗ್ರಾಮದವರೆಗೆ  ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.
ಗುಡ್ ಫ್ರೈಡೆ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ  ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಪಾಲ್ಗೊಂಡಿದ್ದರು.

About The Author

Leave a Reply

Your email address will not be published. Required fields are marked *

Exit mobile version