ಶಾಂತಿಯಲ್ಲಿದ್ದ ರಾಜ್ಯದಲ್ಲಿ ಕೊಲೆ, ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಒಬ್ಬ ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನೆ ಕೊಡುತ್ತಾನೆ.ತಲೆಗಳನ್ನು ಕತ್ತರಿಸಿ, ರುಂಡಗಳನ್ನು ಬೇರೆ ಮಾಡಿ ಎಂದು ಪ್ರಚೋಧಿಸುವ ಹೇಳಿಕೆ ಕೊಡುತ್ತಾರೆ. ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡಿಯುವುದನ್ನು ನೋಡುತ್ತಿದ್ದಾರೆ. ಆಸ್ಪತ್ರೆ, ದೇವಾಲಯ, ಪೊಲೀಸ್ ತಲೆಗಳನ್ನು ಹುಡುಕಿ ಕಲ್ಲು ಹೊಡೆಯುತ್ತಾರೆ. ಈ ರೀತಿಯ ಕಲ್ಲು ತೂರಾಟ ಮಾಡುವ ಪುಂಡರಿಗೆ ತಕ್ಕ ಶಿಕ್ಷೆಯಾಗಬೇಕು. ಇದನ್ನು ನೇರವಾಗಿ ಎದುರಿಸುವ ಶಕ್ತಿ ಹಿಂದೂ ಸಂಘಟನೆಗಳಿಗಿದೆ. ಆದರೆ ನಾವು ಕಾನೂನು ಕೈಗೆ ತೆಗೆದುಕೊಳ್ಳಲು ಇಷ್ಟಪಡುವುದಿಲ್ಲ ಎಂದರು.
ಇನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಇವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ. ಪ್ರಚೋದನೆ ನಂತರ ಮೌಲ್ವಿ ಹೇಡಿಯ ರೀತಿ ಓಡಿ ಹೋಗಿದ್ದಾನೆ. ಗುಂಡಾಗಿರಿಗೆ ಪ್ರಚೋದನೆ ಕೊಟ್ಟು ಓಡಿಹೋದ ರಾಷ್ಟ್ರದ್ರೋಹಿ ಮೌಲ್ವಿ ಬಂಧನಕ್ಕೆ ಒತ್ತಾಯಿಸುತ್ತೇನೆ. ಕೆಜಿ ಹಳ್ಳಿ, ಡಿಜಿ ಹಳ್ಳಿ, ಹರ್ಷ, ಚಂದ್ರು ಕೊಲೆಯಾಯಿತು. ಇದೀಗ ಹುಬ್ಬಳಿ ಘಟನೆ. ಈ ರೀತಿ ಕೊಲೆ, ದೊಂಬಿ ಮಾಡುವ ವ್ಯಕ್ತಿಗಳನ್ನು ಬಿಡಬಾರದು ಸಿಸಿ ಟಿವಿ ಆಧರಿಸಿ, ಈಗಾಗಲೇ ಬಂಧನ ಮಾಡಲಾಗುತ್ತಿದೆ. ಗೂಂಡಾ ಕಾಯ್ದೆಅಡಿ ಅವರನ್ನು ಬಂಧನ ಮಾಡಿ, ಗಡಿಪಾರು ಮಾಡಬೇಕು. ಕೊಲೆ, ದೊಂಬಿ ಮಾಡುವುದು, ಬೇಲ್ ಪಡೆದು ವಾಪಸ್ ಬರೋದು ಅವರಿಗೆ ಅಭ್ಯಾಸ ಅಗಿದೆ. ಘಟನೆಗಳಿಗೆ ಕಾರಣರಾದ ವ್ಯಕ್ತಿ, ಸಂಘಟನೆ, ಪಕ್ಷದ ಬಗ್ಗೆ ಗಮನ ಹರಿಸಬೇಕು. ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗ ಆಯ್ತು. ಇನ್ನೆಲ್ಲಿ ಗಲಭೆ ಮಾಡುತ್ತಾರೋ ಗೊತ್ತಾಗಲ್ಲ, ಗಮನ ಹರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಇನ್ನು ಇಷ್ಟೆಲ್ಲಾ ಘಟನೆ ನಡೆದರೂ ಕಾಂಗ್ರೆಸ್ ಖಂಡಿಸುವ ಕೆಲಸ ಮಾಡಿಲ್ಲ. ಕಲ್ಲಂಗಡಿ ಒಡೆದಾಗ ಎಲ್ಲರೂ ಬೊಬ್ಬೆ ಹಾಕಿದರು. ಪೊಲೀಸರ ತಲೆ ಒಡೆದರೂ ಇಂದು ಮಾತನಾಡುತ್ತಿಲ್ಲ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಕುಮಾರಸ್ವಾಮಿ ಮಾತನಾಡುತ್ತಿಲ್ಲ. ಎಲ್ಲಾ ಮುಸಲ್ಮಾನರು ರಾಷ್ಟ್ರದ್ರೋಹಿಗಳು ಎಂದು ನಾನು ಹೇಳಲ್ಲ. ಇಂತಹ ಕೃತ್ಯದಲ್ಲಿ ಭಾಗವಹಿಸಿದವರು ರಾಷ್ಟ್ರದ್ರೋಹಿಗಳು. ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಮುಸಲ್ಮಾನರ ಓಲೈಕೆ ಮಾಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್, ಜೆಡಿಎಸ್ ಅಧಿಕಾರದ ದಾಹಕ್ಕೆ ಕೊಲೆ, ದೊಂಬಿ ಗಳಾಗುತ್ತಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಬೊಮ್ಮಾಯಿ ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್