ಹುಂಚಾ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನಡೆದ ನವೋದಯ ಶಾಲೆ – ಉಚಿತ ತರಬೇತಿ ಶಿಬಿರ :

ಹುಂಚ ಗ್ರಾಮದ ಶ್ರೀ ರಂಗರಾವ್ ಸ್ಮಾರಕ ಸಭಾಭವನ, ಶ್ರೀ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನವೋದಯ ಶಾಲೆ – ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಭಾಗವಾಗಿ “ಪೋಷಕರ ಸಭೆ ಮತ್ತು ಸಂವಾದ” ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಈ ಶಿಬಿರದಲ್ಲಿ ಹುಂಚ ಗ್ರಾಮ ವ್ಯಾಪ್ತಿಯ, 8 ವಿವಿಧ ಶಾಲೆಗಳಿಂದ, 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಪ್ರವೇಶ ಪರೀಕ್ಷೆ ಕಟ್ಟಿರುವ 21 ಮಕ್ಕಳು ಮತ್ತು ಅವರ ಪೋಷಕರು ಭಾಗವಹಿಸಿದ್ದರು.

ಈ ಕಾರ್ಯಕ್ರಮದ ಅತಿಥಿಗಳಾಗಿ ಲೇಖಕರು ನವೋದಯ ಮಾಸ್ಟರ್ ಗೈಡ್ ಮತ್ತು ಉಪನ್ಯಾಸಕರಾದ ಬಿ ಪ್ರಕಾಶ್ ಶಿವಮೊಗ್ಗ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಯ ಮಹತ್ವ ಹಾಗೆ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಎಲ್ಲರಿಗೂ ವಿವರಿಸಿದರು. ನವೋದಯ ಪ್ರವೇಶಕ್ಕೆ ಪರೀಕ್ಷಾ ಪೂರ್ವ ಸಿದ್ಧತೆಯಲ್ಲಿರುವ ವಿದ್ಯಾರ್ಥಿಗಳಿಗೆ ನವೋದಯ ಪರೀಕ್ಷಾ ಸಲಹೆ ಮತ್ತು ಸೂಚನೆಗಳು ವಿವರವಾಗಿ ತಿಳಿಸಿದರು. ಈ ಉಚಿತ ತರಬೇತಿಯ ಸದುಪಯೋಗ ಮಾಡಿಕೊಂಡು, ಗುರುದಕ್ಷಿಣೆಯಾಗಿ, ನವೋದಯಕ್ಕೆ ತೇರ್ಗಡೆಯಾಗಿ ಎಂದು ಶುಭ ಹಾರೈಸಿ ಆಶೀರ್ವದಿಸಿದರು.

ಈ ಶಿಬಿರದ ರೂವಾರಿಯಾದ ಪ್ರಕಾಶ್ ಜೋಯಿಸ್ ಮಾತನಾಡಿ, “ನವೋದಯ” ಎಂದರೆ ನಿಮ್ಮ ಕನಸುಗಳನ್ನು ನನಸು ಮಾಡುವ ಒಂದು ಸುವರ್ಣ ಅವಕಾಶ. ನನಗೆ ಹೆಮ್ಮೆ ಇದೆ, ನಾನು ಗಾಜನೂರಿನ ನವೋದಯ ಶಾಲೆಯ ವಿದ್ಯಾರ್ಥಿ ಎನ್ನುವುದಕ್ಕೆ ನಮ್ಮ ಉದ್ದೇಶ, ಮಕ್ಕಳ ಕಲಿಕಾ ಜ್ಞಾನವನ್ನು ವೃದ್ಧಿಸುವುದು. ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಜ್ಞಾನ, ಸಲಹೆ, ಸೂಚನೆಗಳನ್ನು ಈ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಮನವರಿಕೆ ಮಾಡಿಕೊಡುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹುಂಚ ಗ್ರಾಪಂ ಉಪಾಧ್ಯಕ್ಷ ದೇವೇಂದ್ರ ಜೈನ್ ಮಾತನಾಡಿ, ಮಲೆನಾಡಿನ ಭಾಗದಲ್ಲಿ ಶಿಕ್ಷಣಕ್ಕೆ ಒತ್ತು ಕೊಡುವ ಕೆಲಸ ಆಗಬೇಕಿದೆ, ಕೋವಿಡ್ ಪರಿಸ್ಥಿತಿ ಇಂದ ಕೆಲವು ಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ. ಇಂತಹ ಶಿಬಿರಗಳಿಂದ ಸಮಾಜದಲ್ಲಿ ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.

ರಾಷ್ಟ್ರೀಯ ವಿದ್ಯಾ ಸಂಸ್ಥೆ ಕೋಣಂದೂರು ಮುಖ್ಯ ಶಿಕ್ಷಕ ಸಂತೋಷ್ ಮಾತನಾಡಿ, “ನಮ್ಮ ಧ್ಯೇಯ – ಉತ್ತಮ ಶಿಕ್ಷಣಕ್ಕೆ ಅಡಿಪಾಯ”. ನಮ್ಮ ಊರಿನ ಮಕ್ಕಳು, ಉತ್ತಮ ಶಿಕ್ಷಣ ಪಡೆಯಬೇಕು, ಭವಿಷ್ಯದಲ್ಲಿ ಸಮಾಜಕ್ಕೆ ಉತ್ತಮ ಮಾದರಿ ನಾಗರಿಕ ಆಗುವಂತೆ ಬದುಕಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಶಿಬಿರದ ಸಂಚಾಲಕರಾದ ಅಭಿಷೇಕ್, ಪ್ರಶಾಂತ್ ಶಿಕ್ಷಕರು, ದಿನೇಶ್ ಶಿಕ್ಷಕರು, ಆದಿತ್ಯ ಶಿಕ್ಷಕರು, ಸಿಂಧು (ಹಳೆ ನವೋದಯ ವಿದ್ಯಾರ್ಥಿ) ಪಾಲ್ಗೊಂಡು ತಮ್ಮ ಅನುಭವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಜಗತ್ತಿಗೆ ತಮ್ಮ 32 ವರುಷಗಳ ಕೊಡುಗೆ ಕೊಟ್ಟಂತಹ, ನವೋದಯ ಮಾಸ್ಟರ್ ಗೈಡ್ ಖ್ಯಾತಿಯ ಬಿ. ಪ್ರಕಾಶ್ ಅವರಿಗೆ ಶಿಬಿರದ ವತಿಯಿಂದ ಸನ್ಮಾನಿಸಲಾಯಿತು.

ನವೋದಯ ಪ್ರವೇಶ ಪರೀಕ್ಷೆ ಈ ತಿಂಗಳ 30ರಂದು ನಡೆಯಲಿದ್ದು, ಶಿಬಿರಾರ್ಥಿಗಳು ಉತ್ತಮ ತಯ್ಯಾರಿ ನಡೆಸಿದ್ದಾರೆ. ಈ ಶಿಬಿರ ಜನವರಿ 16 ರಿಂದ ಏಪ್ರಿಲ್ 29ರ ವರೆಗೆ ಇದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಪರೀಕ್ಷೆ ಕಟ್ಟಿದ ಮಕ್ಕಳಿಗೆ ಉಚಿತ ಕೋಚಿಂಗ್ ಕೊಡಲಾಗುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

10 hours ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

10 hours ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

10 hours ago

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

1 day ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

1 day ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

1 day ago