ಹೊಸನಗರ ವಿಧಾನ ಸಭಾ ಕ್ಷೇತ್ರ ಮರಳಿ ಪಡೆಯುವ ಹೋರಾಟದ ಪೂರ್ವಭಾವಿ ಸಭೆ : ಹೋರಾಟಕ್ಕೆ ನಿಟ್ಟೂರು ಶ್ರೀಗಳ ಸಾರಥ್ಯ !!!!!

ಹೊಸನಗರ ವಿಧಾನಸಭಾಕ್ಷೇತ್ರ ಹೋರಾಟದ ಕೂಗು ಸಂಘಟನೆಯೇ ಶಕ್ತಿ ಎಂಬ ದ್ಯೇಯದೊಂದಿಗೆ ಮುಂದಿನ ಹೋರಾಟದ ರೂಪುರೇಷೆ ಸಭೆ ನಡೆಯಿತು.

ಸಂಘಟನೆಯೇ ಮೂಲಶಕ್ತಿ ಎಂಬ ಯೋಜನೆ ಮುಖಾಂತರ ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ  ಹೋರಾಟದ ಪೂರ್ವಭಾವಿ ರೂಪುರೇಷಗಳನ್ನು ಚರ್ಚಿಸುವುದಕ್ಕಾಗಿ ಇಂದು ಸರ್ವಧರ್ಮದ ಪ್ರಮುಖರು, ಸರ್ವ ಪಕ್ಷದ ಪ್ರಮುಖರು ಹಾಗೂ ಹೊಸನಗರ ತಾಲೂಕಿನ ನಾಗರಿಕರು ಉಪಸ್ಥಿತರಿದ್ದರು.

ಈ ಸಭೆಯ ಉದ್ದೇಶ ಸಂಘಟನೆ ಮತ್ತು ಹೋರಾಟದ ಉದ್ದೇಶವನ್ನು ಕಾರ್ಯರೂಪಕ್ಕೆ ತರಲು ಬೇಕಾದಂತಹ ಯೋಜನೆಯನ್ನು ರೂಪಿಸುವುದಾಗಿತ್ತು ಅದರಂತೆ ಉಪಸ್ಥಿತರಿದ್ದ ಮುಖಂಡರುಗಳು ಸ್ವಾಮೀಜಿಗಳು ಮತ್ತು ಸದಸ್ಯರುಗಳಿಂದ ಹಲವು ವಿಷಯಗಳ ಪ್ರಸ್ತಾಪ ಮತ್ತು ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.

ಅದರಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂಘಟನೆಯನ್ನು ಗಟ್ಟಿಗೊಳಿಸಿ ಹೊಸನಗರದಿಂದ ದಿಲ್ಲಿಯವರೆಗೆ ನಮ್ಮ ಕೂಗು ಹೋರಾಟ ಸುದ್ದಿಯಾಗಬೇಕು ಎಂದು ಎಲ್ಲರೂ ಅಭಿಪ್ರಾಯಪಟ್ಟರು.
ಅದರಂತೆಯೇ ಪ್ರಸ್ತುತ ಶಾಸಕರು ಮತ್ತು ಸಂಸದರ ಮುಖಾಂತರ ಸರ್ಕಾರದ ಮೇಲೆ ಒತ್ತಡ ತಂದು ಸದರಿ ನಿಯಮೋಪಾಯಗಳನ್ನು ಬದಲಿಸಿ ಹೊಸನಗರ ಕ್ಷೇತ್ರ ಮಾಡಲು ಅನುವು ಮಾಡಿಕೊಡುವಂತೆ ನ್ಯಾಯಯುತವಾಗಿ ಕೇಂದ್ರ ಸರ್ಕಾರದ ಮೊರೆಹೋಗಲು ಚಿಂತಿ ಸಲಾಯಿತು

ಈ ನಿಟ್ಟಿನಲ್ಲಿ ಮುಂದಿನ ಸಭೆಯನ್ನು ಕರೆದು ಮುಂದಿನ ಹೋರಾಟಕ್ಕೆ  ಅಣಿಯಾಗುವುದು.

ಈ ಸಭೆಯಲ್ಲಿ ನಿಟ್ಟೂರು ಮಠದ ಸ್ವಾಮೀಜಿಗಳು ರೇಣುಕಾನಂದ ಶ್ರೀಗಳು, ಮಾಜಿ ಶಾಸಕರಾದ ಶ್ರೀ ಸ್ವಾಮಿರಾವ್, ಕಲಗೋಡು ರತ್ನಾಕರ್ ,ಆರ್ ಎ ಚಾಬುಸಾಬ್, ಸುರೇಶ್ ಸ್ವಾಮಿರಾವ್, ವೀರೇಶ್ ಆಲವಳ್ಳಿ, ಕೆವಿ ಮಲ್ಲಿಕಾರ್ಜುನ್, ಬಿಜಿ ನಾಗರಾಜ್, ಗಣಪತಿ ಬೆಳಗೊಡು, T R ಕೃಷ್ಣಪ್ಪ ಹಾಗೂ ಇತರ ಹೋರಾಟಗಾರರು ಉಪಸ್ಥಿತರಿದ್ದರು.



ಮಾಹಿತಿ : ಅಜಿತ್ ಬಡೆನಕೊಪ್ಪ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

31 minutes ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago