ಹೊಸನಗರ ಸಮೀಪದ ಮಾವಿನಕೊಪ್ಪ – ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಂತ್ ಎಂಬ ಉಡುಪಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಸನಗರದ ಮಾವಿನಕೊಪ್ಪ ಮತ್ತು ಸಾಗರ ರಸ್ತೆಯಲ್ಲಿರುವ ತಂದೆಯ ಮನೆಗೆ ಬಂದಿದ್ದಾನೆ. ಮೊನ್ನೆ ಕಾರ್ಯಕ್ರಮವೊಂದಕ್ಕೆ ಸುಮಂತ್ ನ ತಂದೆ ತಾಯಿ ಉಡುಪಿ ಜಿಲ್ಲೆಯ ಅಮಾವಾಸೆ ಬೈಲ್ ತೆರಳಿದ ವೇಳೆ ಕಳ್ಳತನದ ಘಟನೆ ನಡೆದಿದೆ ಎಂದು ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.
ಘಟನೆಯ ಹಿನ್ನಲೆ :
ಮೊನ್ನೆ ರಾತ್ರಿ ಇದ್ದಕ್ಕಿದ್ದಂತೆ ಸಾಕಿದ ನಾಯಿ ಬೊಗಳಲು ಶುರುವಾಗಿದೆ. ಬಾಗಿಲು ತೆಗೆದು ಕಟ್ಟಿದ ನಾಯಿಯನ್ನು ಬಿಚ್ಚಲು ಮನೆಯ ಬಾಗಿಲು ತೆರೆಯುತ್ತಿದ್ದಂತೆ ಮೂವರು ಅಪರಿಚಿತರು ದಿಡೀರ್ ಎಂದು ಪ್ರತ್ಯಕ್ಷರಾಗಿ ಆತನನ್ನ ಹಲ್ಲೆ ಮಾಡಿ ಮನೆಯೊಳಗೆ ನುಗ್ಗುತ್ತಾರೆ.
ಮನೆಯೊಳಗಿನ ಬೀರುವೊಂದನ್ನ ತೆರೆದು ಬೀರುವಿನ ಕಾಫಿ ಬ್ಯಾಗ್ ನಲ್ಲಿ 50 ಸಾವಿರ ರೂ ಬಂಡಲ್ ಮತ್ತು 25 ಸಾವಿರ ಬಂಡಲ್ ಸೇರಿ ಒಟ್ಟು 75 ಸಾವಿರ ರೂ ಹಣ ಕದ್ದು ಸುಮಂತ್ ಗೆ ಸ್ಡಿಕ್ಕರ್ ಕಟಿಂಗ್ ಮಾಡುವ ಬ್ಲೇಡ್ ನಿಂದ ಹಲ್ಲೆ ನಡೆಸಿ ಕೈಗೆ ಗಾಯವಾಗಿದೆ. ಆತನನ್ನ ತಳ್ಳಿ ಮೂವರು ದರೋಡೆಕೋರರು ಮನೆಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ ಎಂದು ಸುಮಂತ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.
ಮನೆಯ ಮೇಲೆ ಬಾಡಿಗೆ ಮನೆಯಲ್ಲಿರುವ ರಕ್ಷಿತ್ ಎಂಬುವರಿಗೆ ಸುದ್ದಿಮುಟ್ಟಿಸಿದ್ದಾನೆ. ದೂರದಿಂದ ಬಂದ ರಕ್ಷಿತ್ ಬಂದ ಮೇಲೆ ಮರುದಿನ ದೂರು ನೀಡಿದ್ದಾನೆ.
ಆದರೆ ಇದು ಐಪಿಎಲ್ ಹಿನ್ನಲೆಯಲ್ಲಿ ವಿದ್ಯಾರ್ಥಿ ನಾಟಕವಾಡುತ್ತಿದ್ದಾನಾ ಎಂಬ ಅನುಮಾನವೂ ಸಹ ವ್ಯಕ್ತವಾಗುತ್ತಿದೆ.ಐಪಿಎಲ್ ಬೆಟ್ಟಿಂಗ್ ಹಿನ್ನಲೆಯಲ್ಲಿ ಹಣವನ್ನ ಕದ್ದು ಬೇರೆ ರೀತಿಯಲ್ಲಿ ಪ್ರಕರಣವನ್ನ ದಾಖಲಿಸಲಾಗಿದೆಯಾ ಎಂಬ ಅನುಮಾನಕ್ಕೆ ಈ ಪ್ರಕರಣ ಎಡೆಮಾಡಿಕೊಡುತ್ತಿದೆ.
ಹೊಸನಗರದ ಖಡಕ್ ಇನ್ ಸ್ಪೆಕ್ಟರ್ ರಾಜೇಂದ್ರ ನಾಯ್ಕ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿದೆ.
ಶೀಘ್ರದಲ್ಲಿಯೇ ಈ ಘಟನೆಯ ರೂವಾರಿ ಹಾಗೂ ಆರೋಪಿಗಳ ಹೆಸರು ಬಹಿರಂಗಗೊಳ್ಳಲಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್