ಯಡಿಯೂರಪ್ಪ ಅವರ ಕಣ್ಣಲ್ಲಿ ನೀರು ಹಾಕಿಸಿದ್ದು ಈಶ್ವರಪ್ಪ: ಡಿಕೆಶಿ

ಶಿವಮೊಗ್ಗ: ಸಂಗಮೇಶ್ವರ್ ಅವರಿಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಸದಸ್ಯತ್ವ ಅಭಿಯಾನಕ್ಕೆ ಹಿನ್ನೆಡೆಯಾಗಿತ್ತು. ಹೀಗಾಗಿ ನಾನೇ ಭದ್ರಾವತಿಗೆ ಬಂದು ಸದಸ್ಯತ್ವ ಅಭಿಯಾನಕ್ಕೆ ಚುರುಕು ಮುಟ್ಟಿಸಿದ್ದೇನೆ. ನಾಯಕರ ಬಳಿ ಚರ್ಚೆ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಭದ್ರಾವತಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಎಂದರೆ‌ ನನಗೆ ಪ್ರೀತಿ ಹಾಗೂ ಶಿವಮೊಗ್ಗ ಬರಬೇಕು ಎಂಬುದು ನನ್ನ ಆಸೆ. ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭ ಸದಸ್ಯರು. ಕಾಂಗ್ರೆಸ್ ಸದಸ್ಯರ ಸಂಖ್ಯೆಯನ್ನು ಹೆಚ್ಚಿನ‌ ಸಂಖ್ಯೆಯಲ್ಲಿ ಮಾಡಬೇಕಿದೆ. ಶಿವಮೊಗ್ಗದಿಂದ‌…

Read More

ಕಾಮಗಾರಿಗೆ ಮುನ್ನವೇ ಬಿಲ್ ಪಾವತಿ : ಇಂಜಿನಿಯರ್ ಶಿವಮೂರ್ತಿ ಅಮಾನತ್ತಿಗೆ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷ ಒತ್ತಾಯ

 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚಾ ಗ್ರಾಮ ಪಂಚಾಯಿತಿ ಮಠದ (ಜಿಗಳ) ಕೆರೆ ದುರಸ್ತಿ ಕಾಮಗಾರಿ ಮಾಡದೆ ಗುತ್ತಿಗೆದಾರನಿಗೆ ಬಿಲ್ಲು ನೀಡಿ ಕರ್ತವ್ಯಲೋಪ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಯ ರಾಜ್ಯಾಧ್ಯಕ್ಷ ಯುವರಾಜ್ ಕೆ ಸಿ ಒತ್ತಾಯಿಸಿದ್ದಾರೆ.  ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ (ಜಿಗಳೆ) ಕೆರೆಗೆ 2021-2022 ನೇ ಸಾಲಿನ 2702 ಸಣ್ಣ ನೀರಾವರಿ ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ ಯೋಜನೆಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರ…

Read More

“ಹಳ್ಳಿ ಮಕ್ಕಳ ರಂಗ ಹಬ್ಬ” ಶಿಬಿರಕ್ಕೆ ಆಸಕ್ತ ಮಕ್ಕಳಿಂದ ಅರ್ಜಿ ಆಹ್ವಾನ :

ರಿಪ್ಪನ್‌ಪೇಟೆ: ದಿ || ಎಂ.ಕೆ.ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಮತ್ತು ಮಲೆನಾಡು ಕಲಾ ತಂಡ ರಿಪ್ಪನ್‌ಪೇಟೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 13ರಿಂದ 15ದಿನಗಳ ಕಾಲ ರಿಪ್ಪನ್‌ಪೇಟೆಯ ಸರ್ಕಾರಿ ಮಾದರಿ ಹಿರಿಯ ಬಾಲಕರ ಪಾಠ ಶಾಲೆಯಲ್ಲಿ “ಹಳ್ಳಿ ಮಕ್ಕಳ ರಂಗ ಹಬ್ಬ” ರಂಗ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕಲಾ ತಂಡದ ಸಂಚಾಲಕ ಗಣೇಶ ಮಸರೂರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ರಂಗ ಹಬ್ಬದಲ್ಲಿ 9 ವರ್ಷದಿಂದ…

Read More

ಕೆಂಚನಾಲ ಗ್ರಾಮದಲ್ಲಿ ಮತಾಂತರಗೊಳ್ಳುವಂತೆ ಮಹಿಳೆಗೆ ಜೀವ ಬೆದರಿಕೆ : ದೂರು ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಬಲವಂತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಂಚನಾಳ ಗ್ರಾಮದಲ್ಲಿ ಸರ್ವೆ ನಂಬರ್ 38/1 ರಲ್ಲಿ ಜಯಲಕ್ಷ್ಮೀ ಎಂಬುವರು ತಮ್ಮ ಸ್ವಂತ ತೋಟದಲ್ಲಿ ಕೆಲಸ ಮಾಡುವ ವೇಳೆ ಸಂಬಂಧಿಕರಾದ ಮಂಜಪ್ಪ ಮತ್ತು ಸಂಗೀತ ಎಂಬುವರು ಏಕಾಏಕಿ ತೋಟಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಮಹಿಳೆಯನ್ನ ಅವ್ಯಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾರೆ. ನಿನಗೆ ಯಾರೂ ಇಲ್ಲ ನಿನಗೆ ಜಮೀನು ಏನಕ್ಕಾಗಿ…..

Read More

ರೈತನ ಹೊಟ್ಟೆಗೆ ತಿವಿದ ಕಾಡುಕೋಣ..!!! ಚಿಂತಾಜನಕ ಸ್ಥಿತಿಯಲ್ಲಿರುವ ರೈತ ಮಣಿಪಾಲ್ ಆಸ್ಪತ್ರೆಗೆ ದಾಖಲು

ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಅರಣ್ಯ ವಲಯದ  ಆಗುಂಬೆ ಗ್ರಾಮ ಪಂಚಾಯಿತಿಯ ಹೊಸೂರು ಬಳಿಯ ಅಸಿಮನೆಯಲ್ಲಿ ಕಾಡುಕೋಣವೊಂದು ರೈತರೊಬ್ಬರಿಗೆ ತಿವಿದ ಘಟನೆ ಸೋಮವಾರ ಸಂಜೆ ನಡೆದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕಳುಹಿಸಲಾಗಿದೆ. ಅಸಿಮನೆ ರಾಘವೇಂದ್ರ ಭಟ್ ಎಂಬುವರ ತೋಟಕ್ಕೆ ಬಂದಿದ್ದ ಕಾಡು ಕೋಣಗಳನ್ನು ರಾಘವೇಂದ್ರ ಭಟ್ ಮತ್ತು ಅವರ ಪತ್ನಿ ತೋಟದಿಂದ ಬೆರೆಸಲು ಹೋಗಿದ್ದಾಗ ಏಕಾಏಕಿ ಹೊಟ್ಟೆಗೆ ಇರಿದಿದೆ. ಗಂಭೀರ ಗಾಯಗೊಂಡ ರಾಘವೇಂದ್ರ ಭಟ್ ಅವರನ್ನು ಆಗುಂಬೆ ಭಾಗದ ಪ್ರಮುಖ ನಾಯಕ ಹಸಿರುಮನೆ ನಂದನ್ ಮತ್ತು ಸ್ನೇಹಿತರು ತಮ್ಮ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ರಿಪ್ಪನ್‌ಪೇಟೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಪ್ರಜ್ವಲ್ ಎನ್ ಎಮ್ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ 23ನೇ ಯುವ ವಾಲಿಬಾಲ್ ಚಾಂಪಿಯನ್‌ ಶಿಪ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟೀಯ ಮಟ್ಟದ  ವಾಲಿಬಾಲ್ (21ವರ್ಷದೊಳಗಿನ ವಯೋಮಿತಿ) ಪಂದ್ಯವು ಇದೇ ತಿಂಗಳ 11 ರಿಂದ 16 ರವರೆಗೆ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ವಿದ್ಯಾ ನಗರ ನಿವಾಸಿಗಳಾದ ಶಿಕ್ಷಕರಾದ ಮಹೇಶ್ವರ ಆಚಾರಿ ಹಾಗೂ ಮೀನಾಕ್ಷಿ ದಂಪತಿಗಳ…

Read More

ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ :ಶ್ರೀ ರೇಣುಕಾನಂದ ಸ್ವಾಮೀಜಿ

ರಿಪ್ಪನ್ ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು  ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.  ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು….

Read More

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಲಿ: ಸಚಿವ ಕೆ ಎಸ್ ಈಶ್ವರಪ್ಪ

ಮಸೀದಿಯಲ್ಲಿ ಧ್ವನಿವರ್ಧಕ ತೆಗೆಸದಿದ್ದರೆ ನಾವೂ ಹನುಮಾನ್ ಚಾಳೀಸ್ ಕೇಳಿಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ.  ಹೀಗೆ ಬೇಕಾ ಬಿಟ್ಟಿ ಹೇಳುವದರಿಂದ ಕೋಮು ಸಂಘರ್ಷವಾಗಬಹುದು. ಧ್ವನಿವರ್ಧಕ ಬಳಸುವ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಬೇಕು. ದೇವಸ್ಥಾನಗಳಲ್ಲಿ, ಚರ್ಚ್‌ಗಳಲ್ಲಿ ನಡೆಯುವ ರೀತಿ ಬೇರೆಯವರಿಗೆ ತೊಂದರೆಯಾಗದಂತೆ ಮಸೀದಿಯೊಳಗೇ ಧ್ವನಿವರ್ಧಕ ಬಳಸುವುದು ಸೂಕ್ತ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಕಾಂಗ್ರೆಸ್ ನವರು ಅಲ್ಲಾಹುವನ್ನು ಮರೆತರು. ಏಸುಕ್ರಿಸ್ತನನ್ನೂ ಮರೆತರು. ಬುದ್ಧ, ಬಸವ, ಅಂಬೇಡ್ಕರ್ ನೆಪ ಶುರು ಮಾಡಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು…

Read More

ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ : ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ  ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…

Read More

ಆನಂದಪುರ ಸಮೀಪ ಅಕ್ರಮ ಗೋಮಾಂಸ ಮಾರುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು :

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ನಡೆದಿದೆ. ಹಬೀಬ್ ( 35 ) ಶಿಕಾರಿಪುರ ಮೂಲದ ವ್ಯಕ್ತಿ ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿದೆ. ಬಜಾಜ್ ಪ್ಲಾಟಿನಾ ಕೆ ಎ 15 ಈಎಪ್ 2782  ಬೈಕ್ ನ ಬ್ಯಾಗ್ ನಲ್ಲಿ ಅಂದಾಜು ಹತ್ತು ಕೆಜಿ ಯಷ್ಟು ಗೋಮಾಂಸವನ್ನು ಗೌತಮಪುರದ ಗ್ರಾಮದ ಕೆಲವು ಮನೆಗಳಿಗೆ ಅಕ್ರಮವಾಗಿ ಮಾರಾಟ…

Read More