ಯಡಿಯೂರಪ್ಪ ಅವರ ಕಣ್ಣಲ್ಲಿ ನೀರು ಹಾಕಿಸಿದ್ದು ಈಶ್ವರಪ್ಪ: ಡಿಕೆಶಿ
ಶಿವಮೊಗ್ಗ: ಸಂಗಮೇಶ್ವರ್ ಅವರಿಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಸದಸ್ಯತ್ವ ಅಭಿಯಾನಕ್ಕೆ ಹಿನ್ನೆಡೆಯಾಗಿತ್ತು. ಹೀಗಾಗಿ ನಾನೇ ಭದ್ರಾವತಿಗೆ ಬಂದು ಸದಸ್ಯತ್ವ ಅಭಿಯಾನಕ್ಕೆ ಚುರುಕು ಮುಟ್ಟಿಸಿದ್ದೇನೆ. ನಾಯಕರ ಬಳಿ ಚರ್ಚೆ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಭದ್ರಾವತಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಎಂದರೆ ನನಗೆ ಪ್ರೀತಿ ಹಾಗೂ ಶಿವಮೊಗ್ಗ ಬರಬೇಕು ಎಂಬುದು ನನ್ನ ಆಸೆ. ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭ ಸದಸ್ಯರು. ಕಾಂಗ್ರೆಸ್ ಸದಸ್ಯರ ಸಂಖ್ಯೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಬೇಕಿದೆ. ಶಿವಮೊಗ್ಗದಿಂದ…