ಹಲಾಲ್ – ಜಟ್ಕಾ ಹೆಸರಿನಲ್ಲಿ ಸಮಾಜ ಒಡೆಯುವ ಕುತಂತ್ರ ನಡೆಯುತ್ತಿದೆ : ಸಚಿವ ಕೆ ಎಸ್ ಈಶ್ವರಪ್ಪ
ಹಲಾಲ್ ಅಥವಾ ಜಟ್ಕಾ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಭಾನುವಾರ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಎಂಆರ್ಎಫ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಹಲಾಲ್ ಹಾಗೂ ಜಟ್ಕಾ ವಿವಾದ ಸೃಷ್ಟಿಸಿರುವುದು ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು. ಯಾರು ಯಾವ ಪದ್ಧತಿಯನ್ನು ಅನುಸರಿಸುತ್ತಿದ್ದಾರೋ ಅದನ್ನೇ ಮುಂದುವಸಿಕೊಂಡು ಹೋಗಲಿ’ ಎಂದು ಹೇಳಿದರು. ‘ಹಲಾಲ್ ಹಾಗೂ ಜಟ್ಕಾ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಚುನಾವಣೆಯಲ್ಲಿ ತೊಡೆ ತಟ್ಟಿ, ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗೋಣ’…