ಬೈಕ್ ನಿಧಾನವಾಗಿ ಚಲಿಸಿ ಎಂದಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ :

ಬೈಕ್ ನಿಧಾನಕ್ಕೆ ಚಲಿಸಿ ಎಂದು ಬುದ್ದಿವಾದ ಹೇಳಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆದು ಅವರ ಬಳಿ ಮೊಬೈಲ್ ಮತ್ತು ಇತರೆ ವಸ್ತುಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ವರದಿಯಾಗಿದೆ. ಊರುಗಡೂರು ಗಣಪತಿ ದೇವಸ್ಥಾನದ ಅರ್ಚಕ ಅಕ್ಷಯ್ ಕುಮಾರ್ ಕೆಲಸದ ನಿಮಿತ್ತ ಶಿವಮೊಗ್ಗದ ಗಾಂಧಿ ಬಜಾರ್ ಗೆ ಬಂದಿದ್ದು ಜೀ ಕಾರ್ನರ್ ಮೂಲಕ ಎಂಕೆಕೆ ರಸ್ತೆಯಲ್ಲಿ ಹೋಗಲು ಮೆಹಬೂಬ್ ಗಲ್ಲಿಗೆ ಬಂದಾಗ ಇಬ್ಬರು ಬೈಕ್ ಸವಾರರು ಬೈಕ್ ಗೆ ಡಿಕ್ಕಿ ಹೊಡೆಯುವ ರೀತಿ ಚಲಾಯಿಸಿಕೊಂಡು ಬಂದಿದ್ದಾರೆ. ಚಲಾಯಿಸಿಕೊಂಡು ಬಂದ…

Read More

ಅಪರಿಚಿತ ವ್ಯಕ್ತಿಯನ್ನು ರಕ್ಷಿಸಲು ಚಾನೆಲ್ ಗೆ ಹಾರಿದ್ದ ರಿಪ್ಪನ್‌ಪೇಟೆ ಯುವಕನ ಮೃತದೇಹ ಪತ್ತೆ : ಮುಗಿಲು‌ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮಂಗಳವಾರ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಸಿದ್ದಾಪುರದ ಚಾನಲ್ ಗೆ ಬಿದ್ದು ಸಾಯುತ್ತಿದ್ದ ವೃದ್ದ ದಂಪತಿಗಳನ್ನು ಬದುಕಿಸಬೇಕು ಎಂಬ ಹಂಬಲದಲ್ಲಿ ಚಾನೆಲ್ ಗೆ ಜಿಗಿದು ಬದುಕಿಸುವ ಯತ್ನದಲ್ಲಿ ಈತನು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ನೆಹರು ಬಡಾವಣೆ ನಿವಾಸಿ ಅನೀದ್ (22) ಮೃತಪಟ್ಟ ಧುರ್ಧೈವಿಯಾಗಿದ್ದಾನೆ. ಕಳೆದ 48 ಗಂಟೆಗಳಿಂದ ಅಗ್ನಿಶಾಮಕ ದಳ ದವರು ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕನ ಶವ ಪತ್ತೆಯಾಗಿರಲಿಲ್ಲ,ಇಂದು ಬೆಳಿಗ್ಗೆ ನೆಲ್ಲೂರು ಸಮೀಪದ ಹಿರೆಮಳಲಿ ಎಂಬ ಗ್ರಾಮದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ….

Read More

ಇನ್ನೂ ಪತ್ತೆಯಾಗದ ವೃದ್ದನನ್ನು ರಕ್ಷಿಸಲು ಚಾನೆಲ್ ಗೆ ಹಾರಿ ನಾಪತ್ತೆಯಾಗಿದ್ದ ರಿಪ್ಪನ್ ಪೇಟೆಯ ಯುವಕ : ಅಗ್ನಿಶಾಮಕ ದಳದವರಿಂದ ಬಿರುಸಿನ ಕಾರ್ಯಾಚರಣೆ

ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ನಲ್ಲಿ ವೃದ್ದನೊಬ್ಬನನ್ನು  ರಕ್ಷಿಸಲು ಹೋಗಿ ರಿಪ್ಪನ್‌ಪೇಟೆಯ ಯುವಕನೊಬ್ಬ ನಾಪತ್ತೆಯಾಗಿ ಸುಮಾರು 48 ಗಂಟೆ ಕಳೆದಿದ್ದು ಇನ್ನೂ ಯುವಕನ ಸುಳಿವು ಪತ್ತೆಯಾಗಿಲ್ಲ.   ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ಎಂಬ ಯುವಕ ಮಂಗಳವಾರ ಬೆಳಿಗ್ಗೆ ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲ್ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ…

Read More

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ :

ಶಿವಮೊಗ್ಗ ಡಿಸಿಸಿ ಬ್ಯಾಂಕ್’ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಡಿಸಿಸಿ ಬ್ಯಾಂಕ್’ನಲ್ಲಿ 98 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಹಸ್ತದಲ್ಲಿ ಅಥವಾ ಕಂಪ್ಯೂಟರ್ ಮೂಲಕ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು. ಪೂರ್ಣ ವಿವರ, ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕೃತ ಪ್ರತಿ ಹಾಗೂ ಅರ್ಜಿ ಶುಲ್ಕದೊಂದಿಗೆ ಪಾವತಿಸಬೇಕು.2022ರ ಮೇ 16ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1) ಆಪ್ತ…

Read More

ಪಾಲೀಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಎರಡೂವರೆ ಲಕ್ಷ ಮೌಲ್ಯದ ಮಾಂಗಲ್ಯ ಸರ ಅಪಹರಣ :

ಒಂಟಿ ಮಹಿಳೆಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಆಭರಣಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ  ಮಹಿಳೆಯ ಮಾಂಗಲ್ಯ ಸರ  ಅಪಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಟೆ ಕೊಪ್ಪ ಗ್ರಾಮದ ಸರೋಜಮ್ಮ ಅವರೇ ಮಾಂಗಲ್ಯ ಸರ ಕಳೆದುಕೊಂಡವರು. ಪಾಲಿಶ್ ಮಾಡಿಕೊಡುವ ನೆಪದಲ್ಲಿ ಸರೋಜಮ್ಮ ಅವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಅವರ ಗಮನ ಬೇರೆಡೆ ಸೆಳೆದು ಕ್ಷಣ ಮಾತ್ರದಲ್ಲಿ ನಲವತ್ತು ಗ್ರಾಂ ತೂಕದ ಮಾಂಗಲ್ಯ ಸರವನ್ನು ಅಪಹರಿಸಿ ಪರಾರಿಯಾಗಿದ್ದಾರೆ.ಮೊದಲು ಬೆಳ್ಳಿಯ ಗೆಜ್ಜೆಯನ್ನು…

Read More

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಂದಾಗಿ ಬಾಳೋಣ ಸಿನಿಮಾ ರಿಲೀಸ್ !!!!???? ಸಿನಿಮಾ ಹಿಟ್ ಆಗುತ್ತೋ??? ಪ್ಲಾಪ್ ಆಗುತ್ತೋ ????

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಂದಾಗಿ ಬಾಳೋಣ ಸಿನಿಮಾ ರಿಲೀಸ್ ಆಗಿದ್ದು ಇದು ಹಿಟ್ ಆಗುತ್ತೋ???? ಪ್ಲಾಪ್ ಆಗುತ್ತೋ ??? ಎಂಬುವುದನ್ನು ಕಾದುನೋಡಬೇಕಾಗಿದೆ. ಹೌದು…. ಕಾಂಗ್ರೆಸ್ ನಾಯಕರು ಒಂದಾದ್ರ ?  ಹೀಗೊಂದು ಪ್ರೆಶ್ನೆ ಈಗ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ತೀರ್ಥಹಳ್ಳಿಯ ಕಾಂಗ್ರೆಸ್ ನಾಯಕರು ಎಂದರೆ ಅದು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್. ಇದು ಎಲ್ಲರಿಗೂ ಸಾಮಾನ್ಯವಾಗಿ ಗೊತ್ತಿರುವ ವಿಷಯ. ಆದರೆ ಇತ್ತೀಚಿನ ಕೆಲವು  ತಿಂಗಳುಗಳ  ಹಿಂದೆ ಡಿಸಿಸಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡರು…

Read More

ಚಾನೆಲ್ ಗೆ ಹಾರಿದ ವ್ಯಕ್ತಿಯನ್ನು ರಕ್ಷಿಸಲು ಹೋದ ರಿಪ್ಪನ್‌ಪೇಟೆ ಯುವಕನೊಬ್ಬ ನಾಪತ್ತೆ : ಮುಂದುವರೆದಿರುವ ಶೋಧ ಕಾರ್ಯಾಚರಣೆ

ಚಾನೆಲ್ ಗೆ ಹಾರಿದ ವ್ಯಕ್ತಿಯೊಬ್ಬರನ್ನು ರಕ್ಷಿಸಲು ಹೋಗಿ ರಿಪ್ಪನ್‌ಪೇಟೆಯ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ಬಳಿ ನಡೆದಿದೆ.  ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ನಾಪತ್ತೆಯಾಗಿರುವ ಯುವಕನಾಗಿದ್ದಾನೆ. ಅನೀದ್ ಲಾರಿಯೊಂದರಲ್ಲಿ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದು, ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲೊಂದರ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ ಅವರನ್ನು…

Read More

ಮಳೆಯಿಂದ ಹಾನಿಯಾದ ಕುಟುಂಬಗಳನ್ನು ಭೇಟಿ ಮಾಡಿದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು.

    ಸಾಗರ : ತಾಲೂಕಿನ ಹೊಸೂರು ಗ್ರಾಮ ಪಂಚಾಯತಿಯ ನೆದರವಳ್ಳಿ ಗ್ರಾಮದ ವೀರೇಂದ್ರ ಗೌಡ್ರು ಹಾಗೂ ಚಿದಾನಂದ ಗೌಡರ ಕೊಟ್ಟಿಗೆ ಮನೆ  ನಿನ್ನೆ ಬಂದ ಗಾಳಿ ಮಳೆಯ ಆರ್ಭಟಕ್ಕೆ ಹಾನಿಗೊಳಗಾಗಿತ್ತು. ಇಂದು ಸ್ಥಳಕ್ಕೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣರವರು ಭೇಟಿ ನೀಡಿದರು ಸ್ಥಳ ಪರಿಶೀಲಿಸಿದ  ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.  ಈ ಸಂದರ್ಭದಲ್ಲಿ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕರಾದ ಗಣಪತಿ ಮಂಡಗಳಲೆ ಗ್ರಾಮ ಪಂಚಾಯಿತಿಯ ಸದಸ್ಯರಾದ ಆನಂದ…

Read More

ತೀರ್ಥಹಳ್ಳಿ ಹೊಸ ಸೇತುವೆ ಕಾಮಗಾರಿಯ ವೀಕ್ಷಣೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಪಟ್ಟಣದಲ್ಲಿ ಬಾಳೇಬೈಲಿನಿಂದ ಕುರುವಳ್ಳಿಯ ವಿಠಲನಗರದ ಮೂಲಕ ಕೊಪ್ಪಕ್ಕೆ ಹೋಗುವ ದಾರಿಗೆ ಹೊಸ ಸೇತುವೆ ಕಾರ್ಯ ಅತ್ಯಂತ ಭರದಿಂದ ಸಾಗುತ್ತಿದ್ದು ಈ ಸ್ಥಳಕ್ಕೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಕಾಮಗಾರಿ  ಕಾರ್ಯಗಳನ್ನು ವೀಕ್ಷಿಸಿದರು.  ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇದೊಂದು  ತೀರ್ಥಹಳ್ಳಿಯಲ್ಲೇ ಐತಿಹಾಸಿಕ ಸೇತುವೆಯಾಗಲಿದೆ. ಈ ಸೇತುವೆಗೆ 56 ಕೋಟಿ ರೂ ಮೊತ್ತದಲ್ಲಿ ಹಣ ಮಂಜೂರಾಗಿದೆ. ತೀರ್ಥಹಳ್ಳಿಯ ಪ್ರಸಿದ್ಧ ಸೇತುವೆಯಾದ ಜಯಚಾಮರಾಜೇಂದ್ರ ಸೇತುವೆಯ ವರ್ಷ…

Read More

ಸಿಡಿಲು ಬಡಿದು ಯುವ ರೈತ ಸಾವು

ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದ ಯುವ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.  ಇಂಡುವಳ್ಳಿ ಗ್ರಾಮದ ಗೌತಮ್ ನಾಗರಾಜ (23) ಮೃತ ದುರ್ಧೈವಿ.  ಗ್ರಾಮದ ಸರ್ವೆ ನಂ 121/2 ರಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತಾಗಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಗೌತಮ್ ಮೃತ ಪಟ್ಟಿದ್ದಾರೆ.  ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Read More