ರಿಪ್ಪನ್ ಪೇಟೆ : ಸಿಡಿಲಿನ ಆರ್ಭಟಕ್ಕೆ ಜಾನುವಾರುಗಳು ಸಾವು
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತ ಇಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು ಹಲವು ಅನಾಹುತಗಳಿಗೆ ಎಡೆ ಮಾಡಿಕೊಟ್ಟಿದೆ. ಇಂದು ಸಂಜೆ ಸುರಿದ ಭಾರೀ ಮಳೆಗೆ ಹಾಲುಗುಡ್ಡೆ ಗ್ರಾಮದ ಚಂದ್ರಶೇಖರ್ ಎಂಬುವರಿಗೆ ಸೇರಿದ 2 ಹಸುಗಳು ಸಿಡಿಲಿನ ಆರ್ಭಟಕ್ಕೆ ಬಲಿಯಾಗಿವೆ. ಚಂದ್ರಶೇಖರ್ ರವರ ಮನೆಯ ಮುಂದೆ ಮರದ ಆಸರೆಯಲ್ಲಿ ನಿಂತಿದ್ದ ಹಸುಗಳು ಏಕಾಏಕಿ ಸಿಡಿಲು ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿವೆ.ಹಸುಗಳ ಸಾವಿನಿಂದ ಇದರಿಂದಲೇ ಜೀವನ ಸಾಗಿಸುತ್ತಿದ್ದ ಬಡ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ. ಘಟನಾ ಸ್ಥಳಕ್ಕೆ ಕಂದಾಯ…