ರಿಪ್ಪನ್ ಪೇಟೆ : ಸಿಡಿಲಿನ ಆರ್ಭಟಕ್ಕೆ ಜಾನುವಾರುಗಳು ಸಾವು

ರಿಪ್ಪನ್ ಪೇಟೆ : ಪಟ್ಟಣದ  ಸುತ್ತಮುತ್ತ ಇಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು ಹಲವು ಅನಾಹುತಗಳಿಗೆ ಎಡೆ ಮಾಡಿಕೊಟ್ಟಿದೆ. ಇಂದು ಸಂಜೆ ಸುರಿದ ಭಾರೀ ಮಳೆಗೆ ಹಾಲುಗುಡ್ಡೆ ಗ್ರಾಮದ ಚಂದ್ರಶೇಖರ್ ಎಂಬುವರಿಗೆ ಸೇರಿದ 2 ಹಸುಗಳು ಸಿಡಿಲಿನ ಆರ್ಭಟಕ್ಕೆ ಬಲಿಯಾಗಿವೆ. ಚಂದ್ರಶೇಖರ್ ರವರ ಮನೆಯ ಮುಂದೆ ಮರದ ಆಸರೆಯಲ್ಲಿ ನಿಂತಿದ್ದ ಹಸುಗಳು ಏಕಾಏಕಿ ಸಿಡಿಲು ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿವೆ.ಹಸುಗಳ ಸಾವಿನಿಂದ ಇದರಿಂದಲೇ ಜೀವನ ಸಾಗಿಸುತ್ತಿದ್ದ ಬಡ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ.  ಘಟನಾ ಸ್ಥಳಕ್ಕೆ ಕಂದಾಯ…

Read More

ರಿಪ್ಪನ್ ಪೇಟೆ ಮೆಸ್ಕಾಂ ಕಛೇರಿ ಎದುರು ಧರೆಗುರುಳಿದ ಮರ : ವಿದ್ಯುತ್ ಕಂಬ, ಟ್ರಾನ್ಸ್ ಫಾರಂ ಪುಡಿಪುಡಿ : ಪ್ರಾಣಾಪಾಯದಿಂದ ಪಾರಾದ ವಾಹನ ಚಾಲಕ

ಇಂದು ಸಂಜೆ ಸುರಿದ ಧಾರಾಕಾರ ಮಳೆ ಗಾಳಿಗೆ ಇಲ್ಲಿನ ಸಾಗರ ರಸ್ತೆಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಬೃಹದಾಕಾರದ ಮರವೊಂದು  ರಸ್ತೆ ಮೇಲೆ ಬಿದ್ದು ವಿದ್ಯುತ್ ಟ್ರಾನ್ಸ್ ಫಾರಂ ವಿದ್ಯುತ್ ಕಂಬ ತುಂಡಾಗಿ ಧರೆಗೆ ಉರುಳಿದ ಘಟನೆ ನಡೆದಿದೆ. ಈ ಘಟನೆ ನಡೆಯುವ ಸಂದರ್ಭದಲ್ಲಿ ಸಾಗರ ಕಡೆಯಿಂದ ಬರುತ್ತಿದ್ದ ಸರಕು ಸಾಗಾಣಿಕೆ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು , ಗಾಳಿ ಮಳೆಗೆ ಹೆದರಿ ವಾಹನ ನಿಲ್ಲಿಸಿ ಇಳಿದು ಹೊರ ಹೋದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ…

Read More

ವಿಜ್ರಂಭಣೆಯಿಂದ ಜರುಗಿದ ಶ್ರೀ ಸಿದ್ಧಿವಿನಾಯಕಸ್ವಾಮಿ ಪ್ರತಿಷ್ಠವರ್ಧಂತ್ಯೋತ್ಸವ : ವಿನಯ್ ಗುರೂಜಿಯವರಿಂದ ಆಶೀರ್ವಚನ

ರಿಪ್ಪನ್‌ಪೇಟೆ: ಪಟ್ಟಣದ ಆರಾಧ್ಯ ದೈವ ಶ್ರೀಸಿದ್ಧಿವಿನಾಯಕ ಸ್ವಾಮಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ೫ನೇ ವರ್ಷದ ಪ್ರತಿಷ್ಠಾವರ್ಧಂತ್ಯೋತ್ಸವವು ವಿಜ್ರಂಭಣೆಯಿಂದ ಜರುಗಿತು. ಶನಿವಾರ ಮುಂಜಾನೆ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಃ ವಾಚನ, ನಾಂದಿ ಸಮಾರಾಧನೆ, ಮಹಾಸಂಕಲ್ಪ, ಋತ್ವಿಗ್ವರಣ, ಸಮೂಹಿಕ ಷಣ್‌ನಾರಿಕೇಳ ಗಣಹೋಮ, ನವಗ್ರಹ ಹೋಮದೊಂದಿಗೆ ತೀರ್ಥಪ್ರಸಾದ ವಿನಿಯೋಗ ನಡೆಯಿತು.  ಸ್ವಾಮಿಯ ಸನ್ನಿಧಿಯಲ್ಲಿ ಮಂಡಲ ರಚನೆ, ಬ್ರಹ್ಮಕಲಶ ಸ್ಥಾಪನೆ, ಮತ್ತು ಕಲಶಾಧಿವಾಸ ಹೋಮ, ದೇವಿ ಸನ್ನಿಧಿಯಲ್ಲಿ ಪಂಚವಿಂಶತಿ ದ್ರವ್ಯ ಕಲಶ ಸಹಿತ ಬ್ರಹ್ಮಕಲಶ ಸ್ಥಾಪನೆ…

Read More

ಬಜರಂಗದಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಮೂವರ ಬಂಧನ

ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಸಂಚು ಮಾಡಿ ಮೂವರು ಅನ್ಯ ಕೋಮಿನ ಯುವಕರು ಬಂಧನಕ್ಕೊಳಗಾಗಿದ್ದಾರೆ. ಇಲ್ಲೂ ಸಹ ದೊಡ್ಡಪೇಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಸಂಚು ಹಾಕಿದ  ಮೂವರನ್ನ ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನನ್ನ ಅನೇಕ ದಿನಗಳಿಂದ ಹಿಂಬಾಲಿಸಿದ ಮೂವರು ಯುವಕರು ಮೊನ್ನೆ ನ್ಯೂ ಮಂಡ್ಲಿಯ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಯಕರ್ತನ ಸಹೋದರನನ್ನ ಮೂವರು ಯುವಕರು ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಿನ್ನ ಜೊತೆ ಬೈಕ್ ನಲ್ಲಿ ಓಡಾಡುತ್ತಿದ್ದ ಕಾರ್ಯಕರ್ತ ಎಲ್ಲಿ ಹೇಳು ಎಂದು ಮಾರಕಾಸ್ತ್ರಗಳನ್ನು…

Read More

ಸಾಗರದಲ್ಲಿ ಬಸ್ ಇಳಿಯುವಾಗ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವು : ಒಂದೇ ದಿನ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಸಾವು

ಬಸ್ ಇಳಿಯಲು ಹೊರಟಿದ್ದ ಪ್ರಯಾಣಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ಪಟ್ಟಣದ ಸಂಜೀವಿನಿ ಆಯುರ್ವೇದಿಕ್ ಆಸ್ಪತ್ರೆಯ ಬಳಿ ಸಂಭವಿಸಿದೆ. ಹೋಟೆಲ್ ಕೆಲಸಕ್ಕೆಂದು ಕಾರ್ಗಲ್ ಗೆ ತೆರಳಿದ್ದ ಮಹಾದೇವ ನಾಯ್ಕ್ ವಾಪಾಸ್ ಸಾಗರಕ್ಕೆ ಕುಮಧ್ವತಿ ಖಾಸಗಿ ಬಸ್ ನಲ್ಲಿ ಬಂದಿದ್ದಾರೆ. ಸಾಗರದ ಅಗಡಿಮಠ ಹತ್ತಿರ ಮನೆ ಮಾಡಿಕೊಂಡಿರುವ ಮಹದೇವ ನಾಯ್ಕ್ ಬಸ್ ಸಾಗರ ಕೆಎಸ್ ಆರ್ ಟಿ ಬಸ್ ನಿಲ್ದಾಣದ ಮುಂದೆ ಬರುತ್ತಿದ್ದಂತೆ ಸೀಟ್ ನಿಂದ ಎದ್ದು ಹಿಂಬದಿ ಡೋರ್ ಬಳಿ ಬಂದು ನಿಂತಿದ್ದಾರೆ. ಸಂಜೀವಿನಿ ಆಯುರ್ವೇದಿಕ್…

Read More

ಮೇ 13 ರಿಂದ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ ಉರೂಸ್ ಸಮಾರಂಭ :

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ 2022-23 ರ ಉರೂಸ್‌ ಸಮಾರಂಭದ ದಿನಾಂಕ ನಿಗದಿಯಾಗಿದೆ. ಇಂದು ದರ್ಗಾ ಸಮಿತಿ ಅಧ್ಯಕ್ಷರಾದ ಜೆ ಮಹಮ್ಮದ್ ಸಾಬ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಮೇ 13,14,15,16 ರ ನಾಲ್ಕು ದಿನ ಉರೂಸ್ ಕಾರ್ಯಕ್ರಮ ನಡೆಸಲು, ಉರೂಸ್ ಸಮಾರಂಭಕ್ಕೆ ಮಂತ್ರಿಗಳು ಹಾಗೂ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಉರೂಸ್ ಸಮಾರಂಭವನ್ನು ಸರ್ಕಾರ ಸುತ್ತೋಲೆಯಂತೆ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ವಿನಾಯಕ ಉಡುಪ…

Read More

ರಿಪ್ಪನ್ ಪೇಟೆ ಪಂಚಾಯತ್ ದಿವಸ್ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ : ಗೊಂದಲಗಳ ನಡುವೆ ನಡೆದ ಕಾರ್ಯಕ್ರಮ

ರಿಪ್ಪನ್‌ಪೇಟೆ: ಜನರು ತಮ್ಮ ಕೆಲಸಕಾರ್ಯಗಳಿಗಾಗಿ ಕಛೇರಿಗಳಿಗೆ ಬರುವ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು ಅಸಡ್ಡೆ ತೋರಬಾರದು. ಜನರೇ ಇಲ್ಲದಿದ್ದರೆ ಜನಪ್ರತಿನಿಧಿಗಳ ಅಸ್ಥಿತ್ವವೇ ಇರುತ್ತಿರಲಿಲ್ಲವೆಂಬ ಸತ್ಯ ಮನದಲ್ಲಿಟ್ಟುಕೊಳ್ಳಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗ್ರಾ.ಪಂ. ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಪಂಚಾಯತ್ ರಾಜ್ ದಿವಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮ ಪಂಚಾಯತಿಗಳು ಸ್ಥಳೀಯ ಸರಕಾರವಾಗಿದೆ. ಜನರು ಕೆಲಸವಿಲ್ಲದೆ ಕಛೇರಿಗೆ ಬರುವುದಿಲ್ಲ. ಸುಮ್ಮನೆ ಬರಲು ಸರ್ಕಾರಿ ಕಛೇರಿಗಳು ಅವರ ಮಾವನ ಮನೆಯೂ ಅಲ್ಲ, ಅತ್ತೆ ಮನೆಯೂ ಅಲ್ಲ ಕೆಲಸವಿದ್ದಾಗ ಮಾತ್ರ…

Read More

ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕ ಬಸ್ ನಿಂದ ಕೆಳಗೆ ಬಿದ್ದು ಸಾವು : ಚಾಲಕನ ಬಂಧನ

ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಹಿರೇಕಬ್ಬೂರು ಗ್ರಾಮದಲ್ಲಿ ನಡೆದಿದೆ. ಬಸ್ ನಿಂದ ಇಳಿಯುವಾಗ ಬಸ್ ಮುಂದೆ ಚಲಾಯಿಸಿದ ಪರಿಣಾಮ ಪ್ರಯಾಣಿಕ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಏ.19 ರಂದು ರಾತ್ರಿ ಶಿಕಾರಿಪುರದಿಂದ ಕೃಷ್ಣ ಬಸ್ ನಲ್ಲಿ ಪ್ರಯಾಣಿಸಿದ ಫಕೀರಪ್ಪ (44) ಎಂಬುವರು ಹಿರೇಕಬ್ಬೂರು ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಇಳಿಯಲು ಮುಂದಾಗಿದ್ದಾರೆ. ಇದನ್ನ ಗಮನಿಸಿದ ಚಾಲಕ ಬಸ್ ಚಲಾಯಿಸಿದ್ದಾನೆ. ಬಸ್ ಚಲಿಸುತ್ತಿದ್ದಂತೆ ಬ್ಯಾಲೆನ್ಸ್ ಕಳೆದುಕೊಂಡ ಫಕೀರಪ್ಪ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ…

Read More

5 ಕೆಜಿ ಉಚಿತ ಅಕ್ಕಿಯನ್ನು ಮುಂದುವರೆಸುವ ಮೂಲಕ ಸರ್ಕಾರ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ : ಮಂಜುಳಾ ಕೆ ರಾವ್

ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ 5 ಕೆಜಿ ಉಚಿತ ಅಕ್ಕಿಯನ್ನು ಮುಂದುವರಿಸಿರುವ ಸಲುವಾಗಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಾತಾ ಮಹಿಳಾ ಸಂಘದ ನ್ಯಾಯಬೆಲೆ ಅಂಗಡಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ರವರು ಉದ್ಘಾಟಿಸಿದರು. ಈ ಸಂರ್ಭದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರಿಸುವ ಮೂಲಕ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ.ಈಗ ಸರ್ಕಾರ ಸೀಮೆ ಎಣ್ಣೆ ವಿತರಣೆ ನಿಲ್ಲಿಸಿದ್ದು ಮಲೆನಾಡು…

Read More

ಮನೆ ಮೇಲೆ ಬಿದ್ದ ಮರ : ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಮತ್ತು ಮಗು ಪಾರು

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ…

Read More