ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More

ಹೊಸನಗರ ಪೊಲೀಸ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪಿ ಐ ಗಳ ವರ್ಗಾವಣೆ :

ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಜಿಲ್ಲೆಯ ಮೂರು ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆ ಆಗಿದೆ. ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ‌ ಗುರುರಾಜ್ ಕೆ.ಟಿ, ಹೊಸನಗರ ಪೊಲೀಸ್ ಅಧಿಕಾರಿ ಮಧುಸೂಧನ್ ಮತ್ತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಚೈತನ್ಯ ಸಿ.ಜೆ. ವರ್ಗವಣೆಗೊಂಡಿರುವ ಪಿಐಗಳಾಗಿದ್ದಾರೆ ಪಿಐ ಗುರುರಾಜ್ ಕೆ.ಟಿ ಕಡೂರು…

Read More

ಹೊಸನಗರ ಸಮೀಪದಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನಿಂದ ಭಟ್ಕಳಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್​ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಯಿತು. ಪ್ರಯಾಣಿಕರಿಗೆ…

Read More

ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :

ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ   ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…

Read More

ಪಂಚರತ್ನ ಕಾರ್ಯಕ್ರಮ ನೆರವೇರಿಸದೆ ಇದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ

ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕೂಡ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ ಪ್ರಕಟಿಸುವೆ ಎಂದರು. ಯಾವುದೇ ಖಾಯಿಲೆ ಕಾಣಿಸಿಕೊಂಡರೂ ಗ್ರಾಪಂ ವ್ಯಾಪ್ತಿಯಲ್ಲಿ 24 ಗಂಟೆ ವೈದ್ಯರ ಸೇವೆ, ಮತ್ತು ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ. ರೈತ…

Read More

ಮಕ್ಕಳ ಅಶ್ಲೀಲ ವೀಡಿಯೋ ಅಂತರ್ಜಾಲದಲ್ಲಿ ಅಪ್ ಲೋಡ್ ಮಾಡಿದ್ದ ಯುವಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್:

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ನೀಡಿದೆ. ಶಿವಮೊಗ್ಗ ತಾಲೂಕಿನ ದಮ್ಮಳ್ಳಿ ಗ್ರಾಮದ ರಘು (25) ಶಿಕ್ಷೆಗೆ ಒಳಗಾದವನು. ಈತ 2020ರ ಮೇ 6ರಂದು ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದ. ಈ ಸಂಬಂಧ ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ಮಾಹಿತಿ ನೀಡಿತ್ತು.  ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಇಎನ್ ಠಾಣೆ ಇನ್ಸ್ ಪೆಕ್ಟರ್…

Read More

ದೇಶದಲ್ಲಿ ಹಿಂದೂ ಮುಸ್ಲಿಂ ಇಬ್ಬರೂ ಸಹೋದರರಂತೆ ಬಾಳಬೇಕು ಎನ್ನುವುದು ಎಲ್ಲರ ಆಶಯ : ಶಾಸಕ ಹರತಾಳು ಹಾಲಪ್ಪ

ಸಾಗರ: ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ನೀವು ಪಾಕ್‌ಗೆ ಹೋಗಿ ಎನ್ನುವುದು ಅನಿವಾರ್ಯವಾಗುತ್ತದೆ. ಹಿಂದೂ ಮುಸ್ಲಿಂ ಇಬ್ಬರ ಬಾಂಧವ್ಯ ಬೆಸೆಯಬೇಕಾದರೆ ಭಾರತ ನಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳುವುದು ಅಗತ್ಯ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದ್ದಾರೆ. ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಫಲಾನುಭವಿಗಳಿಗೆ ವಸತಿ ಕಾಮಗಾರಿ ಕಾರ್ಯಾದೇಶ ಮತ್ತು ಶೇ. 5 ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್ ವಿತರಣೆ ಮಾಡಿ ಅವರು ಮಾತನಾಡಿದರು. ಮೋದಿಯವರು ದೇಶದ ಸಮಗ್ರತೆಗಾಗಿ…

Read More

ಮಳೆ ಬಂದಾಗ ಕೆಸರು ಗದ್ದೆಯಂತಾಗುವ ಬೆನವಳ್ಳಿ – ಮಸರೂರು ರಸ್ತೆ : ಜನಪ್ರತಿನಿಧಿಗಳೇ ಇನ್ನಾದರೂ ಇತ್ತ ಗಮನಹರಿಸಿ!!!!!

ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ-ಮಸರೂರು-ಆಚಾಪುರ ಸಂಪರ್ಕದ ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯ್ತಿ ರಸ್ತೆಮಳೆ ಬಂದಾಗ ಕೆಸರು ಗದ್ದೆಯಂತಾಗಿ ಸಾರ್ವಜನಿಕರು ಓಡಾಡದ ಸ್ಥಿತಿ ನಿರ್ಮಾಣವಾಗುತ್ತಿದೆ.  ಬೆನವಳ್ಳಿಯಿಂದ ಮಸರೂರು, ಮಾಣಿಕರೆ, ಹಾಲಬಾವಿ, ಕೆಂಚನಾಲ, ಆಲುವಳ್ಳಿ, ಗಾಳಿಬೈಲು, ವಿರಕ್ತಮಠ, ಕಮದೂರು, ಮಾದಾಪುರ, ಕುರುಬರಜಡ್ಡು, ಲಕ್ಕವಳ್ಳಿ, ಕೆರೆಹಿತ್ತಲು, ಗಿಳಾಲಗುಂಡಿ, ಮುರುಘಾಮಠ ಆಚಾಪುರ ಇಸ್ಲಾಂಪುರ ಅಂದಾಸುರ ಹೀಗೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯ ಸಂಪರ್ಕದ ರಸ್ತೆಯಾಗಿದ್ದು ಈ ರಸ್ತೆಯನ್ನು ಕಳೆದ ಹಲವಾರು ವರ್ಷಗಳಿಂದ ಈ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಎಚ್ಚೆತ್ತ ಇಲಾಖೆ : ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಸ್ಥಳಾಂತರ

ತೀರ್ಥಹಳ್ಳಿ : ತಾಲೂಕಿನ ಅರೇಹಳ್ಳಿ ಗ್ರಾಮಪಂಚಾಯಿತಿ ಜೋಡುಕಟ್ಟೆ ಬಯಲು ಎಸ್. ಸಿ ( SC) ಕಾಲೋನಿಯಲ್ಲಿ ಗೊಚ್ಚೆ ಗುಂಡಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಇದ್ದು  ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗಮನಿಸಲಿ ಎಂಬ ವರದಿಯನ್ನು ಮಂಗಳವಾರ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು. ವರದಿಯಾದ 24 ಗಂಟೆಯೊಳಗೆ ಕೊಚ್ಚೆ ಗುಂಡಿಯಲ್ಲಿ ಇದ್ದ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ”ಯನ್ನು ಸೂಕ್ತ  ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ.  ಜನರ ಆರೋಗ್ಯದ…

Read More

ಸ್ನೇಹಿತರಿಬ್ಬರು KGF 2 ಚಲನಚಿತ್ರ ನೋಡಿಕೊಂಡು ಹಿಂದಿರುಗುತಿದ್ದಾಗ KTM ಬೈಕ್ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

KGF 2 ಚಲನಚಿತ್ರವನ್ನು ಶಿವಮೊಗ್ಗದಲ್ಲಿ ನೋಡಿಕೊಂಡು ಹಿಂದಿರುಗುತ್ತಿದ್ದ ಬೈಕ್ ಭದ್ರಾವತಿ ಬಳಿ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಿನ್ನೆ ಸಂಜೆ kgf2 ಚಿತ್ರ ನೋಡಲು ಎನ್ ಆರ್ ಪುರದಿಂದ ಶಿವಮೊಗ್ಗಕ್ಕೆ ಬಂದಿದ್ದ ಇಬ್ಬರು ಸ್ನೇಹಿತರು ಹಿಂದಿರುಗುವಾಗ ಈ ದುರ್ಘಟನೆ ನಡೆದಿದೆ. ಎನ್ ಆರ್ ಪುರ ನಿವಾಸಿ ಶಿವಕುಮಾರ್(28) ಮೃತ ದುರ್ದೈವಿಯಾಗಿದ್ದು ಆತನ ಸ್ನೇಹಿತ ಎನ್ ಆರ್ ಪುರ ವಾಸಿ ಮನೋಜ್ ಎಂಬುವವನಿಗೂ ಸಹ ಗಂಭೀರ ಗಾಯಗಳಾಗಿದ್ದು ಎನ್…

Read More