ಪಿಎಫ಼್ ಐ & ಎಸ್ ಡಿಪಿಐ ನಿಷೇದಕ್ಕೆ ಎಲ್ಲಾ ತಯಾರಿ ನಡೆದಿದೆ : ಶಿಕ್ಷಣ ಸಚಿವ ಡಾ| ಅಶ್ವತ್ ನಾರಾಯಣ್
ಶಿವಮೊಗ್ಗ: ಪಿಎಫ್ಐ, ಎಸ್ ಡಿಪಿಐ ಸಂಘಟನೆ ನಿಷೇಧ ಮಾಡುವ ದಿಕ್ಕಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ನಡೆದಿದೆ. ಅದಕ್ಕೆ ಬೇಕಾದ ಪೂರ್ವಭಾವಿ ತಯಾರಿ, ದಾಖಲೆಗಳ ಸಂಗ್ರಹ ಆಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ್ ನಾರಾಯಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ, ಎಸ್ಡಿಪಿಐ ಸಂಸ್ಥೆಗಳು ಸಮಾಜದಲ್ಲಿ ಸಾಕಷ್ಟು ಗೊಂದಲ ನಿರ್ಮಾಣ ಮಾಡ್ತಿವೆ. ಈ ಬಗ್ಗೆ ಮೇಲ್ನೋಟಕ್ಕೆ ಹೇಳಿಕೆ ಕೊಡೋದಲ್ಲ. ಕಾಂಗ್ರೆಸ್ ಸರಕಾರವಿದ್ದಾಗ ಅವರ ಬದ್ಧತೆ ಏನಿತ್ತು. ಅಧಿಕಾರದಲ್ಲಿ ಇದ್ದಾಗ ಅವರ ಮೇಲಿದ್ದ ಕೇಸ್ ಹಿಂಪಡೆದು ಈಗ…