ಒಬ್ಬಂಟಿ ಮಹಿಳೆಯರಿರುವ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು:

ರಾತ್ರಿ ವೇಳೆ ಒಂಟಿ ಮಹಿಳೆಯರಿದ್ದ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಯುವಕನನ್ನ್ನು ಗ್ರಾಮಸ್ಥರೇ ಹಿಡಿದು ಕೈಕಾಲು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಕೋಟೆ ತಾಂಡದಲ್ಲಿ‌ ನಡೆದಿದೆ.ಕೋಟೆ ತಾಂಡದ ಸುಂದರ್ ನಾಯ್ಕ ಬಂಧಿತ ಆರೋಪಿಯಾಗಿದ್ದಾನೆ. ತಾಂಡದ ಮಹಿಳೆಯೋರ್ವರ ಪತಿ ನಾಲ್ಕು ದಿನದಿಂದ ಮನೆಯಲ್ಲಿಲ್ಲದಿರುವುದನ್ನು ಗಮನಿಸಿದ್ದ ಸುಂದರ್ ನಾಯ್ಕ, ನಿನ್ನೆ ರಾತ್ರಿ ಆ ಮನೆಗೆ ನುಗ್ಗಿದ್ದಾನೆ. ಮಹಿಳೆಯ ಮನೆಗೆ ನುಗ್ಗಿದ ಸುಂದರ್ ನಾಯ್ಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ….

Read More

ಸೋಲಾರ್ ರಿಪೇರಿಗೆ ಬಂದವರಂತೆ ನಟಿಸಿ, ನೀರು ಕೇಳುವ ನೆಪದಲ್ಲಿ ಮಾದಕ ನಶೆಯ ವಸ್ತುವನ್ನು ಎರಚಿ ದರೋಡೆಗೆ ವಿಫಲ ಯತ್ನ..!

ತೀರ್ಥಹಳ್ಳಿ:-ತಾಲ್ಲೂಕಿನ ನೆರಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಬ್ಬಿ ಹೊರಣಿ ಬಳಿಯಲ್ಲಿ ಸೋಮವಾರ  ಸಂಜೆಯ ವೇಳೆಗೆ ಬುಲೆರೋ ಕಾರಿನಲ್ಲಿ  ಬಂದ 6 ಜನರ ದರೋಡೆಕೋರರ ತಂಡ ಮನೆಯೊಂದರ ಬಳಿ ಬಂದು ಸೋಲಾರ್  ರಿಪೇರಿ ಮಾಡುವ ಬಗ್ಗೆ ವಿಚಾರಿಸಿ  ನಂತರ ನೀರನ್ನು ಕೇಳಿದ್ದಾರೆ.  ಮನೆಯಲ್ಲಿದ್ದ ಗೃಹಿಣಿಯೋರ್ವರು  ನೀರು ತಂದಾಗ ಆಕೆಯ ಮೇಲೆ ಮಾದಕ ದ್ರವ್ಯದ ನಶೆಯ ವಸ್ತುವನ್ನು ಎರಚಿ ದರೋಡೆಗೆ ಮುಂದಾದಾಗ ಮನೆಯವರು ದರೋಡೆಗೆ ಯತ್ನಿಸಿದವರ ಕೈ ಕಚ್ಚಿ, ಕೊಡಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ನಂತರ ಕಿರುಚಾಡಿ, ಕೂಗಾಡಿ, ಅಕ್ಕಪಕ್ಕದವರನ್ನು ಕರೆದಿದ್ದಾರೆ….

Read More

ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….

Read More

ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ

ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…

Read More

ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಯಾರ್ಯಾರು ಗಲಭೆಗೆ ಕಾರಣರಾಗಿದ್ದಾರೋ ಬಹುತೇಕ ಎಲ್ಲರ ಬಂಧನವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಗಲಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಗಲಭೆ ಉಂಟುಮಾಡ್ತಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಹಾಗೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗರೀಕರ ಕಂದಾಯ ಪಾವತಿ ಸಮಸ್ಯೆಗೆ ಮುಕ್ತಿ

ಪಟ್ಟಣ ಪಂಚಾಯತಿ ತೀರ್ಥಹಳ್ಳಿಯವರಿಂದ  ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆಗಳ ಬಗ್ಗೆ ನಿನ್ನೆ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ನೀರಿನ ಬಿಲ್ಲಿನ ಸಮಸ್ಯೆಗಳು ಹಾಗೂ ಕಂದಾಯ ಕಟ್ಟಿಸಿಕೊಳ್ಳುವ ಬಗ್ಗೆ ವರದಿ ಬಿತ್ತರಿಸಲಾಗಿತ್ತು. ಈ ವರದಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು ಇಂದಿನಿಂದ ಕಂದಾಯವನ್ನು ಕಟ್ಟಿಸಿಕೊಳ್ಳುವುದರ ಜೊತೆ 5% ರಿಯಾಯಿತಿ ಸಹ ಘೋಷಿಸಿದ್ದಾರೆ.ಈ ಬಗ್ಗೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವಾಹನಗಳಲ್ಲಿ ಅನೌನ್ಸ್ ಮಾಡಲಾಗುತ್ತಿದೆ.  ಇದರಿಂದಾಗಿ ಸಾರ್ವಜನಿಕರು ಪೋಸ್ಟ್ ಮ್ಯಾನ್ ನ್ಯೂಸ್ ಮಾಧ್ಯಮ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ…

Read More

ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರೀಕರ ಸಮಸ್ಯೆ ಕೇಳೋರು ಯಾರು ! ?????

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರಿಕರ ಸಮಸ್ಯೆ ಕೇಳೋ ವ್ಯಕ್ತಿಗಳು ಯಾರು !?  ಹೀಗೊಂದು ಪ್ರೆಶ್ನೆ ಸಾರ್ವಜನಿಕರ ವಲಯದಿಂದ ಕೇಳುತ್ತಿದ್ದು ಇದಕ್ಕೆ ಚುನಾವಣೆಯಲ್ಲಿ ಗೆದ್ದವರಾಗಲಿ ಅಥವಾ ಅಲ್ಲಿನ ಅಧಿಕಾರಿಗಳಾಗಲಿ ಉತ್ತರ ನೀಡಬೇಕಿದೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ಏನು ?    ನೀರಿನ ಬಿಲ್ಲು: ನೀರು ಬಿಲ್ಲು ಬರೀ ಆರಿಯಾರ್ಸ್ ಸೇರಿಸಿ ಬಿಲ್ಲು ಕೊಟ್ಟರೆ ಪರವಾಗಿಲ್ಲ. ಬಿಲ್ಲು ಕೊಡದೇ ಎರಡು ಮೂರು ತಿಂಗಳಿಗೊಮ್ಮೆ ಬಿಲ್ಲು ಕೊಟ್ಟು, ಸ್ಲಾಬ್ ರೇಟು ಜಾಸ್ತಿಯಾಗಿ ನಮ್ಮದಲ್ಲದ ತಪ್ಪಿಗೆ ನಾವು ದಂಡ ಕೊಡೋದು…

Read More

ಕುಂಸಿ ರೈಲ್ವೆ ಹಳಿ ಮೇಲೆ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ ಹಾಗೂ ಕುಂಸಿ ರೈಲ್ವೆ ನಿಲ್ದಾಣಗಳ ನಡುವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಶಿವಮೊಗ್ಗದಿಂದ ಕುಂಸಿಗೆ ಹೋಗುವ ರೈಲ್ವೆ ಮಾರ್ಗದ ಮಧ್ಯೆ ಇವತ್ತು ಬೆಳಗ್ಗೆ ರೈಲ್ವೆ ಇಲಾಖೆ ಸಿಬ್ಬಂದಿ ಹಳಿ ಪರಿಶೀಲನೆಗೆ ತೆರಳಿದ್ದಾಗ ಅಚ್ಚರಿ ಕಾದಿತ್ತು ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.   ಮೃತ ವ್ಯಕ್ತಿಯು ಒಂದು ಸಿಮೆಂಟ್ ಬಣ್ಣದ ಸ್ವೆಟರ್, ಬಿಳಿ ಮತ್ತು ಕೆಂಪು ಬಣ್ಣದ ಚೆಕ್ಸ್ ಶರ್ಟ್, ಕೆಂಪ ಬಣ್ಣದ ನೈಟ್ ಪ್ಯಾಂಟ್,…

Read More

ಕುಗ್ರಾಮ ಬುಲ್ಡೋಜರ್ ಗುಡ್ಡ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ – ಹಳ್ಳಿಯ ಕಡೆ ಕಾರ್ಯಕ್ರಮ :

ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಮಹಾತ್ವಾಕಾಂಕ್ಷಿ ಯೋಜನೆಯೇ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ಕಾರ್ಯಕ್ರಮದ ಮೂಲ ಉದ್ದೇಶ ಎಂದು ತಹಶೀಲ್ದಾರ್ ವಿ ಎಸ್ ರಾಜೀವ್ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಅಯೋಜಿಸಲಾದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ…

Read More

ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ : ಮುರುಘಾ ಮಠದ ಶ್ರೀಗಳು.

ನಿಸ್ವಾರ್ಥ ಸೇವಕನಾಗಿದ್ದು ಹನುಮಂತ ಶ್ರೀರಾಮನಲ್ಲಿಯೇ ಜೀವನ ಕಂಡುಕೊಂಡಿದ್ದ, ರಾಮನಾಮ ತಪದಲ್ಲಿಯೇತನ್ನ ಸರ್ವಸ್ವ ಅಡಗಿದೆ ಎಂಬ ಮನಸ್ಥಿತಿಯಲ್ಲಿ ಜೀವನಕಳೆದ ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ. ಇರುವುದಷ್ಟನ್ನೇ ಆತ್ಮ ಸಂತೋಷದಿಂದ ಅನುಭವಿಸಿ, ಅನಾವಶ್ಯಕ ಆಸೆಗಳಿಗೆ ಬಲಿಯಾಗದೆ ಸಂತೃಪ್ತ ಜೀವನ ಸಾಗಿಸಿದ ಪ್ರೇರಕನಂತೆ ಎಲ್ಲರ ಜೀವನ ಹಸನಾಗಲೀ ಎಂದು ಆನಂದಪುರ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ರಿಪ್ಪನ್‌ಪೇಟೆ ಸಮೀಪದ ಹುಂಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯ ಲೋಕಾರ್ಪಣೆ ಹಾಗು ಆಂಜನೇಯ ಮೂರ್ತಿಯ ಪುನರ್ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮದಲ್ಲಿ…

Read More