ಈಶ್ವರಪ್ಪ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬನಿಂದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ :
ಸಚಿವ ಈಶ್ವರಪ್ಪನವರ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬ ಸಚಿವರ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿ ಇರುವ ಸಚಿವ ಈಶ್ವರಪ್ಪನವರ ಮನೆ ಮುಂದೆ ಮುರುಗ ಎಂಬ ಅಭಿಮಾನಿ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಇದನ್ನು ಕಂಡ ಸುತ್ತಮುತ್ತಲಿನ ಜನ ತಕ್ಷಣ ತಪ್ಪಿಸಿದ್ದಾರೆ.ನೀರು ಸುರಿದು ರಕ್ಷಿಸಿದ್ದಾರೆ. ಸಚಿವ ಈಶ್ವರಪ್ಪ ಮನೆಯಲ್ಲಿಯೇ ಇದ್ದಾಗಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.