ಈಶ್ವರಪ್ಪ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬನಿಂದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ :

ಸಚಿವ ಈಶ್ವರಪ್ಪನವರ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬ ಸಚಿವರ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿ ಇರುವ  ಸಚಿವ ಈಶ್ವರಪ್ಪನವರ ಮನೆ ಮುಂದೆ ಮುರುಗ ಎಂಬ ಅಭಿಮಾನಿ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಇದನ್ನು ಕಂಡ ಸುತ್ತಮುತ್ತಲಿನ ಜನ ತಕ್ಷಣ ತಪ್ಪಿಸಿದ್ದಾರೆ.ನೀರು ಸುರಿದು ರಕ್ಷಿಸಿದ್ದಾರೆ. ಸಚಿವ ಈಶ್ವರಪ್ಪ ಮನೆಯಲ್ಲಿಯೇ ಇದ್ದಾಗಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.

Read More

ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ : ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಣೆ :

ಪ್ರತಿಭಟನೆಗೆ ಮಣಿದ ಕೆ.ಎಸ್​.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ! ಕಮಿಷನ್ ಆರೋಪಕ್ಕೆ ಬಿಜೆಪಿ ಸರ್ಕಾರದ ಬಿಗ್ ವಿಕೆಟ್​ ಡೌನ್​! ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದ ಸಚಿವ ಕೆ.ಎಸ್​.ಈಶ್ವರಪ್ಪ ಇವತ್ತು ಸಂಜೆ ತಮ್ಮ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾಳೆ ದಿನ ಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನ ನೀಡುತ್ತೇನೆ ಎಂದಿದ್ದಾರೆ. ಈ ಮೂಲಕ ಗುತ್ತಿಗೆ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೊದಲ ವಿಕೆಟ್​ ಪತನವಾದಂತಿದೆ. ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಕೇಸ್​ನ ಬೆನ್ನಲ್ಲೆ ಕೆ.ಎಸ್​.ಈಶ್ವರಪ್ಪನವರ…

Read More

ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ : ಕಾರಣವೇನು ಗೊತ್ತೆ???? ಈ ಸುದ್ದಿ ನೋಡಿ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಲವಾಗಿ ಒತ್ತಾಯಿಸುತ್ತಿದೆ. ಈ ಮಧ್ಯೆ ಮಾಧ್ಯಮಗಳ ಜೊತೆ ಮೂರು ದಿನ ಮಾತನಾಡದಿರಲು ಅವರು ತೀರ್ಮಾನಿಸಿದ್ದಾರೆ.  ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುವ ವೇಳೆ ಮಾಧ್ಯಮದವರು ಸಚಿವರ ಪ್ರತಿಕ್ರಿಯೆಗೆ ಮುಂದಾದರು.  ಆಗ ಸಚಿವರು ಮಾಧ್ಯಮದವರನ್ನು ಕಂಡು ನಾನು 3 ದಿನ ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು. ಈ ವೇಳೆ…

Read More

ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…

Read More

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಹಾಗೂ ರಿಪ್ಪನ್ ಪೇಟೆ ಗ್ರಾಮಾಡಳಿತದಿಂದ ಚಿಕ್ಕಬೀರನ ಕೆರೆಗೆ ಕಾಯಕಲ್ಪ:

ರಿಪ್ಪನ್ ಪೇಟೆ : ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಾಮಾಧ್ಯಕ್ಷೆ ಮಂಜುಳಾರವರ ಅಧ್ಯಕ್ಷತೆಯಲ್ಲಿ ಚಿಕ್ಕಬೀರನಕೆರೆ ಕೆರೆ ಹೂಳು ತೆಗೆಯುವ ಬಗ್ಗೆ ಸಾರ್ವಜನಿಕರ ಸಮಾಲೋಚನಾ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸರ್ಕಾರ ಮಾಡದಂತಹ ಅಭಿವೃದ್ದಿ ಕಾರ್ಯಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಶ್ವಾರ್ಥ ಸೇವೆಯ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚು ಆದ್ಯತೆ ನೀಡುವುದರೊಂದಿಗೆ ಕೆರೆಗಳಲ್ಲಿನ ಹೂಳು ತೆಗೆದು ಅಂತರ್ಜಲ ಹೆಚ್ಚಿಸುವ ಕಾರ್ಯದಲ್ಲಿ ಧರ್ಮಸ್ಥಳ…

Read More

ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಸಾಗರ ಪೊಲೀಸರು :

ಸಾಗರ: ಟೌನ್ ಮತ್ತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಚಂದ್ರ ಬಳೆಗಾರ್  ತಂದೆ ಲೇಟ್, ಅಣ್ಣಪ್ಪ, 28 ವರ್ಷ, ಸೆಂಟಿಂಗ್ ಕೆಲಸ ವಾಸ ಉಳವಿ ಗ್ರಾಮ ಸೊರಬ ತಾಲ್ಲೂಕು ಈತನನ್ನು ದಸ್ತಗಿರಿ ಮಾಡಿ, ವಿಚಾರಣೆ ಮಾಡಿದಾಗ, ಆರೋಪಿತನು ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ 2 ಮತ್ತು ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗೌತಮಪುರ ಗ್ರಾಮದಲ್ಲಿ 1 ಮನೆಗಳನ್ನು ಕಳ್ಳತನ ಮಾಡಿದ್ದಾಗಿ ಹೇಳಿಕೆ ನೀಡಿದ್ದರಿಂದ, ಆರೋಪಿತನನ್ನು…

Read More

ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಮಾಡಿದ ನಾಲ್ವರ ಬಂಧನ!!!!!

ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ  ಗೊಠಾಣೆ ಗ್ರಾಮದ  ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ(Sahydari Tiger Reserve) ಬಂಗಾಳ ಮಾನಿಟರ್ ಹಲ್ಲಿಯ (bengal monitor lizard ) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್‌ಗೆ ಪ್ರವೇಶಿಸಿ ಅಪರಾಧ ಎಸಗಿದ್ದಾರೆ.ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನಿಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ…

Read More

ಮರಕ್ಕೆ ಡಿಕ್ಕಿ ಹೊಡೆದ ಟಾಟಾ ಏಸ್ ವಾಹನ : ಸ್ಥಳದಲ್ಲೇ ಮೂವರ ದುರ್ಮರಣ

ಟಾಟಾಏಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ಮಂಗಳವಾರ ತಡ ರಾತ್ರಿ ನಡೆದಿದೆ. ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ ಹನುಮಂತಪ್ಪ (13) ಮೃತ ದುರ್ಧೈವಿಗಳು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿರುವ ಬಸವರಾಜ್, ಹುಚ್ಚರಾಯಪ್ಪ, ಪರಶುರಾಮ, ಕೃಷ್ಣಪ್ಪ, ಜಗದೀಶ, ಚಂದ್ರಪ್ಪ, ಭೀಮಪ್ಪ, ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದು, ವಾಹನ ಚಾಲಕ…

Read More

ಸಚಿವ ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ :

ರಿಪ್ಪನ್ ಪೇಟೆ : ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಘಟನೆಗೆ ಸಂಬಂಧಿಸಿದಂತೆ ಸಚಿವರಾದ ಕೆ.ಎಸ್. ಈಶ್ವರಪ್ಪನವರ ಹೆಸರು ಲಂಚಾರೋಪದಲ್ಲಿ ಪ್ರಸ್ತಾಪವಾಗಿದ್ದು, ಉಲ್ಲೇಖಿಸಿದ ವ್ಯಕ್ತಿಯು ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಘಟನೆಗೆ ಸಚಿವರು ಕಾರಣವೆಂದು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಸಚಿವರು ನೈತಿಕ ಹೊಣೆಹೊತ್ತು ಕೂಡಲೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದ ವತಿಯಿಂದ ನಾಡ ಕಛೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಆಮ್ ಅದ್ಮಿ ಪಕ್ಷದ ತಾಲೂಕ್ ಉಪಾಧ್ಯಕ್ಷರಾದ ಹಸನಬ್ಬ…

Read More

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲಾ : ಸಚಿವ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ‘ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರಪ್ಪ, ವಾಟ್ಸ್ ಆ್ಯಪ್ ನಲ್ಲಿ ಟೈಪ್ ಮಾಡಿರುವ ಡೆತ್ ನೋಟ್ ಬಂದಿದೆ. ಆದರೆ ಸಹಿ ಮಾಡಿರುವ ಯಾವುದೇ ಡೆತ್ ನೋಟ್ ಪತ್ತೆ ಆಗಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಭಷ್ಟಾಚಾರ ಆಗಿಲ್ಲ. ಆದ್ದರಿಂದ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ’ ಎಂದು ಹೇಳಿದರು.  ನಾನು ಸಂತೋಷ್ ಮುಖವನ್ನೇ ನೋಡಿಲ್ಲ….

Read More