ಶಿವಮೊಗ್ಗ: ಪಿಎಫ್ಐ, ಎಸ್ ಡಿಪಿಐ ಸಂಘಟನೆ ನಿಷೇಧ ಮಾಡುವ ದಿಕ್ಕಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ನಡೆದಿದೆ. ಅದಕ್ಕೆ ಬೇಕಾದ ಪೂರ್ವಭಾವಿ ತಯಾರಿ, ದಾಖಲೆಗಳ ಸಂಗ್ರಹ ಆಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ್ ನಾರಾಯಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ, ಎಸ್ಡಿಪಿಐ ಸಂಸ್ಥೆಗಳು ಸಮಾಜದಲ್ಲಿ ಸಾಕಷ್ಟು ಗೊಂದಲ ನಿರ್ಮಾಣ ಮಾಡ್ತಿವೆ. ಈ ಬಗ್ಗೆ ಮೇಲ್ನೋಟಕ್ಕೆ ಹೇಳಿಕೆ ಕೊಡೋದಲ್ಲ. ಕಾಂಗ್ರೆಸ್ ಸರಕಾರವಿದ್ದಾಗ ಅವರ ಬದ್ಧತೆ ಏನಿತ್ತು. ಅಧಿಕಾರದಲ್ಲಿ ಇದ್ದಾಗ ಅವರ ಮೇಲಿದ್ದ ಕೇಸ್ ಹಿಂಪಡೆದು ಈಗ ನಿಷೇಧ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ನವರು ಯಾವ ಲಾಜಿಕ್ನಲ್ಲಿ ಮಾತನಾಡ್ತಿದ್ದಾರೆ ಗೊತ್ತಾಗುತ್ತಿಲ್ಲ ಎಂದರು.
ವಿಎಚ್ಪಿ, ಆರ್ಎಸ್ಎಸ್ ಸಮಾಜದ ಅಭಿವೃದ್ಧಿಗಾಗಿ ಒಳ್ಳೆಯ ಕೆಲಸ ಮಾಡುತ್ತಿವೆ. ಕಾಂಗ್ರೆಸ್ನವರು ಇಂತಹ ಸಂಸ್ಥೆಯನ್ನು ಪಿಎಫ್ ಐ, ಎಸ್ ಡಿಪಿಐ ಸಂಸ್ಥೆಗೆ ಹೋಲಿಸುತ್ತಾರೆ. ಇದರಿಂದ ಅವರ ಮನಸ್ಥಿತಿ ಹೇಗಿದೆ ಎಂಬುದು ಗೊತ್ತಾಗಲಿದೆ. ಗೃಹ ಸಚಿವರಾಗಿದ್ದ ಎಂ.ಬಿ.ಪಾಟೀಲ್ ಅವರಿಗೆ ಆರ್ ಎಸ್ಎಸ್ ಸಂಘಟನೆ ಬಗ್ಗೆ ಸರಿಯಾದ ಅರಿವಿಲ್ಲ ಎಂದರು.
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿರುವ ಪಕ್ಷ. ಆ ಪಕ್ಷದ ಅಧ್ಯಕ್ಷ ಡಿಕೆಶಿ, ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದವರು. ಅವರಿಂದ ನೈತಿಕ ಪಾಠ ಕಲಿಯುವ ಅಗತ್ಯವಿಲ್ಲ. ನಾನು ಸಮಾಜಕ್ಕೋಸ್ಕರ ಕೊಡುಗೆ ಕೊಡಬೇಕು ಅಂತಾ ರಾಜಕಾರಣಕ್ಕೆ ಬಂದಿರುವವನು. ನನ್ನ ಮೇಲೆ ಒಂದೇ ಒಂದು ಭ್ರಷ್ಟಾಚಾರ ಇದ್ದರೆ ಮುಂದೆ ಬರಲಿ. ಈ ಮೊದಲು ಮಾರ್ಕ್ಸ್ ಕಾರ್ಡ್ ಪಡೆಯಲು ಹಣ ಕೊಡಬೇಕಿತ್ತು. ಆದರೆ ನಾವು ಬಂದ ಮೇಲೆ ಅಂತಹ ವ್ಯವಸ್ಥೆ ಹೋಗಲಾಡಿಸಿದ್ದೇವೆ. ಇತಿಹಾಸವೇ ನನ್ನ ಸವಾಲ್, ದೇಶದಲ್ಲಿ ನನ್ನ ಇಲಾಖೆಯಲ್ಲಿ ನಾನು ಮಾಡಿದ ರೀತಿ ಯಾರಾದ್ರೂ ಕೆಲಸ ಮಾಡಿದ್ದರೆ ಅವರು ಹೇಳಿದಂತೆ ರೀತಿ ಕೇಳುವೆ ಎಂದು ಸವಾಲು ಹಾಕಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್