ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಗೊಠಾಣೆ ಗ್ರಾಮದ ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ(Sahydari Tiger Reserve) ಬಂಗಾಳ ಮಾನಿಟರ್ ಹಲ್ಲಿಯ (bengal monitor lizard ) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್ಗೆ ಪ್ರವೇಶಿಸಿ ಅಪರಾಧ ಎಸಗಿದ್ದಾರೆ.ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನಿಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ ಅರಣ್ಯ ಇಲಾಖೆ ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಘಟನೆಯ ಬಗ್ಗೆ ತಿಳಿದು ಬಂದಿದೆ.