ಆರಗದಲ್ಲಿ ನೆಡೆದ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಸಿಗದೇ ಇದ್ದರೆ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ ನಾಥ್ ತಿಳಿಸಿದರು.
ತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರಗದಲ್ಲಿ ನೆಡೆದ ದಲಿತ ಸಮಾಜದ ಮೇಲಿನ ಅತ್ಯಾಚಾರ ಬೇರೆ ಯಾವುದಾದರು ಸಮಾಜದ ಮೇಲೆ ಇಂತಹ ಘಟನೆ ನೆಡೆದಿದ್ದರೆ ಇಸ್ಟೊತ್ತಿಗಾಗಲೇ ನ್ಯಾಯ ಸಿಗುತ್ತಿತ್ತು. ಗ್ರಾಮಪಂಚಾಯಿತಿಯಲ್ಲಿ ಏನೇ ನೆಡೆದರು ಅಲ್ಲಿನ ಸದಸ್ಯರಿಗೆ ಗೊತ್ತಾಗುತ್ತದೆ ಆದರೆ ಒಬ್ಬ ಗೃಹಸಚಿವರಿಗೆ ಗೊತ್ತಿಲ್ಲ ಎಂದರೆ ಏನು ಅರ್ಥ. ಆರಗ ಜ್ಞಾನೇಂದ್ರ ಉಡಾಫೆಗೆ ಹೆಸರುವಾಸಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ಇಲ್ಲಿಯವರೆಗೆ ನಾವು ರೈತರ ಪರ, ದಲಿತರ ಪರ ಎಂದು ಮೈಕ್ ಹಿಡಿದು ಹೇಳಿಲ್ಲ. ಜ್ಞಾನೇಂದ್ರ ತಮ್ಮ ಊರಿನ ದಲಿತರ ಮೇಲೆ ಅತ್ಯಾಚಾರ ನೆಡೆದರು ಏನು ಮಾತನಾಡುತ್ತಿಲ್ಲ ಎಂದರೆ ಏನರ್ಥ. ಮಧ್ಯರಾತ್ರಿಯಲ್ಲಿ ಒಬ್ಬ ಹೆಣ್ಣು ಮಗಳು ಓಡಾಡಬೇಕು ಎಂದು ಗಾಂಧೀಜಿ ಹೇಳುತ್ತಿದ್ದರು.
ಗಾಂಧೀಜಿಯವರ ಕನಸನ್ನು ಬಿಜೆಪಿ ಪಕ್ಷ ಯಾವತ್ತು ನನಸು ಮಾಡುತ್ತದೆ ಎಂದು ಪ್ರೆಶ್ನಿಸಿದರು. ಸಚಿವರು ತಮ್ಮ ಊರಿನ ಜನರಿಗೆ ನ್ಯಾಯ ಕೊಡಿಸೋಕೆ ಆಗಲ್ಲ ಎಂದರೆ ಇನ್ಯಾರಿಗೆ ಇವರು ನ್ಯಾಯ ಕೊಡಿಸುತ್ತಾರೆ. ರಾಜ್ಯಪಾಲರಿಗೆ ನಾನು ಮನವಿ ಮಾಡಿಕೊಳ್ಳುತ್ತೇನೆ ಇಂತಹ ಸಚಿವರು ನಮ್ಮ ರಾಜ್ಯಕ್ಕೆ ಬೇಡ ಇಂತವರನ್ನು ಕಿತ್ತು ಹಾಕಬೇಕು ಎಂದು ತಿಳಿಸಿದರು.
ಹೆಣ್ಣು ಮಕ್ಕಳಿಗೆ ಮೀಸಲಾತಿ ಕೊಡಿ ಎಂದು ಕೇಳಿದರೆ ಆ ಮೀಸಲಾತಿ ಎಂಟು ವರ್ಷವಾದರೂ ಕೊಟ್ಟಿಲ್ಲ ಇಂತಹ ಸರ್ಕಾರ ಯಾಕೆ ಬೇಕು? ಯಾರದ್ದೋ ಮನೆಯಲ್ಲಿ ಒಂದು ಮಗು ಹುಟ್ಟಿದರೆ ಶುಭಕೋರುವ ಪ್ರಧಾನಿ ಮೋದಿಗೆ ಇಂತಹ ವಿಷಯ ಯಾಕೆ ತಿಳಿಯುವುದಿಲ್ಲ. ಬಿಜೆಪಿಯವರು ಯಾಕೆ ತಿಳಿಸುವುದಿಲ್ಲ. ಬಿಜೆಪಿಯವರು 40 % ಕಮಿಷನ್ ತಿಂದು ತೇಗುತ್ತಿದ್ದಿರಲ್ಲ ಇಂತಹ ವಿಷಯದ ಬಗ್ಗೆ ಯಾಕೆ ಮಾತನಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಸ್ತೂರ್ ಮಂಜುನಾಥ್, ಪ್ರಭಾವತಿ ಶ್ಯಾಮಣ್ಣ, ಸುಜಾತ, ವಿಜಯಲಕ್ಷ್ಮಿ, ಸ್ಟೈಲ್ಲಾ ಮಾರ್ಟಿನ್, ಶಬನಮ್ ಸೇರಿ ಹಲವರು ಉಪಸ್ಥಿತರಿದ್ದರು.
ವರದಿ : ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್