ಎಸ್ ಎಸ್ ಎಲ್ ಸಿ ಪಲಿತಾಂಶ : 625 ಕ್ಕೆ 625 ಪಡೆದ 11 ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರದ್ದೇ ಮೇಲುಗೈ

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ಮೂಲಕ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಶೇ.84.60 ಫಲಿತಾಂಶ ದೊರೆತಿದ್ದು ಎ ಗ್ರೇಡ್ ಸ್ಥಾನ ದೊರೆತಿದೆ.

ಅದರಂತೆ ಜಿಲ್ಲೆಯಲ್ಲಿ ಒಟ್ಟು 23136 ಜನ‌ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 19574 ಜನ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಜಿಲ್ಲೆಯ 7 ತಾಲೂಕಿನ ಫಲಿತಾಂಶ ಇಂತಿದೆ:


ತೀರ್ಥಹಳ್ಳಿ :

ತೀರ್ಥಹಳ್ಳಿಯಲ್ಲಿ 1654 ವಿದ್ಯಾರ್ಥಿಗಳಲ್ಲಿ 1516 ಜನ ಮಕ್ಕಳು ತೇರ್ಗಡೆಯಾಗಿದ್ದು ಶೇ.91.66 ರಷ್ಟು ಫಲಿತಾಂಶ ಬಂದಿದೆ. ಜಿಲ್ಲೆಯಲ್ಲಿ ತೀರ್ಥಹಳ್ಳಿ ಅತಿ ಹೆಚ್ಚು ಅಂಕಪಡೆದ ತಾಲೂಕಾಗಿದೆ.

ಹೊಸನಗರ ;

ಹೊಸನಗರದಲ್ಲಿ 1613 ಜನ ಮಕ್ಕಳಲ್ಲಿ 1436 ಮಕ್ಕಳು ತೇರ್ಗಡೆಯಾಗಿದ್ದು ಶೇ.89.03 ರಷ್ಟು ಫಲಿತಾಂಶ ಬಂದಿದೆ

ಸಾಗರ :

ಸಾಗರದಲ್ಲಿ 3043 ಜನ ವಿದ್ಯಾರ್ಥಿಗಳಲ್ಲಿ 2657 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು,ಶೇ. 87.32 ರಷ್ಟು ಫಲಿತಾಂಶ ಬಂದಿದೆ.

ಸೊರಬ:

ಸೊರಬದಲ್ಲಿ 2592 ಮಕ್ಕಳಲ್ಲಿ 2188 ಜನ ಮಕ್ಕಳು ತೇರ್ಗಡೆಯಾಗಿದ್ದು ಶೇ. 84.41 ಮಕ್ಕಳು ಉತ್ತೀರ್ಣರಾಗಿದ್ದಾರೆ.

ಭದ್ರಾವತಿ :

ಭದ್ರಾವತಿಯಲ್ಲಿ 4186 ಜನ ಮಕ್ಕಳಲ್ಲಿ 3497 ಜನ ತೇರ್ಗಡೆಯಾಗಿದ್ದು ಶೇ.83.54 ರಷ್ಟು ಫಲಿತಾಂಶ ಬಂದಿದೆ.

ಶಿವಮೊಗ್ಗ:

ಶಿವಮೊಗ್ಗದಲ್ಲಿ 6671 ಜನ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಇದರಲ್ಲಿ 5501 ಜನ ಮಕ್ಕಳು ಉತ್ತೀರ್ಣರಾಗಿದ್ದಾರೆ. ಶೇ. 82.46 ಮಕ್ಕಳು ತೇರ್ಗಡೆಯಾಗಿದ್ದಾರೆ.

ಶಿಕಾರಿಪುರ:

ಶಿಕಾರಿಪುರದಲ್ಲಿ 3377 ಜನ ಮಕ್ಕಳಲ್ಲಿ 2779 ಮಕ್ಕಳಲ್ಲಿ ಶೇ.82.29 ಜನ ಮಕ್ಕಳು ತೇರ್ಗಡೆಯಾಗಿದ್ದಾರೆ.



625ಕ್ಕೆ 625 ಅಂಕಗಳನ್ನು ಪಡೆದ ಜಿಲ್ಲೆಯ 11 ವಿದ್ಯಾರ್ಥಿಗಳು.

ಈ ಬಾರಿಯ ಎಸೆಸೆಲ್ಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. 11 ವಿದ್ಯಾರ್ಥಿಗಳು 625 ಗಳಿಗೆ 625 ಅಂಕಗಳನ್ನು ಪಡೆದುಕೊಂಡಿದ್ದಾರೆ. ಅದರಲ್ಲಿ 10 ಜನ ವಿದ್ಯಾರ್ಥಿನಿಯರು

625ಕ್ಕೆ 625 ಪಡೆದ ವಿದ್ಯಾರ್ಥಿಗಳು:

– ಅಶೋಕ ನಗರದ ಅನನ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಎಚ್.ಎನ್. ಅನನ್ಯ ಹಾಗೂ ಸಿ. ಪಂಚಮಿ

– ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಪ್ರೌಢಶಾಲೆಯ ಆರ್. ಪಂಚಮಿ

– ವಿನೋಬನಗರದ ವಿಕಾಸ ವಿದ್ಯಾಸಂಸ್ಥೆಯ ಎಚ್.ಆರ್. ಪ್ರಜ್ಞಾ

– ಗೋಪಾಳದ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿ.ಆರ್. ಭೂಮಿಕಾ


– ಭದ್ರಾವತಿ:ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಪ್ರತೀಕ್ಷಾ ದಯಾನಂದ್ ಮತ್ತು ಶ್ರೀಆದಿಚುಂಚನಗಿರಿ ವಿದ್ಯಾವರ್ಧಕ ಪ್ರೌಢಶಾಲೆಯ ಪ್ರೇರಣಾ

– ಶಿಕಾರಿಪುರ:ಬನಸಿರಿ ಲಯನ್ಸ್ ಶಾಲೆಯ ಎಸ್.ಎನ್. ರಕ್ಷಿತಾ

– ತೀರ್ಥಹಳ್ಳಿ:ವಾಗ್ದೇವಿ ಶಾಲೆಯ ಜೆ. ಸೃಷ್ಠಿ

– ಸೊರಬ:ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ
ಎಸ್. ಸಮೀಕ್ಷಾ

– ಸಾಗರ:ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ. ಕೆ.ಆರ್. ವಿಕಾಸ್,
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

1 hour ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

2 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

2 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

9 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

13 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

13 hours ago